Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

ದ.ಕ, ಉಡುಪಿ ಜಲ್ಲೆಗಳಲ್ಲಿಯೂ ದತ್ತು ಮಕ್ಕಳಿಗೆ ಬೇಡಿಕೆ ಹೆಚ್ಚಳ

Team Udayavani, Dec 9, 2023, 7:15 AM IST

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

ಮಂಗಳೂರು: ದತ್ತು ಮಕ್ಕಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಈಗ ಇರುವ ದತ್ತು ಕೇಂದ್ರಗಳ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಮಂಗಳೂರು, ಬೆಳಗಾವಿ, ಬೀದರ್‌, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರಿನಲ್ಲಿ “ಸರಕಾರಿ ವಿಶೇಷ ದತ್ತು ಸಂಸ್ಥೆ’ಗಳು ಶೀಘ್ರ ಆರಂಭವಾಗಲಿವೆ.

ದ.ಕ. ಜಿಲ್ಲೆಯ ಪುತ್ತೂರಿನಲ್ಲಿ “ಶ್ರೀ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ದತ್ತು ಕೇಂದ್ರ’ವಿದ್ದು 2010ರಿಂದ ಕಾರ್ಯಾಚರಿಸುತ್ತಿದೆ. ಇದು 10 ಮಕ್ಕಳ ಸಾಮರ್ಥ್ಯ ಹೊಂದಿದೆ. ಆದರೆ ಕೆಲವೊಮ್ಮೆ ಹೆಚ್ಚು ಮಕ್ಕಳನ್ನು ಪಾಲನೆ ಮಾಡಬೇಕಾಗುವುದರಿಂದ ಹೆಚ್ಚುವರಿ ಕೇಂದ್ರಕ್ಕೆ ಬೇಡಿಕೆ ಇತ್ತು. ಜಿಲ್ಲೆಗೆ ಮಂಜೂರಾದ “ಸರಕಾರಿ ವಿಶೇಷ ದತ್ತು ಸಂಸ್ಥೆ’ ಬೋಂದೆಲ್‌ನಲ್ಲಿ ಶೀಘ್ರ ಕಾರ್ಯಾರಂಭಿಸಲಿದ್ದು ಇದು ಕೂಡ 10 ಮಕ್ಕಳ ಸಾಮರ್ಥ್ಯ ಹೊಂದಿದೆ. ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿರುವ “ಶ್ರೀಕೃಷ್ಣಾನುಗ್ರಹ ದತ್ತು ಕೇಂದ್ರ’ 30 ಮಕ್ಕಳ ಸಾಮರ್ಥ್ಯ ಹೊಂದಿದ್ದು ಸದ್ಯ ಭರ್ತಿಯಾಗಿದೆ. ಇಲ್ಲಿಗೂ ಮತ್ತೊಂದು ಕೇಂದ್ರದ ಬೇಡಿಕೆ ಇದೆ.

264 ಮಕ್ಕಳ ದತ್ತು
ದ.ಕ. ಜಿಲ್ಲೆಯಿಂದ 166 ಮತ್ತು ಉಡುಪಿ ಜಿಲ್ಲೆಯಿಂದ 98 ಸೇರಿದಂತೆ ಒಟ್ಟು 264 ಮಕ್ಕಳನ್ನು ದತ್ತು ನೀಡಲಾಗಿದೆ. ಇದರಲ್ಲಿ ವಿಶೇಷ ಮಕ್ಕಳನ್ನು ವಿದೇಶಿಯರು ದತ್ತು ಪಡೆದುಕೊಂಡಿದ್ದಾರೆ.

7 ವರ್ಷಗಳ ಕಾಯುವಿಕೆ
ದ.ಕ. ಜಿಲ್ಲೆಯಲ್ಲಿ ಸದ್ಯ ಸುಮಾರು 400 ಮಂದಿ ಸದ್ಯ ದತ್ತು ಮಕ್ಕಳಿಗೆ ಬೇಡಿಕೆ ಇಟ್ಟಿದ್ದಾರೆ. ಕೆಲವರು 7ರಿಂದ 8 ವರ್ಷಗಳ ಹಿಂದೆಯೇ ನೋಂದಣಿ ಮಾಡಿ ಕಾಯುತ್ತಿದ್ದಾರೆ. 2 ವರ್ಷದವರೆಗಿನ ಮಗು ದೊರೆಯಲು ಸುಮಾರು ಮೂರುವರೆ ವರ್ಷ, ಅದಕ್ಕಿಂತ ಹೆಚ್ಚು ವಯಸ್ಸಿನ ಮಕ್ಕಳನ್ನು ದತ್ತು ಪಡೆಯಲು 7ರಿಂದ 8 ವರ್ಷಗಳ ವರೆಗೆ ಕಾಯುವ ಸ್ಥಿತಿ ಇದೆ. ಉಡುಪಿ ಜಿಲ್ಲೆಯಲ್ಲಿ ಸದ್ಯ ಸುಮಾರು 330 ಮಂದಿ ದತ್ತು ಮಕ್ಕಳಿಗಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ನಿಯಮಾವಳಿ ಬದಲಾವಣೆ
ಮಕ್ಕಳ ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಇತ್ತೀಚೆಗೆ ಬದಲಿಸಲಾಗಿದ್ದು ಮಕ್ಕಳ ದತ್ತು ಆದೇಶ ಅಧಿಕಾರವನ್ನು ಸಿವಿಲ್‌ ನ್ಯಾಯಾಲಯಗಳಿಂದ ಜಿಲ್ಲಾಧಿಕಾರಿ ನ್ಯಾಯಾಲಯಗಳಿಗೆ ವರ್ಗಾಯಿಸಲಾಗಿದೆ. ಇದರಿಂದಾಗಿ ದತ್ತು ಸ್ವೀಕರಿಸುವ ಪೋಷಕರ “ಕಾಯುವಿಕೆ’ ಕಡಿಮೆಯಾಗುವ ನಿರೀಕ್ಷೆ ಇದೆ. ಮಕ್ಕಳ ದತ್ತು ಸ್ವೀಕಾರಕ್ಕೆ ನೋಂದಣಿಯಾಗಿ ವರ್ಷಗಳ ಕಾಲ ಕಾದು ಅನಂತರ ಮಕ್ಕಳು ಲಭ್ಯವಾದರೂ ಕೆಲವು ಜಿಲ್ಲೆಗಳಲ್ಲಿ ಸಿವಿಲ್‌ ನ್ಯಾಯಾಲಯದಿಂದ ದತ್ತು ಆದೇಶ (ಅಡಾಪ್ಷನ್‌ ಆರ್ಡರ್‌) ಪಡೆಯಲು ಮತ್ತೆ ಹಲವಾರು ತಿಂಗಳು ಕಾಯಬೇಕಿತ್ತು. ಈ ರೀತಿಯ ವಿಳಂಬ ತಡೆಯುವುದಕ್ಕಾಗಿ ನಿಯಮಾವಳಿಯಲ್ಲಿ ತಿದ್ದುಪಡಿ ಮಾಡಲಾಗಿದ್ದು ಅದರಂತೆ ದತ್ತು ಆದೇಶ ನೀಡುವ ಅಧಿಕಾರ ಡಿಸಿ ಕೋರ್ಟ್‌(ಜಿಲ್ಲಾಧಿಕಾರಿ ನ್ಯಾಯಾಲಯ)ಗೆ ನೀಡಲಾಗಿದೆ. ಇದರಿಂದಾಗಿ 2 ತಿಂಗಳಿನ ಒಳಗೆ ದತ್ತು ಆದೇಶ ಪಡೆಯಬಹುದಾಗಿದೆ.

ವಯಸ್ಸಿನ ಮಿತಿ ಇಳಿಕೆ
2 ವರ್ಷದ ವರೆಗಿನ ಮಕ್ಕಳನ್ನು ದತ್ತು ಸ್ವೀಕರಿಸುವ ಪೋಷಕರ (ದಂಪತಿ) ಒಟ್ಟು ವಯಸ್ಸಿನ ಮಿತಿಯನ್ನು 90 ವರ್ಷದಿಂದ 85 ವರ್ಷಕ್ಕೆ ಇಳಿಸಲಾಗಿದೆ. ಅಲ್ಲದೆ 2 ವರ್ಷದವರೆಗಿನ ಮಕ್ಕಳನ್ನು ದತ್ತು ಸ್ವೀಕರಿಸುವ ಏಕ ಪೋಷಕರ ಗರಿಷ್ಠ ವಯಸ್ಸನ್ನು 45ರಿಂದ 40ಕ್ಕೆ ಇಳಿಸಲಾಗಿದೆ. ಅನೇಕ ಮಂದಿ ಪೋಷಕರು ನಿಗದಿತ ವಯಸ್ಸು ದಾಟಿದ ಮೇಲೆ ದತ್ತು ಮಕ್ಕಳಿಗೆ ಬೇಡಿಕೆ ಸಲ್ಲಿಸುತ್ತಿರುವುದು ಕಂಡುಬಂದಿದೆ. ಆದರೆ ಪೋಷಕರು 110 ವರ್ಷ(ಇಬ್ಬರ ಒಟ್ಟು ವಯಸ್ಸು)ದ ವರೆಗೆ, ಏಕಪೋಷಕರು ಗರಿಷ್ಠ 55 ವರ್ಷ ವಯಸ್ಸಿನವರೆಗೆ ಮಾತ್ರ ದತ್ತು ಮಕ್ಕಳನ್ನು ಪಡೆಯಲು ಅವಕಾಶವಿದೆ.

http://www.cara.wcd.gov.in ಅಥವಾ ಮಕ್ಕಳ ರಕ್ಷಣಾ ಘಟಕ, ದತ್ತುಕೇಂದ್ರಗಳು ಅಥವಾ ಶಿಶು ಅಭಿವೃದ್ಧಿ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

ದತ್ತು ಮಕ್ಕಳಿಗೆ ಬೇಡಿಕೆ ಹೆಚ್ಚುತ್ತಿದೆ. ದತ್ತು ಪಡೆಯುವ ಪೋಷಕರು ಮತ್ತು ಮಕ್ಕಳ ಹಿತದೃಷ್ಟಿಯಿಂದ ರಾಷ್ಟ್ರ ಮಟ್ಟದಲ್ಲಿಯೇ ನಿಯಮಾವಳಿ ತಿದ್ದುಪಡಿ ಮಾಡಲಾಗಿದೆ. ಕಾನೂನುಬಾಹಿರ ದತ್ತು ಸ್ವೀಕಾರ ಶಿಕ್ಷಾರ್ಹ ಅಪರಾಧ. ಇದರಿಂದ ಆಪತ್ತು ಉಂಟಾಗುತ್ತದೆ. ಈ ಬಗ್ಗೆ ತಿಳಿವಳಿಕೆ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ.
– ಕುಮಾರ್‌,
ದ.ಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.