ನೀರಿನ ಸಮಸ್ಯೆ ನಿರ್ವಹಣೆಗೆ ಗ್ರಾಮ ಪಂಚಾಯತ್‌ ಸರ್ವ ಸಿದ್ಧ

ಕಿನ್ನಿಗೋಳಿ ಗ್ರಾಮ ಪಂಚಾಯತ್‌

Team Udayavani, Mar 19, 2020, 4:29 AM IST

water-kinnigoli

ಕಳೆದ ಬೇಸಗೆಯಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ “ಉದಯವಾಣಿ’ಯು ಭೇಟಿ ಕೊಟ್ಟು, “ಜೀವಜಲ’ ಎನ್ನುವ ಸರಣಿಯಡಿ ಸಾಕ್ಷಾತ್‌ ವರದಿಗಳನ್ನು ಪ್ರಕಟಿಸಿತ್ತು. ಈ ಬಾರಿಯ ಬೇಸಗೆಯಲ್ಲಿ ನೀರಿನ ಸಮಸ್ಯೆಯ ನಿವಾರಣೆಗೆ ಸ್ಥಳೀಯ ಪಂಚಾಯತ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆೆ. ಮುಂದೆ ಆಗಬೇಕಾದ ಪ್ರಮುಖ ಕ್ರಮಗಳೆಲ್ಲದರ ಕುರಿತಾದ ಸರಣಿ.

ಕಿನ್ನಿಗೋಳಿ ಪಂಚಾಯತ್‌ನಲ್ಲಿ ಕಳೆದ ವರ್ಷ ನೀರಿನ ಸಮಸ್ಯೆ ಕಂಡು ಬಂದಿತ್ತು. ಆದರೆ ಈ ಬಾರಿ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದರಿಂದಾಗಿ ಕೆಲವೊಂದು ಕಡೆ ಹೊರತುಪಡಿಸಿ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಪಂಚಾಯತ್‌ ಎಲ್ಲ ರೀತಿಯಲ್ಲಿ ಸರ್ವ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾ.ಪಂ. ವ್ಯಾಪ್ತಿಯ ಎಳತ್ತೂರು, ಪುನರೂರು ಕೆಲವು ಭಾಗಗಳಲ್ಲಿ ಈಗಾಗಲೇ ಸ್ವಲ್ಪ ಮಟ್ಟಿನ ನೀರಿನ ಸಮಸ್ಯೆ ಆರಂಭವಾಗಿದೆ. ಈ ಸಮಸ್ಯೆ ನಿರ್ವಹಣೆಗಾಗಿ ಪುನರೂರು ಭಾಗದಲ್ಲಿ ಬಹುಗ್ರಾಮ ನೀರು ಯೋಜನೆಯಡಿಯಲ್ಲಿ ಹೊಸ ಪೈಪ್‌ಲೈನ್‌ ಜೋಡಣೆ ಮಾಡಲಾಗಿದೆ, ಎಳತ್ತೂರು ಭಾಗಕ್ಕೆ ಬಳ್ಕುಂಜೆ ಗ್ರಾ.ಪಂ. ವ್ಯಾಪ್ತಿಯಿಂದ ನೀರು ಸರಬರಾಜು ಮಾಡಿದರೆ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಕಿನ್ನಿಗೋಳಿಯಲ್ಲಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ವ್ಯಾಪ್ತಿಯಲ್ಲಿ ತೆರೆದ ಬಾವಿಗಳು ಕಡಿಮೆ ಇವೆ. ಹೀಗಾಗಿ ಈ ನೀರಿನ ಸಮಸ್ಯೆ ನಿರ್ವಹಣೆಗೆ ಗ್ರಾ.ಪಂ. ಆಡಳಿತ ಸಕಲ ಸಿದ್ಧವಾಗಿದೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳೆದ ವರ್ಷ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾರಿಯಿಂದಾಗಿ ವ್ಯಾಪ್ತಿಯ ಸುಮಾರು 12 ಓವರ್‌ ಹೆಡ್‌ಟ್ಯಾಂಕ್‌ಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಆದರೇ ಈ ಯೋಜನೆಯಲ್ಲಿ ಪೈಪ್‌ಲೈನ್‌ ಪದೇ ಪದೇ ಹಾಳಾಗುವುದು ಹಾಗೂ ಒಡೆಯುವುದರಿಂದಾಗಿ ಕೆಲವು ಬಾರಿ ನೀರು ಸರಬರಾಜಿಗೆ ಸಮಸ್ಯೆ ಆಗುತ್ತದೆ.

ಎಳತ್ತೂರು- ನೆಲಗುಡ್ಡೆ
ಎಳತ್ತೂರು ನೆಲಗುಡ್ಡೆ ಗುಡ್ಡೆಯಂಗಡಿ ಎತ್ತರದ ಪ್ರದೇಶವಾಗಿದ್ದು, ಕಳೆದ ವರ್ಷದ ಡಿಸೆಂಬರ್‌ ಅಂತ್ಯದವರೆಗೆ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು. ಅನಂತರ ಬೇಸಗೆಯಲ್ಲಿ ಕೊಳವೆ ಬಾವಿಯಲ್ಲಿ ನೀರಿಲ್ಲವಾದ್ದರಿಂದ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗಿತ್ತು. ಈ ಬಾರಿ ನೀರಿನ ಸಮಸ್ಯೆ ಉದ್ಭವಿಸುವ ಲಕ್ಷಣ ಕಂಡು ಬಂದಿದ್ದು ಬಳುRಂಜೆ ಗ್ರಾ.ಪಂ. ವ್ಯಾಪ್ತಿಯಿಂದ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡಿದರೆ ಪರಿಹಾರ ಸಿಗಬಹುದು. ಈ ಬಗ್ಗೆ ಸ್ಥಳೀಯಾಡಳಿತದಲ್ಲಿ ಮಾತುಕತೆ ನಡೆದಿದೆ. ಇದಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾ.ಪಂ. ಆಡಳಿತ ಸಿದ್ಧವಾಗಿದೆ.

ಕಿನ್ನಿಗೋಳಿ
ಕಿನ್ನಿಗೋಳಿ ಗ್ರಾ.ಪಂ. ಹತ್ತಿರದ ಟ್ಯಾಂಕ್‌ ಸಹಿತ ಎಲ್ಲ ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಪಂಚಾಯತ್‌ ಕೊಳವೆ ಬಾವಿ ಮತ್ತು 2 ತೆರದ ಬಾವಿಯ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಈ ಬಾರಿ ವ್ಯಾಪ್ತಿಯಲ್ಲಿ ಯಾವುದೇ ನೀರಿನ ಸಮಸ್ಯೆ ಉದ್ಭವಿಸುವ ಲಕ್ಷಣ ಕಂಡು ಬಂದಿಲ್ಲ. ಹಾಗೇನೂ ಒಂದು ವೇಳೆ ನೀರಿನ ಸಮಸ್ಯೆ ಕಂಡು ಬಂದರೂ ಪಂಚಾಯತ್‌ನಿಂದ ಪೂರಕ ಕ್ರಮ ತೆಗೆದುಕೊಳ್ಳುವುದು ಎಂದು ತಿಳಿದು ಬಂದಿದೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ 10,400 ಜನಸಂಖ್ಯೆ ಇದ್ದು, 967 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಇದೆ, 12 ಕೊಳವೆ ಬಾವಿ ಇದೆ, 15 ಜನ ಕೆಲಸಗಾರರು ಇದ್ದಾರೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಗುತ್ತಕಾಡಿನಲ್ಲಿ ಪ್ರತ್ಯೇಕ ನೀರಿನ ಸಮಿತಿ ಇದ್ದು ಅದರ ನಿರ್ವಹಣೆ ಅವರೇ ಮಾಡುತ್ತಾರೆ.
ಅಲ್ಲಿ ಸುಮಾರು 300ಕ್ಕೂ ಅಧಿಕ ನೀರಿನ ಬಳಕೆದಾರರು ಇದ್ದು ಎರಡು ಟ್ಯಾಂಕ್‌ ಮೂಲಕ ಅಲ್ಲಿನ ಪರಿಸರದಲ್ಲಿ ನೀರಿನ ಸರಬರಾಜು ಮಾಡಲಾಗುತ್ತಿದೆ. ಅದರ ಲೆಕ್ಕಾಚಾರ ಎಲ್ಲ ಸಮಿತಿಯ ಮೂಲಕ ನಡಯುತ್ತಿದೆ.

ಸದ್ಯ ನೀರಿನ ಸಮಸ್ಯೆಯಿಲ್ಲ
ಗ್ರಾಮ ಪಂಚಾಯತ್‌ನಲ್ಲಿ ಕೊಳವೆಬಾವಿ, ಮಳೆಕೊಯ್ಲು ಯೋಜನೆ ಸಿದ್ಧವಾಗಿದೆ. ಕಿನ್ನಿಗೋಳಿ ಗ್ರಾಮ ಪಂಚಾಯತ್‌ನಲ್ಲಿ ಕೊಳವೆಬಾವಿ ಮರುಪೂರಣದ ನೀರು ಇಂಗಿಸುವ ಅನುಷ್ಠಾನದ ಕೆಲಸ ನಡೆದಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಬರುತ್ತಿದ್ದು ಸದ್ಯದ ಮಟ್ಟಿಗೆ ದೊಡ್ಡ ನೀರಿನ ಸಮಸ್ಯೆ ಕಂಡು ಬಂದಿಲ್ಲ.
– ಅರುಣ್‌ ಪ್ರದೀಪ್‌ ಡಿ’ಸೋಜಾ, ಪಿಡಿಒ, ಕಿನ್ನಿಗೋಳಿ ಗ್ರಾ.ಪಂ.

ಸಮರ್ಪಕವಾಗಿ ನೀರು ಸರಬರಾಜು
ಗ್ರಾಮ ಪಂ ಚಾಯ ತ್‌ ವ್ಯಾಪ್ತಿ ಯಲ್ಲಿ ಕಳೆದ ವರ್ಷ ನೀರಿನ ಸಮಸ್ಯೆ ಜಾಸ್ತಿ ಇತ್ತು, ಈ ಬಾರಿ ಬಹುಗ್ರಾಮ ಕಡಿಯುವ ನೀರಿನ ಯೋಜನೆಯಲ್ಲಿ ಸರಿಯಾಗಿ ನೀರು ಬರುತ್ತಿದ್ದು ಸದ್ಯದ ಮಟ್ಟಿಗೆ ಸಮಸ್ಯೆ ಕಂಡುಬಂದಿಲ್ಲ. ಗ್ರಾಮ ಪಂಚಾಯತ್‌ನಿಂದ ಎಸ್‌. ಕೋಡಿ , ಪದ್ಮನೂರಿನಲ್ಲಿ ಇನ್ನಿತರ ಕಡೆಗಳಲ್ಲಿ ನೀರಿನ ಸಮಸ್ಯೆಗೆ ಹೊಸ ಪೈಪ್‌ಲೈನ್‌ ನಿರ್ವಹಣೆ ಹಾಗೂ ದುರಸ್ತಿ ಮಾಡುವ ಮೂಲಕವಾಗಿ ಕೊಳೆವೆ ಬಾವಿಯ ಮೂಲಕವು ಸಮರ್ಪಕವಾಗಿ ನೀರು ಸರಬರಾಜು ನಡೆಯುತ್ತಿದೆ.
– ಫಿಲೋಮಿನಾ ಸಿಕ್ವೇರಾ, ಅಧ್ಯಕ್ಷರು, ಕಿನ್ನಿಗೋಳಿ ಗ್ರಾ.ಪಂ.

- ರಘುನಾಥ್‌ ಕಾಮತ್‌, ಕೆಂಚನಕೆರೆ

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.