ದಾಖಲೆ ಪೂರ್ಣವಾಗಿದ್ದರೆ ತತ್ಕ್ಷಣ ತೀರ್ಮಾನ : ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಹಿರ್ಗಾನ, ಅತಿಕಾರು ಬೆಟ್ಟು ಗ್ರಾಮ
Team Udayavani, Aug 21, 2022, 9:13 AM IST
ಮೂಲ್ಕಿ : ಸರಕಾರವು ಅಧಿಕಾರಿಗಳ ಹಳ್ಳಿಯ ಕಡೆಗೆ ನಡಿಗೆ ಆರಂಭಿಸಿರುವುದು ನಮಗೂ ಆಸಕ್ತಿ ತಂದಿದೆ ಮಾತ್ರವಲ್ಲ ಜನರ ಜತೆಗೆ ಬೆರೆತು ಅವರ ಸಮಸ್ಯೆಗಳನ್ನು ಅರಿತು ಶಾಶ್ವತ ಪರಿಹಾರವನ್ನು ಕೊಡುವ ಉದ್ದೇಶದಿಂದ ನಿಮ್ಮ ಮನೆ ಬಾಗಿಲಿಗೆ ಬಂದು ನಿಂತಿದ್ದೇನೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಹೇಳಿದರು.
ಮೂಲ್ಕಿ ತಾಲೂಕಿನ ಅತಿಕಾರಿ ಬೆಟ್ಟು ಗ್ರಾ. ಪಂ. ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನರು ಸಮಸ್ಯೆಗಳ ಬಗ್ಗೆ ಎಲ್ಲ ದಾಖಲೆ ಗಳನ್ನು ಒದಗಿಸಿದರೆ ಸ್ಥಳದಲ್ಲಿಯೇ ವಿಲೇವಾರಿ ಮಾಡುವುದು ಸಾಧ್ಯ ವಾಗುತ್ತದೆ ಎಂದರು.
ಒಟ್ಟು 48 ಅರ್ಜಿ ಸ್ವೀಕಾರ ಆಗಿದೆ 15 ದಾಖಲೆ ವಿಲೇವಾರಿ ಆಗಿದೆ.33 ಪೂರ್ಣ ಪ್ರಮಾಣದ ತನಿಖೆ ದಾಖಲೆಗಾಗಿ ಬಾಕಿಯಾಗಿದೆ.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುವಲ್ಲಿ ನಿತ್ಯವೂ ಪ್ರಯತ್ನಿಸುವೆ. ಈಗ ಜಿಲ್ಲಾಧಿಕಾರಿಗಳು ನಿಮ್ಮ ಬಳಿಗೆ ಬರುವ ಅವಕಾಶ ಸರಕಾರ ಮಾಡಿಕೊಟ್ಟಿದೆ ನಿಮ್ಮ ಸಮಸ್ಯೆಗಳನ್ನು ಅವರಿಗೆ ವಿವರಿಸಿ ಸೂಕ್ತ ಪರಿಹಾರ ಪಡೆಯಲು ಇದು ಸೂಕ್ತ ಕಾಲ ಎಂದರು.
ಜಿ. ಪಂ. ಸಿಇಒ ಡಾ| ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಕುಮಾರ್, ಮೂಲ್ಕಿ ತಾ. ಪಂ. ಇಒ ದಯಾವತಿ, ಪಂ. ಉಪಾಧ್ಯಕ್ಷೆ ಶಶಿಕಲಾ, ಎಡಿಎಲ್ಆರ್ ನಿರಂಜನ್, ಮೂಲ್ಕಿ ತಹಶೀಲ್ದಾರ್ ಗುರುಪ್ರಸಾದ್, ಭೂ ದಾಖಲೆಗಳ ಉಪನಿರ್ದೇಶಕ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಪಂಚಾಯತ್ ಪಿಡಿಒ ಪ್ರಕಾಶ್ ಸ್ವಾಗತಿಸಿದರು. ಅಶ್ವಿನಿ ನಿರೂಪಿಸಿದರು.
ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ
ಅಜೆಕಾರು : ಹಿರ್ಗಾನ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಭಾಗವಹಿಸಿ ನಾಗರಿಕರಿಂದ ಅಹವಾಲು ಸ್ವೀಕರಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧ ಪಟ್ಟ 8, ಪಂಚಾಯತ್ರಾಜ್ ಇಲಾಖೆಗೆ 6, ಭೂಮಾಪನ 1, ಮೆಸ್ಕಾಂ 1, ಅರಣ್ಯ, ಕೃಷಿ 1, ಐಟಿಡಿಪಿ 2 ಸೇರಿದಂತೆ 20 ಮನವಿ ನಾಗರಿಕರಿಂದ ಸಲ್ಲಿಕೆಯಾದವು. ಜಿಲ್ಲಾಧಿಕಾರಿ ಯವರು ಗ್ರಾಮದ ರಾಜೀವ ನಗರ ಶ್ಮಶಾನ ಹಾಗೂ ಚಿಕ್ಕಲ್ಬೆಟ್ಟು ಪಡ್ಡಾಯಿಗುಡ್ಡೆ ಪ.ಜಾತಿ, ಪ.ಪಂಗಡದ ಕಾಲನಿಗೆ ಭೇಟಿ ನೀಡಿ ದರು. ಹಲವು ವರ್ಷಗಳ ಹಿಂದೆ ಹಕ್ಕುಪತ್ರ ಹೊಂದಿರುವವರಿಗೆ ತ್ವರಿತವಾಗಿ ಪಹಣಿ ಪತ್ರ ನೀಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಹಿರ್ಗಾನ ಗ್ರಾ. ಪಂ. ಅಧ್ಯಕ್ಷ ಸಂತೋಷ್ ಶೆಟ್ಟಿ, ಜಿ. ಪಂ. ಸಿಇಒ ಪ್ರಸನ್ನ ಎಚ್., ಸಹಾಯಕ ಆಯುಕ್ತ ರಾಜು, ತಾ. ಪಂ. ಇಒ ಗುರುದತ್, ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ