![car](https://www.udayavani.com/wp-content/uploads/2024/07/car-7-415x248.jpg)
ಕಟ್ಟೆಚ್ಚರ: ಜಿಲ್ಲಾಡಳಿತಕ್ಕೆ ಖಾದರ್
Team Udayavani, Jul 8, 2018, 6:00 AM IST
![v-35.jpg](https://www.udayavani.com/wp-content/uploads/2018/07/8/v-35.jpg)
ಮಂಗಳೂರು: ದ.ಕ. ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರುವ ಸಾಧ್ಯತೆಯಿದೆ. ಮೂರು ದಿನ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸಹಾಯಕ ಆಯುಕ್ತರು, ಮೀನುಗಾರಿಕೆ, ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುನ್ನೆಚ್ಚರಿಕೆ ದೃಷ್ಟಿಯಿಂದ ಎನ್ಡಿಆರ್ಎಫ್ ತಂಡ ಮಂಗಳೂರಿಗೆ ಆಗಮಿಸುತ್ತಿದೆ. ಅಗ್ನಿಶಾಮಕ ಇಲಾಖೆ ದಿನದ 24 ಗಂಟೆಯೂ ಸನ್ನದ್ಧವಾಗಿರಬೇಕು. ಸ್ಥಳೀಯ ಮೀನುಗಾರರ ಬೋಟ್ಗಳ ಸಹಾಯವನ್ನೂ ಪಡೆಯಬೇಕಾಗುತ್ತದೆ ಎಂದು ಹೇಳಿದರು.
ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತ ಪಟ್ಟಿದ್ದಾರೆ. ಆ ಕುಟುಂಬಕ್ಕೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು. ಎರಡು ದಿನಗಳಲ್ಲಿ 12 ಸಹಿತ ಒಟ್ಟು 929 ಮನೆಗಳಿಗೆ ಹಾನಿಯಾಗಿದೆ. 803 ಪಕ್ಕಾ ಮನೆಗಳ ಪೈಕಿ 727 ಮನೆಗಳಿಗೆ ಪರಿಹಾರ ನೀಡಲಾಗಿದೆ. 118 ಕಚ್ಚಾ ಮನೆಗಳ ಪೈಕಿ 102 ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಈ ವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದರು.
ಇಲ್ಲಿಯವರೆಗೆ 1,451 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,957.8 ಮಿ.ಮೀ. ಮಳೆಯಾಗಿದೆ. ಪ್ರಕೃತಿ ವಿಕೋಪ ಸಂಭವಿಸಿದ ಸಮಯದಲ್ಲಿ ಪರಿಹಾರ ನೀಡಲು ಸಮಸ್ಯೆಯಿದ್ದ ನಿಯಮ ಬದಲಾಗಿದ್ದು, ಶೇ. 45ರ ವರೆಗೆ ಮನೆ ಹಾನಿ ಸಂಭವಿಸಿದರೆ 42,795 ರೂ., ಶೇ. 68ರಷ್ಟು ಹಾನಿ ಸಂಭವಿಸಿದರೆ 64,000 ರೂ. ಮತ್ತು ಅದಕ್ಕೂ ಜಾಸ್ತಿ ಹಾನಿ ಸಂಭವಿಸಿದರೆ 95,000 ರೂ. ಪರಿಹಾರ ನೀಡಲಾಗುವುದು. ಪ್ರಾಣ ಹಾನಿ ಸಂಭವಿಸಿದರೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ ಎಂದರು.
ಪರ್ಯಾಯ ವಸತಿ ವ್ಯವಸ್ಥೆ
ಪುತ್ತೂರು ತಾಲೂಕು ಸಹಾಯಕ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ, ಉಪ್ಪಿನಂಗಡಿಯಲ್ಲಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಒಂದು ವೇಳೆ ಸಂಗಮವಾದರೆ ಸುಮಾರು 18 ಮನೆಗಳು ಸೇರಿದಂತೆ ಸುಮಾರು 2 ಎಕರೆ ಪ್ರದೇಶ ಮುಳುಗಡೆಯಾಗಲಿದೆ. ಈ ಸಮಯದಲ್ಲಿ ಉಪ್ಪಿನಂಗಡಿ ಕಾಲೇಜಿನಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪರಿಕರ ವಿತರಣೆ
ಸಿಆರ್ಎಫ್ ನಿಧಿಯ 22 ಲಕ್ಷ ರೂ. ಅನುದಾನದಿಂದ 8 ಬೋಟ್, 3 ಸ್ಕೂಬಾ ಡ್ರೈವಿಂಗ್ ಸೆಟ್, 4 ಪೆಟ್ರೋಲ್ ಡ್ರಿವಿನ್ ಚೈನ್, ಟ್ರೀ ಕಟ್ಟರ್ ಯಂತ್ರವನ್ನು ಸಚಿವ ಯು.ಟಿ. ಖಾದರ್ ಇದೇ ವೇಳೆ ಅಗ್ನಿಶಾಮಕ ಇಲಾಖೆಗೆ ವಿತರಿಸಿದರು.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
MUST WATCH
ಹೊಸ ಸೇರ್ಪಡೆ
![7-uv-fusion](https://www.udayavani.com/wp-content/uploads/2024/07/7-uv-fusion-150x90.jpg)
UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.