ಬಂಡಾಯದ ಹೊರತಾಗಿಯೂ ಕಾವೇರಿದ ಪ್ರಚಾರ


Team Udayavani, Dec 25, 2020, 12:23 PM IST

ಬಂಡಾಯದ ಹೊರತಾಗಿಯೂ ಕಾವೇರಿದ ಪ್ರಚಾರ

ಬೆಳ್ತಂಗಡಿ, ಡಿ.24: ಹಳ್ಳಿ ರಾಜಕೀಯ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಅನೇಕ ರಾಜಕೀಯ ಕಸರತ್ತುಗಳ ನಡುವೆಯೇ ಕಣದಲ್ಲಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭಿಸಿದೆ.   ಕೆಲವೆಡೆ ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, ಎಲ್ಲ ಅಭ್ಯರ್ಥಿಗಳು ಬಹಿರಂಗ ಪ್ರಚಾರದ ಜತೆಜತೆಯಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕವೂ ಪ್ರಚಾರ ಮಾಡುತ್ತಿದ್ದಾರೆ.

ಕೆಲವೆಡೆ ರಾಜಕೀಯ ಪಕ್ಷಗಳ ಅಧಿಕೃತ ಬೆಂಬಲಿತ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಆಕಾಂಕ್ಷಿಗಳಾಗಿದ್ದವರಿಗೆ ಟಿಕೆಟ್‌ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದವರನ್ನು ಕೊನೇ ಕ್ಷಣದಲ್ಲಿ ಒಲಿಸುವಲ್ಲಿ ಅಧಿಕೃತ ಅಭ್ಯರ್ಥಿಗಳು ಯಶಸ್ವಿ ಯಾಗಿದ್ದಾರೆ. ಈ ಎಲ್ಲ ಮನವೊಲಿಕೆ, ತಂತ್ರಗಾರಿಕೆಯ ಕಸರತ್ತಿನ ಮೂಲಕ ತಾ|ನಲ್ಲಿ 237 ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂದೆಗೆದುಕೊಂಡಿರುವುದು ವಿಶೇಷ.

ಹಿರಿಯರಿಗೆ ಪ್ರಾಶಸ್ತ್ಯ ನೀಡದಿರುವುದು, ಅನುಭವ ರಹಿತರಿಗೆ ಮಣೆ, ಜಾತಿ ಲೆಕ್ಕಾಚಾರ, ಪಕ್ಷಾಂತರಿಗಳಿಗೆ ಟಿಕೆಟ್‌ ಎಂಬೆಲ್ಲ ಒಳ ಬೇಗುದಿಯ ಕಾರಣಗಳಿಂದಾಗಿ ಹಲವೆಡೆ ಬಂಡಾಯ ಅಭ್ಯರ್ಥಿಗಳು ಕಣದಲ್ಲಿ  ಉಳಿದಿದ್ದಾರೆ.

ಅರ್ಹರ ಆಯ್ಕೆಯಿಂದ ಗ್ರಾಮ ಸ್ವರಾಜ್ಯವಾಗಬೇಕು, ಯುವ ಸಮು ದಾಯಕ್ಕೆ ಅವಕಾಶ ಸಿಗಬೇಕು. ಆದರೆ ಅವರು ರಾಜಕೀಯದ ಅಮಲು ಏರಿಸಿ ಕೊಳ್ಳಬಾರದು ಎಂದು ಚುನಾವಣೆ ನಡೆಯ ಲಿರುವ ಗ್ರಾಮಗಳಲ್ಲಿ ಸಂಚರಿಸುವಾಗ “ಉದಯವಾಣಿ’ ಪ್ರತಿನಿಧಿ ಬಳಿ ಮತದಾರರು ತಮ್ಮ ನಿಲುವನ್ನು ಸೂಚ್ಯವಾಗಿ ವ್ಯಕ್ತಪಡಿಸಿದರು.

 ಲಾೖಲ   :

ಲಾೖಲ ಗ್ರಾ.ಪಂ.ನ ಒಂದು ಸ್ಥಾನಕ್ಕೆ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ. ಕಳೆದ ಬಾರಿ  ಒಟ್ಟು 20 ಸ್ಥಾನಗಳಲ್ಲಿ 12 ಮಂದಿ ಬಿಜೆಪಿ ಬೆಂಬಲಿತರು ಮತ್ತು 8 ಮಂದಿ ಕಾಂಗ್ರೆಸ್‌ ಬೆಂಬಲಿತರು ಜಯಗಳಿಸಿದ್ದರು. ಆದರೆ ಕೊನೇ ಘಳಿಗೆಯಲ್ಲಿ ಕಾಂಗ್ರೆಸ್‌ ಬೆಂಬಲಿತರೋರ್ವರು ಬಿಜೆಪಿ ಬೆಂಬಲಿತರತ್ತ ವಾಲಿದ್ದರಿಂದ ಬಿಜೆಪಿ ಬೆಂಬಲಿತರ ಬಲ 13 ಕ್ಕೇರಿತ್ತು. ಈ ಬಾರಿ 20 ಸ್ಥಾನಗಳಿಗೆ ಒಟ್ಟು 51 ಮಂದಿ ಕಣದಲ್ಲಿದ್ದಾರೆ.

ಮೇಲಂತ ಬೆಟ್ಟು  :

ಮೇಲಂತ ಬೆಟ್ಟು ಗ್ರಾ.ಪಂ. ಮುಂಡೂರು, ಸವಣಾಲು ಎರಡು ಗ್ರಾಮ ಗಳನ್ನು ಹೊಂದಿದ್ದು, 12 ಸ್ಥಾನಗಳಿಗೆ 27 ಮಂದಿ ಕಣದಲ್ಲಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ ಬೆಂಬಲಿತರು 5, ಬಿಜೆಪಿ ಬೆಂಬಲಿತರು 7 ಸ್ಥಾನಗಳನ್ನು ಪಡೆದಿದ್ದರು. ಅಭಿವೃದ್ಧಿಯಲ್ಲಿ ತೀರ ಹಿಂದುಳಿದಿದೆ. ಈ ಬಾರಿ ಸವಣಾಲು ಗ್ರಾಮದ ಗಡಿ ಪ್ರದೇಶ ಕಸ್ತೂರಿರಂಗನ್‌ ವರದಿಯ ವ್ಯಾಪ್ತಿಗೆ ಸೇರುವ ಆತಂಕದಲ್ಲಿ ಜನಸಾಮಾನ್ಯರಿದ್ದಾರೆ. ಈ ಸಲ ತುಳುನಾಡ ಪಕ್ಷ ಬೆಂಬಲಿತ  ಅಭ್ಯರ್ಥಿಗಳು ಕಣದಲ್ಲಿರುವುದು ವಿಶೇಷ.

 ಪುದುವೆಟ್ಟು  :

ಪುದುವೆಟ್ಟು ಗ್ರಾ.ಪಂ.ಈ ಬಾರಿ ಕಸ್ತೂರಿರಂಗನ್‌ ವರದಿ ಎಂಬ ಗುಮ್ಮನ ವಿರುದ್ಧ ಮತದಾರರು ಚುನಾವಣೆ ಮುನ್ನ ಪ್ರತಿಭಟನೆ ಬಿಸಿಯನ್ನೂ ತೋರಿಸಿದ್ದಾರೆ. ವರದಿಯ ಅನುಷ್ಠಾನ ವಿರೋಧಿ ಸಿ ಅಭ್ಯರ್ಥಿ ಗಳ ಸಹಿತ ಸ್ಥಳೀಯರು ಸಾರ್ವತ್ರಿಕವಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪಂ.ನ ಒಟ್ಟು 9 ಸ್ಥಾನಗಳಿಗೆ ಈ ಬಾರಿ 20 ಮಂದಿ ಕಣದಲ್ಲಿದ್ದಾರೆ. ಕಳೆದ ಬಾರಿ 9 ಸ್ಥಾನಗಳಲ್ಲಿ 4 ಕಾಂಗ್ರೆಸ್‌ ಬೆಂಬಲಿತ, 5 ಬಿಜೆಪಿ ಬೆಂಬಲಿತರು ಜಯಗಳಿಸಿದ್ದರಾದರೂ ಅಧಿಕಾರ ಕಾಂಗ್ರೆಸ್‌ ಬೆಂಬಲಿತರ ಪಾಲಾಗಿತ್ತು.

ಮುಂಡಾಜೆ :  

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ಕಾಂಗ್ರೆಸ್‌ ಬೆಂಬಲಿತರದೇ ಪ್ರಾಬಲ್ಯ. 11 ಸದಸ್ಯ ಬಲದ ಗ್ರಾಮ ಪಂಚಾಯತ್‌ಗೆ ಕಳೆದ ಬಾರಿ 7 ಕಾಂಗ್ರೆಸ್‌ ಬೆಂಬಲಿತರು, 2 ಬಿಜೆಪಿ ಬೆಂಬಲಿತರು ಮತ್ತು 2 ಮಂದಿ ಪಕ್ಷೇತರರು ಜಯಗಳಿಸಿದ್ದರು. ಈ ಬಾರಿ 26 ಮಂದಿ ಕಣದಲ್ಲಿದ್ದಾರೆ. ಸಮರ್ಪಕ ನಳ್ಳಿ ನೀರು, ತ್ಯಾಜ್ಯ ಘಟಕ, ರಸ್ತೆ ಕಾಂಕ್ರೀಟ್‌, ಚರಂಡಿ ಅವ್ಯವಸ್ಥೆ ಸರಿಪಡಿಸಬೇಕಿದೆ. ನದಿ ನೀರಿಗೆ ತ್ಯಾಜ್ಯ ಎಸೆಯುತ್ತಿರುವ ಬಗ್ಗೆಯೂ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಗ್ರಾಮಸ್ಥರದ್ದಾಗಿದೆ.

ನಡ  :

ಹೈನುಗಾರರೇ ಹೆಚ್ಚಿರುವ ನಡ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸದ್ದಿಲ್ಲದ ರಾಜಕೀಯ ಕಣ ರಂಗೇರಿದೆ. 14 ಸ್ಥಾನಗಳನ್ನು ಹೊಂದಿದ್ದು ಕಳೆದ ಬಾರಿ 7ಮಂದಿ ಬಿಜೆಪಿ ಬೆಂಬಲಿತರು, 6 ಮಂದಿ ಕಾಂಗ್ರೆಸ್‌ ಬೆಂಬಲಿತರು ಮತ್ತು  ಒಬ್ಬರು ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದರು. ಅಧ್ಯಕ್ಷ ಸ್ಥಾನ ಬಿಜೆಪಿ ಬೆಂಬಲಿತರ ಪಾಲಾಗಿತ್ತು.

 ಕಲ್ಮಂಜ :  

ಒಟ್ಟು 10 ಸ್ಥಾನಗಳನ್ನು ಹೊಂದಿರುವ ಕಲ್ಮಂಜ ಗ್ರಾಮ ಪಂಚಾಯತ್‌ ಅತೀ ಕಡಿಮೆ ಸದಸ್ಯ ಸ್ಥಾನ ಹೊಂದಿರುವ ಪಂಚಾಯತ್‌ ಆಗಿದೆ. ಕಳೆದ ಬಾರಿ 9 ಮಂದಿ ಬಿಜೆಪಿ ಬೆಂಬಲಿತರು ಮತ್ತು ಓರ್ವ ಕಾಂಗ್ರೆಸ್‌ ಬೆಂಬಲಿತರು ಜಯಗಳಿಸಿದ್ದರು. ಕಲ್ಮಂಜದಲ್ಲಿ ರಸ್ತೆ ಸಮಸ್ಯೆ ಹೆಚ್ಚಿರುವುದರಿಂದ ಮತದಾರರ ನಿರೀಕ್ಷೆಯೂ ಅಧಿಕವಿದೆ.

ಧರ್ಮಸ್ಥಳ  :

ಧರ್ಮಸ್ಥಳ ಗ್ರಾ.ಪಂ.ನಲ್ಲೂ ಈ ಬಾರಿ ಹಲವು ರಾಜಕೀಯ ವಿದ್ಯಮಾನಗಳ ನಡುವೆ ಚುನಾವಣೆ ಕಣ ರಂಗೇರಿದೆ. ಒಟ್ಟು 25 ಸದಸ್ಯ ಸ್ಥಾನಗಳಿಗೆ 54 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಳೆದ ಬಾರಿ 14 ಮಂದಿ ಬಿಜೆಪಿ ಬೆಂಬಲಿತರು, 11 ಮಂದಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಗಳಾಗಿದ್ದರು. ಅಧ್ಯಕ್ಷರು ಮೃತಪಟ್ಟಿದ್ದರಿಂದ ತೆರವಾದ ಸ್ಥಾನಕ್ಕೆ ನಡೆದ ಮರು ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತರು ಜಯಗಳಿಸಿದ್ದರು. ಅಡ್ಡಮತದಾನದಿಂದ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.ಪಕ್ಷಾಂತರ, ಬಂಡಾಯಗಳಿಂದಾಗಿ ಗ್ರಾ.ಪಂ.ನ ಚುನಾವಣ ಕಣ ಕುತೂಹಲ ಮೂಡಿಸಿದೆ. ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುವ ದೃಷ್ಟಿಯಿಂದ ಹೊಸತನದ ಚಿಂತನೆ ಬೇಕು ಎಂಬುದು ಗ್ರಾಮಸ್ಥರ ಆಶಯವಾಗಿದೆ.

ಉಜಿರೆ :

ಬೆಳ್ತಂಗಡಿ ತಾಲೂಕಿನಲ್ಲಿ ಅತೀ ದೊಡ್ಡ ಗ್ರಾ.ಪಂ. ಆಗಿರುವ ಉಜಿರೆಯಲ್ಲಿ 34 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಕಳೆದ ಬಾರಿ 11ಮಂದಿ ಬಿಜೆಪಿ ಬೆಂಬಲಿತರು, 22 ಮಂದಿ ಕಾಂಗ್ರೆಸ್‌ ಬೆಂಬಲಿತರು ಮತ್ತು ಒಂದು ಸ್ಥಾನ ಪಕ್ಷೇತರ ಪಾಲಾಗಿತ್ತು. ಈ ಬಾರಿ ಪಕ್ಷೇತರ ಅಭ್ಯರ್ಥಿಬಿಜೆಪಿ ಬೆಂಬಲಿತರ ಬಣಕ್ಕೆ ಸೇರ್ಪಡೆಗೊಂಡ ಬಳಿಕ ರಾಜಕೀಯ ವಿದ್ಯಮಾನಬದಲಾಗಿದೆ. ಈ ಬಾರಿ 34 ಸ್ಥಾನಗಳಿಗೆ 72 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.