ಉತ್ತಮ ನಾಯಕತ್ವದಿಂದ ದೇಶಕ್ಕೆ ದೊಡ್ಡ ಸೇವೆ
Team Udayavani, Aug 10, 2017, 6:00 AM IST
ಮಡಂತ್ಯಾರು: ಶಿಕ್ಷಣ ಕ್ರೇತ್ರದಿಂದಲೇ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಯುವಶಕ್ತಿ ಸಮಾಜಕ್ಕೆ ಮಾದರಿಯಾಗಬೇಕು. ವಿದ್ಯಾರ್ಥಿನಿಯರು ಕೂಡ ನಾಯಕತ್ವ ವಹಿಸಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಒಳ್ಳೆಯ ಲಕ್ಷಣ. ಉತ್ತಮ ನಾಯಕತ್ವದ ಮೂಲಕ ದೇಶಕ್ಕೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದರು.
ಅವರು ಬುಧವಾರ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿದರು.
ದೇಶದ ಮುಂದಿನ ನಾಯಕನಾಗಲು ವಿದ್ಯಾರ್ಥಿ ಸಂಘ ಉತ್ತಮ ಅವಕಾಶ. ದೇಶಕ್ಕೆ ಉತ್ತಮ ನಾಯಕರ ಕೊಡುಗೆ ನೀಡಬೇಕಿದೆ. ನಾಯಕತ್ವ ನಮ್ಮ ಜೀವನದ ಮೇಲೆ ಪರಿಣಾಮ ಬೀಳುವ ಮೂಲಕ ಜೀವನ ಶೈಲಿಯೇ ಬದಲಾಗುತ್ತದೆ. ಕಲಿಕೆಯಲ್ಲಿ ಸೌಲಭ್ಯ ಇಲ್ಲದಿದ್ದರೂ ಛಲ, ಉತ್ಸಾಹ ಇದ್ದರೆ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ನ ಧರ್ಮಗುರು ಫಾ| ಬೇಸಿಲ್ ವಾಸ್ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮ್ಯಾಕ್ಸಿಂ ಅಲುºಕರ್ಕ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮಾಧವ ಗೌಡ, ಚರ್ಚ್ನ ಉಪಾಧ್ಯಕ್ಷರು ರೊನಾಲ್ಡ್ ಸಿಕ್ವೇರಾ, ಪ್ರೊ| ವಿನ್ಸೆಂಟ್ ಡಿ’ಸೋಜಾ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಲೆಕ್ಸ್ ಐವನ್ ಸಿಕ್ವೇರಾ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಅಕ್ಷತಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ