ಗ್ರಾ.ಪಂ.ಗಿಲ್ಲ ಏಕವಿನ್ಯಾಸ ಅಧಿಕಾರ; ಪರಿಷ್ಕೃತ ಆದೇಶದಿಂದ ಜನರಿಗೆ ಅಲೆದಾಟದ ಶಿಕ್ಷೆ

9/11 ಖಾತೆಗೆ ನಗರ, ಗ್ರಾಮಾಂತರ ಯೋಜನಾ ಇಲಾಖೆ ಪೂರ್ವಾನುಮತಿ ಅಗತ್ಯ

Team Udayavani, Mar 17, 2022, 6:55 AM IST

ಗ್ರಾ.ಪಂ.ಗಿಲ್ಲ ಏಕವಿನ್ಯಾಸ ಅಧಿಕಾರ; ಪರಿಷ್ಕೃತ ಆದೇಶದಿಂದ ಜನರಿಗೆ ಅಲೆದಾಟದ ಶಿಕ್ಷೆ

ಕಡಬ: ಸ್ಥಳೀಯ ಯೋಜನಾ ಪ್ರದೇಶದ ಹೊರಗಡೆ ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಅನುಮತಿ ಅಗತ್ಯ. ಗ್ರಾ.ಪಂ. ಹಾಗೂ ತಾ.ಪಂ.ಗಿದ್ದ ಏಕವಿನ್ಯಾಸ ಅನುಮೋದನೆ ಅಧಿಕಾರವನ್ನು ಸರಕಾರ ಹಿಂಪಡೆದಿದೆ.

ಭೌಗೋಳಿಕ ಹಿನ್ನೆಲೆ ಗಮನಿಸಿ ದ.ಕ., ಉಡುಪಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ 2015ರ ಮಾ. 19ರ ಆದೇಶದಂತೆ ಸ್ಥಳೀಯ ಯೋಜನಾ ಪ್ರದೇಶದ ಹೊರಗೆ 0 – 0.25 ಎಕರೆ ವರೆಗೆ ಗ್ರಾ.ಪಂ., 1 ಎಕರೆ ವರೆಗೆ ತಾ.ಪಂ., 1 ಎಕರೆಗಿಂತ ಅಧಿಕ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಭೂ ಪರಿವರ್ತಿತ ಜಮೀನುಗಳಲ್ಲಿಏಕವಿನ್ಯಾಸ ಅನುಮೋದನೆ ಅಧಿಕಾರ ನೀಡಲಾಗಿತ್ತು.ಅದರಿಂದ ಅ ಭಾಗದ ಜನರಿಗೆ 9/11 ಖಾತೆ ಸುಲಭವಾಗಿ ಹಾಗೂ ಪಾರದರ್ಶಕವಾಗಿ ಲಭ್ಯವಾಗುತ್ತಿತ್ತು.

ಪಂಚಾಯತ್‌ ಅಧಿಕಾರ ಮೊಟಕು
ರಾಜ್ಯ ಸರಕಾರವು 2021ರ ಅಕ್ಟೋಬರ್‌ 7ರಂದು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆಗೆ ತಿದ್ದುಪಡಿಗೊಳಿಸಿದೆ. ಯಾವುದೇ ಭೂಮಿಯನ್ನು ಅಭಿವೃದ್ಧಿ ಮಾಡಲು ಉದ್ದೇಶಿಸಿರುವ ವ್ಯಕ್ತಿ ಅನುಮತಿ ಗಾಗಿ ಸ್ಥಳೀಯ ಪ್ರಾಧಿಕಾರಕ್ಕೆ ಲಿಖಿತ ಅರ್ಜಿ ಸಲ್ಲಿಸಬೇಕು. ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ಅವರಿಂದ ಅಧಿಕೃತಗೊಂಡು ನಗರ ಯೋಜನೆ ಸಹಾಯಕ ನಿರ್ದೇಶಕರ ದರ್ಜೆಗೆ ಕಡಿಮೆಯಿಲ್ಲದ ಅಧೀನ ಅಧಿಕಾರಿಯ ಪೂರ್ವಾನುಮೋದನೆ ಪಡೆಯುವುದು ಅಗತ್ಯ ಎಂಬುದಾಗಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ 2022ರ ಫೆ. 28ರಿಂದ ಗ್ರಾ.ಪ‌ಂ. ಹಾಗೂ ತಾ.ಪಂ.ಗೆ ಏಕವಿನ್ಯಾಸ ಅನುಮೋದನೆ ನೀಡುವ ಅಧಿಕಾರವನ್ನು ಮೊಟಕುಗೊಳಿಸಿದೆ.

ಭೌಗೋಳಿಕ ಹಿನ್ನೆಲೆ ಗಮನಿಸಿಕೊಂಡು ಜನರ ಅನುಕೂಲಕ್ಕಾಗಿ ಸರಕಾರ ಹೊಸ‌ ಆದೇಶವನ್ನು ಹಿಂಪಡೆದು ದ.ಕ., ಉಡುಪಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ಈ ಹಿಂದಿನ ನಿಯಮವನ್ನೇ ಮುಂದುವರಿಸಬೇಕು. ಇಲ್ಲದಿದ್ದರೆ ದೂರದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದು ಜನಸಾಮಾನ್ಯರಿಗೆ ಹೊರೆ ಯಾಗುತ್ತದೆ. ಆದ್ದರಿಂದ ತಾಲೂಕು ಅಥವಾ ವಿಭಾಗ ಮಟ್ಟದಲ್ಲಿ ಶಾಖಾ ಕಚೇರಿಗಳನ್ನು ತೆರೆದು ಅಲ್ಲಿ ವ್ಯವಹರಿಸಲು ಅವಕಾಶ ನೀಡಬೇಕು ಎನ್ನುವುದು ಜನರ ಆಗ್ರಹ.

ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆಗೆ ದ.ಕ., ಉಡುಪಿ, ಶಿವಮೊಗ್ಗ ಹಾಗೂ ಉ.ಕ. ಜಿಲ್ಲೆಗೆ ವಿನಾಯಿತಿ ನೀಡಿದ್ದರಿಂದ ಗ್ರಾ.ಪಂ. ಮತ್ತು ತಾ.ಪಂ.ಗಳಿಗೆ ಈ ಅಧಿಕಾರ ನೀಡಲಾಗಿತ್ತು. ಆದರೆ ಪರಿಷ್ಕೃತ ಆದೇಶದಂತೆ ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಪೂರ್ವಾನುಮತಿ ಅಗತ್ಯ.
– ಕುಮಾರ್‌, ಸಿಇಒ, ದ.ಕ. ಜಿ.ಪಂ.

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.