ಹುಲ್ಲಿನ ಛಾವಣಿಯಲ್ಲಿ ಆರಂಭವಾದ ಶಾಲೆಗೀಗ 107ರ ಸಂಭ್ರಮ

ಬಡಗ ಎಕ್ಕಾರು ದ.ಕ.ಜಿಲ್ಲಾ ಪಂಚಾಯತ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

Team Udayavani, Nov 11, 2019, 5:06 AM IST

30270411BAJ1

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಬಜಪೆ: 1880ರಲ್ಲಿ ಬ್ರಿಟಿಷರು ದೇಶವನ್ನು ಆಳ್ವಿಕೆ ನಡೆಸುತ್ತಿದ್ದ ಕಾಲವದು. ಈ ಸಮಯದಲ್ಲಿ ಜಮೀನಾªರರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ನಿಟ್ಟಿನಲ್ಲಿ ಎಕ್ಕಾರಿನ ನಳಿನಿ ನದಿ ದಂಡೆಯ ಬಡಗು ಎಕ್ಕಾರಿನಲ್ಲಿ ಕಾಳಮ್ಮ ಹೆಗ್ಗಡ್ತಿಯವರು ಮಣ್ಣಿನ ಗೋಡೆಯ ಮುಳಿಹುಲ್ಲಿನ ಛಾವಣಿಯಲ್ಲಿ ಪಾಠಶಾಲೆಯನ್ನು ಆರಂಭಿಸಿದರು. ಮುಂದೆ ಈ ಶಾಲೆಯು ಕಾಳಮ್ಮ ಶಾಲೆ ಎಂದೇ ಪ್ರಸಿದ್ಧಿ ಪಡೆಯಿತು.

1912ರಲ್ಲಿ ತಾಲೂಕು ಬೋರ್ಡ್‌ಗೆ ಸೇರ್ಪಡೆ
ಕಾವರಮನೆ ಅಣ್ಣಪ್ಪ ಹೆಗ್ಗಡೆಯವರು 1910ರಲ್ಲಿ ಈ ಶಾಲೆಯನ್ನು ಸ್ವಂತ ಕಟ್ಟಡದಲ್ಲಿ ನಿರ್ಮಿಸಿದರು. 1912ರಲ್ಲಿ ಶಾಲೆಯನ್ನು ತಾಲೂಕು ಬೋರ್ಡ್‌ಗೆ ಸೇರ್ಪಡೆಗೊಳಿಸಲಾಯಿತು. ಇಲ್ಲಿಂದ ಸಾಕ್ಷರತಾ ಕ್ರಾಂತಿ ಶಕೆ ಆರಂಭವಾಯಿತು. ಆ ವರ್ಷದಿಂದಲೇ ಎಲ್ಲ ಮಕ್ಕಳಿಗೂ ವಿದ್ಯಾಭ್ಯಾಸ ಪ್ರಾರಂಭವಾಯಿತು. ಏಕೋಪಾಧ್ಯಾಯ ಶಾಲೆಯ ಮೊದಲ ಮುಖ್ಯೋಪಾಧ್ಯಾಯರಾಗಿ ರಾಮಯ್ಯ ಮೇಸ್ಟ್ರೆ ಸೇವೆ ಸಲ್ಲಿಸಿದ್ದರು. 1947ರ ಅನಂತರ ಈ ಶಾಲೆಗೆ ಬಡಗ ಎಕ್ಕಾರು ಕಿರಿಯ ಪ್ರಾಥಮಿಕ ಸರಕಾರಿ ಶಾಲೆಯೆಂದು ಕರೆಯಲಾಯಿತು. ಇಲ್ಲಿ 1ರಿಂದ 5ನೇ ತರಗತಿಯ ತನಕ ಶಿಕ್ಷಣ ನೀಡಲಾಗುತ್ತಿತ್ತು. 1998ರಲ್ಲಿ 7ನೇ ತರಗತಿಯವರೆಗೆ ವಿಸ್ತರಣೆಗೊಂಡಿತು.

ಬಡಗ ಎಕ್ಕಾರಿನ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು 2012-13ರಲ್ಲಿ ಶತಮಾನೋತ್ಸವವನ್ನು ಆಚರಿಸಿಕೊಂಡಿತು. ಅಗರಗುತ್ತು ದಿ| ಪದ್ಮಾವತಿ ಎಲ್‌. ರೈ ಅವರು 0.77 ಎಕ್ರೆ ಸ್ಥಳವನ್ನು ಶಾಲೆಗೆ ದಾನಪತ್ರದ ಮೂಲಕ ನೀಡಿದ್ದಾರೆ. ಮುಖ್ಯ ಶಿಕ್ಷಕರಾಗಿದ್ದ ಡಿ.ಎನ್‌. ರಾಘವ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿವೆ. ಶಾಲೆಗೆ ಹೋಬಳಿ ಮಟ್ಟದ ಅತ್ಯುತ್ತಮ ಶಾಲಾಭಿವೃದ್ಧಿ ಸಮಿತಿ ಪ್ರಶಸ್ತಿಯು ಕೂಡ ಲಭಿಸಿದೆ.ಪ್ರಸ್ತುತ 5 ಶಿಕ್ಷಕರಿದ್ದು 92 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಕಟೀಲು ದಿ| ಗೋಪಾಲಕೃಷ್ಣ ಆಸ್ರಣ್ಣ, ದಿ| ಜಿ.ಸಿ. ಕುಕ್ಯಾನ್‌, ವೈ. ರಮಾನಂದ ರಾವ್‌, ಮೋನಪ್ಪ ಶೆಟ್ಟಿ ಎಕ್ಕಾರು, ಡಾ| ರಾಮದಾಸ್‌ನಾಯಕ್‌, ನ್ಯಾಯಾಧೀಶ ಶ್ರೀನಿವಾಸ್‌, ಡಾ| ಗಣನಾಥ ಎಕ್ಕಾರು, ಡಾ| ಪದ್ಮನಾಭ ಭಟ್‌, ಮುಂಬಯಿ ಉದ್ಯಮಿ ಆನಂದ ಶೆಟ್ಟಿ, ಡಾ| ಪ್ರಭಾಕರ ನಾಯಕ್‌ ಮೊದಲಾದವರು ಈ ಶಾಲೆಯ ಹಳೆ ವಿದ್ಯಾರ್ಥಿಗಳು.

ಶಾಲೆಯ ಶತಮಾನೋತ್ಸವದ ನೆನಪಿಗಾಗಿ ಶತಮಾನೋತ್ಸವ ಸಮಿತಿಯನ್ನು ರಚಿಸಿ, ಅದರ ಅಧ್ಯಕ್ಷ ರತ್ನಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಹಳೆವಿದ್ಯಾರ್ಥಿ ಹಾಗೂ ಎಲ್ಲರ ಸಹಕಾರದೊಂದಿಗೆ ಶತಮಾನೋತ್ಸವ ಕಟ್ಟಡವನ್ನು ನಿರ್ಮಿಸಲಾಯಿತು. ಕೆಳಅಂತಸ್ತಿನಲ್ಲಿ ತರಗತಿಯ ಕೋಣೆಗಳು ಹಾಗೂ ಒಂದನೇ ಮಹಡಿಯಲ್ಲಿ ಶಾಲಾ ಸಭಾಭವನವನ್ನು ನಿರ್ಮಿಸಲಾಯಿತು. ಹೊಸತಾದ ಬಯಲು ರಂಗಮಂಟಪ ಈ ಸಂದರ್ಭ ನಿರ್ಮಿಸಲಾಯಿತು. ಪ್ರಸ್ತುತ ಶಾಲೆಯಲ್ಲಿ ಕೃಷಿ ತೋಟ ಇದ್ದು ಇದರಲ್ಲಿ ಬಾಳೆ, ಪಪ್ಪಾಯ, ಬಸಳೆ, ಅಲಸಂಡೆ ಬೆಳೆಸಲಾಗುತ್ತದೆ.

ಮರಳಿನ ಮೇಲೆ ಅಕ್ಷರಾಭ್ಯಾಸ
ಮೊದಲಿಗೆ ನೆಲದ ಮೇಲೆ ತೆಳು ಮರಳನ್ನು ಹರಡಿ ಅದರ ಮೇಲೆ ಬೆರಳುಗಳಿಂದ ಅಕ್ಷರ ಅಭ್ಯಾಸ ಮಾಡಿಸಲಾಗುತ್ತಿತ್ತು ಮತ್ತು ಹಂಗರಕ ಗಿಡದ ಕೆಂಪು ಕಾಯಿಗಳನ್ನು ಪೋಣಿಸಿ ಅಕ್ಷರಗಳನ್ನು ಬರೆಸಲಾಗುತ್ತಿತ್ತು. ಮಕ್ಕಳಿಗೆ ಕಂಠಪಾಠ ಬಂದ ಮೇಲೆಯೇ ಅಕ್ಷರಗಳನ್ನು ಬರೆಸುತ್ತಿದ್ದರು. ಅಂದು ಕಟೀಲು, ಮಚ್ಚಾರು, ಮುಚ್ಚಾರು, ಶಿಬರೂರು, ಕುತ್ತೆತ್ತೂರು, ಪೆರ್ಮುದೆ, ಕತ್ತಲ್‌ಸಾರ್‌ನಿಂದ ವಿದ್ಯಾರ್ಥಿಗಳು ಈ ಶಾಲೆಗೆ ಶಿಕ್ಷಣಕ್ಕಾಗಿ ಬರುತ್ತಿದ್ದರು.

ಶತಮಾನ ಪೂರೈಸಿದ ಶಾಲೆಯು ಊರಿನ ಹೆಮ್ಮೆಯ ವಿದ್ಯಾ ದೇಗುಲವಾಗಿದೆ. ಹಳೆವಿದ್ಯಾರ್ಥಿ ಸಂಘ, ಹಾಗೂ ಶಾಲಾಭಿವೃದ್ಧಿ ಸಮಿತಿ ಶಾಲಾ ಪ್ರಗತಿಗೆ ಬೆನ್ನೆಲುಬಾಗಿ ನಿಂತಿರುವುದು ಸಂತಸದ ವಿಚಾರವಾಗಿದೆ.
-ಶಶಿಪ್ರಭಾ ಬಾೖ ಕೆ.,
ಪ್ರಭಾರ ಶಾಲಾ ಮುಖ್ಯೋಪಾಧ್ಯಾಯಿನಿ

ಈ ಶಾಲೆಯಲ್ಲಿ ನನ್ನ ವಿದ್ಯಾಭ್ಯಾಸಕ್ಕೆ ಒಳ್ಳೆಯ ಆರಂಭ ಸಿಕ್ಕಿತು. ಗ್ರಾಮೀಣ ಪ್ರದೇಶದಲ್ಲಿ ವೈದ್ಯರೇ ಇಲ್ಲದ ಕಾಲದಲ್ಲಿ ನಾನು ವೈದ್ಯನಾಗಿ ಪಾಸಾಗಿ ಬಂದಿದ್ದೆ. ನನ್ನ ಮೊದಲ ವೃತ್ತಿ ಜೀವನ ಊರಿನಲ್ಲಿ ಸೇವೆ ನೀಡುವ ಮೂಲಕ ಆರಂಭಿಸಿದ್ದೆ. ಇದು ನನ್ನ ಈ ಶಾಲಾ ಶಿಕ್ಷಣದಿಂದ ಸಾಧ್ಯವಾಗಿದೆ.
ಡಾ| ರಾಮದಾಸ್‌ ನಾಯಕ್‌, ಮುಖ್ಯಸ್ಥರು. ಪೆಥಾಲಜಿ ವಿಭಾಗ , ಯೇನಪೊಯ ಮೆಡಿಕಲ್‌ ಕಾಲೇಜು,

ಸುಬ್ರಾಯ ನಾಯಕ್‌, ಎಕ್ಕಾರು

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.