ಇಂದು ಗ್ರಾ.ಪಂ. ಉಪಚುನಾವಣೆ: ಉಜಿರೆ – 2, ಕೊಯ್ಯೂರು -1 ಸ್ಥಾನ


Team Udayavani, May 29, 2019, 6:00 AM IST

e-1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾ.ಪಂ.ನ 2 ಸ್ಥಾನಗಳು ಹಾಗೂ ಕೊಯ್ಯೂರು ಗ್ರಾ.ಪಂ.ನ 1 ಸ್ಥಾನಕ್ಕೆ ಮೇ 29ರಂದು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ.

ಅಧಿಕಾರಿಗಳ ನಿಯೋಜನೆ
ಪ್ರಥಮ ಮತಗಟ್ಟೆ ಅಧಿಕಾರಿ, ದ್ವಿತೀಯ ಮತಗಟ್ಟೆ ಅಧಿಕಾರಿಗಳಿಂದ ಮಸ್ಟರಿಂಗ್‌ ಕಾರ್ಯ ಮಂಗಳವಾರ ನಡೆಯಿತು. ಮೂರು ಮತಗಟ್ಟೆ ಕೇಂದ್ರಕ್ಕೆ 4 ಸಿಬಂದಿ ಹಾಗೂ 1 ಡಿ ಗ್ರೂಪ್‌ ಸಹಿತ ಒಟ್ಟು 5 ಜನ ಸಿಬಂದಿ ನಿಯೋಜಿಸಲಾಗಿದೆ. ಮೂರು ವಾರ್ಡ್‌ಗಳಿಗೆ 15 ಜನ
ಅಧಿಕಾರಿಗಳನ್ನು ನಿಯೋಜನೆಗೊಳಿಸಲಾಗಿದೆ.

ಪೊಲೀಸ್‌ ನಿಯೋಜನೆ
ಈಗಾಗಲೇ ಗ್ರಾ.ಪಂ. ವ್ಯಾಪ್ತಿಗೆ ನೀತಿ ಸಂಹಿತೆ ಘೋಷಿಸಿದ್ದು, ಶಾಂತಿಯುತ ಮತದಾನಕ್ಕೆ ಪೊಲೀಸ್‌ ಭದ್ರತೆ ಒದಗಿಸ ಲಾಗಿದೆ. ಉಜಿರೆಯ 2 ವಾರ್ಡ್‌ಗಳಿಗೆ 3 ಜನ, ಕೊಯ್ಯೂರು ವಾರ್ಡ್‌ಗೆ ಒಬ್ಬರನ್ನು ನಿಯೋಜಿಸಲಾಗಿದೆ. ಮೇ 31ರಂದು ನಗರ ಪಂ.ನಲ್ಲಿ ಮತ ಎಣಿಕೆ ಪ್ರಕ್ರಿಯೆ ಜರಗಲಿದ್ದು, ರಾತ್ರಿ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

ಉಜಿರೆ ಕ್ಷೇತ್ರ
ವಾರ್ಡ್‌ ನಂ. 11ರಲ್ಲಿ ಒಟ್ಟು ಮತದಾರರು 783. ಪುರುಷರು 385, ಮಹಿಳೆಯರು 398. ಎಸ್‌.ಡಿ.ಎಂ. ಅನುದಾನಿತ ಹಿ.ಪ್ರಾ. ಶಾಲೆ ಉಜಿರೆಯಲ್ಲಿ ಮತದಾನ ನಡೆಯಲಿದೆ.
ವಾರ್ಡ್‌ ನಂ. 4ರಲ್ಲಿ ಒಟ್ಟು ಮತದಾರರು 1,069. ಪುರುಷರು 524, ಮಹಿಳೆಯರು 545. ಎಸ್‌.ಡಿ.ಎಂ. ಡಿಎಡ್‌ ಕಾಲೇಜು ಉಜಿರೆಯಲ್ಲಿ ಮತದಾನ ನಡೆಯಲಿದೆ.

ಕೊಯ್ಯೂರು
ವಾರ್ಡ್‌-2ರಲ್ಲಿ ಒಟ್ಟು ಮತದಾರರು 938. ಪುರುಷರು 469, ಮಹಿಳೆಯರು 469. ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಕೊಯ್ಯೂರು ದೇವಸ್ಥಾನ ಇಲ್ಲಿ ಮತದಾನ ನಡೆಯಲಿದೆ.

ಎಡ ಕೈ ಉಂಗುರ ಬೆರಳಿಗೆ ಶಾಯಿ
ಬ್ಯಾಲೆಟ್‌ ಪೇಪರ್‌ ಮೂಲಕ ಮತದಾನ ನಡೆಯಲಿದ್ದು, ಎಡ ಕೈ ಉಂಗುರ ಬೆರಳಿಗೆ ಶಾಯಿ ಹಾಕಲಾಗುತ್ತದೆ. ಈ ಕುರಿತು ಪಿಆರ್‌ಒ ಮತ್ತು ಎಪಿಆರ್‌ಒಗಳಿಗೆ ಮತದಾನದ ವೇಳೆ ಮತದಾರರ ಗುರುತಿನ ಚೀಟಿ ಪರಿಶೀಲನೆ, ಮತದಾನದ ಅಂಕಿ ಅಂಶದ ಪರಿಶೀಲನೆ ಬಗ್ಗೆ ಸೋಮವಾರ ಹಾಗೂ ಮಂಗಳವಾರ ಚುನಾವಣಾಧಿಕಾರಿ ಸುಭಾಶ್‌ ಜಾಧವ್‌ ಅವರು ಸಭೆ ನಡೆಸಿ ಮಾಹಿತಿ ನೀಡಿದ್ದಾರೆ.

ಕಣದಲ್ಲಿರುವವರು
ಕೊಯ್ಯೂರು ವಾರ್ಡ್‌ -2ರಲ್ಲಿ ನೇರ ಸ್ಪರ್ಧೆ ಏರ್ಪಟ್ಟಿದ್ದು, ಬಾಬು ಹೇಮಲ್ಕೆ ಹಾಗೂ ಕೊರಗಪ್ಪ ಕಣದಲ್ಲಿದ್ದಾರೆ. ಉಜಿರೆ ವಾರ್ಡ್‌ ನಂ. 4ರಲ್ಲಿ ಸುಮಂಗಲಾ ಹಾಗೂ ಹೇಮಾವತಿ, ವಾಡ್‌ ನಂ. 11ರಲ್ಲಿ ಜಿನ್ನಪ್ಪ ನಾಯ್ಕ ಹಾಗೂ ಸತೀಶ್‌ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

 ಸಿದ್ಧತೆ ಪೂರ್ಣ
ಶಾಂತಿಯುತ ಮತದಾನಕ್ಕೆ ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. 15 ಮಂದಿ ಮತಗಟ್ಟೆ ಅಧಿಕಾರಿಗಳು ಹಾಗೂ 4 ಮಂದಿ ಭದ್ರತಾ ಸಿಬಂದಿಯನ್ನು ನಿಯೋಜಿಸಲಾಗಿದೆ. ಮತದಾರರ ಸಹಕಾರದಿಂದ ಮತದಾನ ಮತ್ತಷ್ಟು ಅರ್ಥಪೂರ್ಣವಾಗಿ ನಡೆಯಲಿದೆ.
 - ಸುಭಾಶ್‌ ಜಾಧವ್‌, ಚುನಾವಣಾಧಿಕಾರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.