ಗ್ರಾ.ಪಂ. ಉಪಚುನಾವಣೆ ಫಲಿತಾಂಶ

ಉಜಿರೆ ಕಾಂಗ್ರೆಸ್‌- ಕೊಯ್ಯೂರು ಬಿಜೆಪಿ ಬೆಂಬಲಿತರಿಗೆ ಜಯ

Team Udayavani, Jun 1, 2019, 6:00 AM IST

e-2

ವಿಜೇತ ಕೊರಗಪ್ಪ ಅವರನ್ನು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಬೆಳ್ತಂಗಡಿ: ತಾಲೂಕಿನ ಉಜಿರೆ ಹಾಗೂ ಕೊಯ್ಯೂರು ಗ್ರಾ.ಪಂ.ಗಳ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದೆ. ಉಜಿರೆ ಎರಡು ವಾರ್ಡ್‌ಗಳು ಕಾಂಗ್ರೆಸ್‌ ಬೆಂಬಲಿತರ ಪಾಲಾಗಿದ್ದು, ಕೊಯ್ಯೂರಿನ ವಾರ್ಡ್‌ ಬಿಜೆಪಿ ಬೆಂಬಲಿತರ ಪಾಲಾಗಿದೆ. ಬೆಳಗ್ಗೆ ನಗರ ಪಂಚಾಯತ್‌ ಸಭಾಂಗಣದಲ್ಲಿ ಚುನಾವಣಾಧಿಕಾರಿ ಸುಭಾಶ್‌ ಜಾಧವ್‌ ಅವರ ನೇತೃತ್ವದಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡು 9.30ಕ್ಕೆ ಫಲಿತಾಂಶದ ಸಂಪೂರ್ಣ ಚಿತ್ರಣ ಪ್ರಕಟಗೊಂಡಿತು.

ವಿಜಯಿ ಅಭ್ಯರ್ಥಿಗಳು
ಕೊಯ್ಯೂರು ವಾರ್ಡ್‌-2ರಲ್ಲಿ ಕೊರಗಪ್ಪ (ಬಿಜೆಪಿ ಬೆಂಬಲಿತ) 303 ಮತ ಪಡೆದು ಬಾಬು ಹೇಮಲ್ಕೆ 256 (ಕಾಂಗ್ರೆಸ್‌ ಬೆಂಬಲಿತ) ವಿರುದ್ಧ 47 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

ಉಜಿರೆ ವಾರ್ಡ್‌ ನಂ. 4ರಲ್ಲಿ ಸುಮಂಗಲಾ – 296 (ಕಾಂಗ್ರೆಸ್‌ ಬೆಂಬಲಿತ) ಮತ ಪಡೆದು ಪ್ರತಿಸ್ಪರ್ಧಿ ವೇದಾವತಿ – 236 (ಬಿಜೆಪಿ ಬೆಂಬಲಿತ) ವಿರುದ್ಧ 60 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉಜಿರೆ ವಾರ್ಡ್‌ ನಂ. 11ರಲ್ಲಿ ಜಿನ್ನಪ್ಪ ನಾಯ್ಕ – 283 (ಕಾಂಗ್ರೆಸ್‌ ಬೆಂಬಲಿತ) ಮತ ಪಡೆದು ಪ್ರತಿಸ್ಪರ್ಧಿ ಸತೀಶ – 198 (ಬಿಜೆಪಿ ಬೆಂಬಲಿತ) ವಿರುದ್ಧ 88 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.

ಚುನಾವಣೆಗೂ ಮುನ್ನ ಪತಿ ಜಿನ್ನಪ್ಪ ವಾರ್ಡ್‌ಗೂ ಪತ್ನಿ ಸುಮಂಗಲಾ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಾಮ ಪತ್ರ ಹಿಂಪಡೆದಿದ್ದರು.

ಫಲಿತಾಂಶ ಘೋಷಣೆಯಾಗು ತ್ತಿದ್ದಂತೆ ವಿಜೇತರು ತಮಗೆ ಬೆಂಬಲ ನೀಡಿದ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿದರು.

ಪ್ರಮಾಣಪತ್ರ ನೀಡಿ ಅಭಿನಂದನೆ
ವಿಜೇತ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಸುಭಾಶ್‌ ಜಾಧವ್‌ ಅವರು ಪ್ರಮಾಣ ಪತ್ರ ನೀಡುವ ಮೂಲಕ ಅಭಿನಂದಿಸಿದರು. ಈ ವೇಳೆ ಉಪ ಚುನಾವಣಾಧಿಕಾರಿ ಯಲ್ಲವ್ವ ಹಂಡಿ, ಕೊಯ್ಯೂರು ಕ್ಷೇತ್ರದ ಚುನಾವಣಾಧಿಕಾರಿ ಸುಧಾಕರ್‌, ಉಪಚುನಾವಣಾಧಿಕಾರಿ ನಿಮ್‌ಲ್‌ ಕುಮಾರ್‌, ಚುನಾವಣಾ ಶಾಖೆಯ ನಾರಾಯಣ ಗೌಡ, ಗಣೇಶ್‌ ಪೂಜಾರಿ ಇತರ ಸಿಬಂದಿ ಉಪಸ್ಥಿತರಿದ್ದರು.

ಉಜಿರೆ ವಾರ್ಡ್‌-ನಂ. 4
ವಿಜೇತೆ: ಸುಮಂಗಲಾ – 296 (ಕಾಂಗ್ರೆಸ್‌ ಬೆಂಬಲಿತ)
ಮತದಾರರು ಒಟ್ಟು: 1,069
ಕ್ರಮಬದ್ಧ ಮತ: 532
ತಿರಸ್ಕೃತ ಮತ: 03
ನೀಡಿದ ಒಟ್ಟು ಮತ: 535
ಉಜಿರೆ ವಾರ್ಡ್‌-ನಂ.11
ವಿಜೇತ: ಜಿನ್ನಪ್ಪ ನಾಯ್ಕ – 283 (ಕಾಂಗ್ರೆಸ್‌ ಬೆಂಬಲಿತ)
ಮತದಾರು ಒಟ್ಟು: 783
ಕ್ರಮಬದ್ಧ ಮತ: 478
ತಿರಸ್ಕೃತ ಮತ: 7
ನೀಡಿದ ಒಟ್ಟು ಮತ: 485
ಕೊಯ್ಯೂರು ವಾರ್ಡ್‌-2
ವಿಜೇತ: ಕೊರಗಪ್ಪ – 303 (ಬಿಜೆಪಿ ಬೆಂಬಲಿತ)
ಮತದಾರರು ಒಟ್ಟು: 938
ಕ್ರಮಬದ್ಧ ಮತ: 559
ತಿರಸ್ಕೃತ ಮತ: 7
ನೀಡಿದ ಒಟ್ಟು ಮತಗಳು: 566

ಪತಿ-ಪತ್ನಿಯ ಗೆಲುವಿನ ನಗು
ಉಜಿರೆ ಬೊಟ್ಟುದಗುಡ್ಡೆ ಮನೆಯ ಜಿನ್ನಪ್ಪ ನಾಯ್ಕ ಅವರು ವಾರ್ಡ್‌ ನಂ. 11ರಲ್ಲಿ ಕಾಂಗ್ರೆಸ್‌ ಬೆಂಬಲಿತರಾಗಿ ಸ್ಪರ್ಧಿಸಿ ಗೆಲುವಿನ ನಗು ಬೀರಿದ್ದಾರೆ. ಅವರ ಪತ್ನಿ ಸುಮಂಗಲಾ ಉಜಿರೆ ವಾರ್ಡ್‌ ನಂ. 4ರ ಪರಿಶಿಷ್ಟ ಪಂಗಡ (ಮಹಿಳೆ) ಮೀಸಲಿಟ್ಟ ಸ್ಥಾನದಿಂದ ಕಾಂಗ್ರೆಸ್‌ ಬೆಂಬಲಿತರಾಗಿ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ. ಸುಮಂಗಲಾ ಕಳೆದ ಬಾರಿ ಉಜಿರೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ತಾ.ಪಂ. ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. ಅವರ ಪತಿ ಜಿನ್ನಪ್ಪ ಜನತಾದಳ ಬೆಂಬಲಿತರಾಗಿ 3 ಬಾರಿ ಗ್ರಾ.ಪಂ. ಚುನಾವಣೆಗೆ ನಿಂತು ಸೋಲನುಭವಿಸಿದ್ದರು. ಈ ಬಾರಿ ಗೆಲುವು ಸಾಧಿಸುವ ಮೂಲಕ ಒಂದೇ ಮನೆಯಿಂದ ಇಬ್ಬರು ಸ್ಪರ್ಧಿಸಿ ದಾಖಲೆ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.