ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ನ್ಯಾಕ್‌ ಮಾನ್ಯತೆಯತ್ತ

ದಕ್ಷಿಣ ಕನ್ನಡ, ಉಡುಪಿ, ಕೊಡಗಿನ 22 ಕಾಲೇಜುಗಳಿಗೆ ಮನ್ನಣೆ

Team Udayavani, Jan 24, 2023, 7:22 AM IST

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ನ್ಯಾಕ್‌ ಮಾನ್ಯತೆಯತ್ತ

ಮಂಗಳೂರು: ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಡ್ಡಾಯ ವಾಗಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಪರಿಷತ್‌ (ನ್ಯಾಕ್‌) ಮಾನ್ಯತೆ ಪಡೆಯಬೇಕು ಎನ್ನುವ ಕಾಲೇಜು ಶಿಕ್ಷಣ ಇಲಾಖೆಯ ಸೂಚನೆಯಂತೆ ಮಂಗಳೂರು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯ ಕಾಲೇಜುಗಳೂ ಮಾನ್ಯತೆ ಪಡೆಯುತ್ತಿವೆ. ಬಹುತೇಕ ಕಾಲೇಜು ಗಳು ಉತ್ತಮ ದರ್ಜೆಯನ್ನೇ ಪಡೆದಿವೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಟ್ಟು 37 ಸರಕಾರಿ ಪ್ರ. ದ. ಕಾಲೇಜು ಗಳಿದ್ದು, 22 ಕಾಲೇಜುಗಳು ಈಗಾಗಲೇ ಮಾನ್ಯತೆ ಪಡೆದಿವೆ. 3 ಕಾಲೇಜುಗಳಿಗೆ ನ್ಯಾಕ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಒಂದು ಕಾಲೇಜು ಫಲಿತಾಂಶ (ಗ್ರೇಡ್‌) ನಿರೀಕ್ಷೆಯಲ್ಲಿದೆ. 7 ಕಾಲೇಜುಗಳಿಗೆ ನ್ಯಾಕ್‌ ಪೀರ್‌ ತಂಡದ ಭೇಟಿಗೆ ದಿನಾಂಕ ನಿಗದಿಯಾಗಿದೆ.

ಯುಜಿಸಿ ಸೇರಿದಂತೆ ಸರಕಾರದ ವಿವಿಧ ಅನುದಾನಗಳು, ಸೌಲಭ್ಯಗಳು ದೊರೆಯಬೇಕಾದರೆ ನ್ಯಾಕ್‌ ಮಾನ್ಯತೆ ಕಡ್ಡಾಯ. ಈ ಮಾನ್ಯತೆ 5 ವರ್ಷಗಳ ಅವಧಿಯದ್ದಾಗಿದ್ದು, ಬಳಿಕ ಕಾಲೇಜುಗಳು ಮತ್ತೆ ಮೌಲ್ಯಮಾಪನಕ್ಕೆ ಒಳಗಾಗಬೇಕು. ಕಾಲೇಜುಗಳಿಗೆ ಒಂದು ಬಾರಿ ಮೌಲ್ಯಾಂಕನಕ್ಕೆ ಒಳಗಾಗಲು ಸುಮಾರು 5 ಲಕ್ಷ ರೂ. ವರೆಗೆ ಅಗತ್ಯವಿದ್ದು, ಸರಕಾರವೇ ಈ ಅನುದಾನ ಬಿಡುಗಡೆ ಮಾಡುತ್ತಿದೆ.

ನಾಲ್ಕು ಕಾಲೇಜುಗಳು ಬಾಕಿ
ನ್ಯಾಕ್‌ ಪರಿಶೀಲನೆಗೆ ಒಳಪಡಲು ಪ್ರಸ್ತುತ ನಾಲ್ಕು ಕಾಲೇಜುಗಳು ಮಾತ್ರ ಬಾಕಿ ಉಳಿದಿವೆ. ಮಡಿಕೇರಿ ಸ.ಪ್ರ. ದರ್ಜೆ ಕಾಲೇಜು, ಮಡಿಕೇರಿ ಸ.ಪ್ರ.ದ. ಮಹಿಳಾ ಕಾಲೇಜು, ಪುತ್ತೂರು ಸ.ಪ್ರ.ದ. ಮಹಿಳಾ ಕಾಲೇಜು ಮತ್ತು ಬಂಟ್ವಾಳ ಕನ್ಯಾನ ಸ.ಪ್ರ. ದರ್ಜೆ ಕಾಲೇಜುಗಳು ಇನ್ನಷ್ಟೇ ಮಾನ್ಯತೆ ಪಡೆಯಬೇಕಾಗಿದೆ. ಈ ಕಾಲೇಜುಗಳು ಮೂಲ ಸೌಕರ್ಯದಲ್ಲಿ ಹಿಂದೆ ಉಳಿದಿದ್ದು, ಇದರಿಂದಾಗಿ ನ್ಯಾಕ್‌ಗೆ ಹೋಗಲು ಹಿಂದೇಟು ಹಾಕಿವೆ.

ಬಲ್ಮಠ ಏಕೈಕ “ಎ’ ಗ್ರೇಡ್‌ ಕಾಲೇಜು
ಮಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯಲ್ಲಿ ಬಲ್ಮಠ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಸ್ತುತ “ಎ’ ಗ್ರೇಡ್‌ ಪಡೆದಿರುವ ಏಕೈಕ ಕಾಲೇಜು. ಇತ್ತೀಚೆಗಷ್ಟೇ ಈ ಮಾನ್ಯತೆ ತನ್ನದಾಗಿಸಿಕೊಂಡಿದೆ. ಉಳಿದಂತೆ ಕುಂದಾಪುರದ ಶಂಕರನಾರಾಯಣ, ಬಾಕೂìರಿನ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಕಾಲೇಜು, ಹೆಬ್ರಿ ಸರಕಾರಿ ಕಾಲೇಜು ಮತ್ತು ಮಂಗಳೂರಿನ ಕಾವೂರು ಸರಕಾರಿ ಪ್ರ.ದ. ಕಾಲೇಜುಗಳು “ಬಿ++’ ಗ್ರೇಡ್‌ ಪಡೆದಿವೆ. ಪುತ್ತೂರು ಬೆಟ್ಟಂಪಾಡಿ, ಉಪ್ಪಿನಂಗಡಿ, ಸುಳ್ಯ, ತೆಂಕನಿಡಿಯೂರು, ಪುಂಜಾಲಕಟ್ಟೆ, ಕುಂದಾಪುರ, ಮುಡಿಪು, ಬೆಳ್ಳಾರೆ, ಮತ್ತು ಪುತ್ತೂರು ಸರಕಾರಿ ಪ್ರ.ದ.ಕಾಲೇಜುಗಳು “ಬಿ+’ ಗ್ರೇಡ್‌ ಪಡೆದಿವೆ. ವಾಮದಪದವು, ಬೈಂದೂರು, ಉಡುಪಿ ಅಜ್ಜರಕಾಡು, ಕುಶಾಲನಗರ, ವೀರಾಜಪೇಟೆ, ಬೆಳ್ತಂಗಡಿ, ಕಾಪು ಪ್ರಥಮ ದರ್ಜೆ ಕಾಲೇಜುಗಳು “ಬಿ’ ಗ್ರೇಡ್‌ ಪಡೆದಿವೆ.

ಮಂಗಳೂರು ಪ್ರಾದೇಶಿಕ
ಕಚೇರಿ ವ್ಯಾಪ್ತಿಯ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಈಗಾಗಲೇ 22 ಕಾಲೇಜುಗಳು ನ್ಯಾಕ್‌ ಮಾನ್ಯತೆ ಪಡೆದಿವೆ. 11 ಕಾಲೇಜುಗಳಿಗೆ ಶೀಘ್ರ ಮಾನ್ಯತೆ ಸಿಗಲಿದ್ದು, ಕೆಲವು ಮೊದಲ ಮೌಲ್ಯಾಂಕನದ ಮೊದಲ ಆವೃತ್ತಿ (ಫಸ್ಟ್‌ ಸೈಕಲ್‌) ಪೂರ್ಣ ಗೊಳಿಸಿ ಎರಡನೇ ಆವೃತ್ತಿಗೆ ಸಿದ್ಧವಾಗುತ್ತಿವೆ.
-ದೇವಿಪ್ರಸಾದ್‌, ನ್ಯಾಕ್‌ ವಿಶೇಷಾಧಿಕಾರಿ, ಮಂಗಳೂರು ಪ್ರಾದೇಶಿಕ ಕಚೇರಿ

-  ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.