‘ಗ್ರೀನ್ ಮಂಗಳೂರು ಸಾಕಾರ ನಮ್ಮ ಗುರಿ’
Team Udayavani, Jun 30, 2019, 5:26 AM IST
ಮಹಾನಗರ: ನಗರದಲ್ಲಿ ಹಸುರಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. 2001 ರಲ್ಲಿ ಶೇ. 20ರಷ್ಟಿದ್ದ ಹಸುರಿನ ಪ್ರಮಾಣ ಪ್ರಸ್ತುತ ಶೇ.18ರಷ್ಟಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ಗ್ರೀನ್ ಮಂಗಳೂರು, ಮಹಾನಗರ ಪಾಲಿಕೆ ವತಿಯಿಂದ ನಗರದ ಸಂಘನಿಕೇತನದಲ್ಲಿ ಶನಿವಾರ ನಡೆದ ’10 ಸಾವಿರ ಸಸಿ ನೆಡುವ ಮಹಾ ಅಭಿಯಾನ’ ಗ್ರೀನ್ ಮಂಗಳೂರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದಲ್ಲಿ ಹಸುರು ಕಡಿಮೆಯಾದ ಕಾರಣ ಈ ವರ್ಷ ಮಳೆ ಕೊರತೆ ಅನುಭವಿಸುತ್ತಿದ್ದೇವೆ. ಚೆನ್ನೆ ೖನಲ್ಲಿ ಇದೇ ಪರಿಸ್ಥಿತಿ ಬಂದಾಗ ಅಂತರ್ಜಲ ವೃದ್ಧಿಗಾಗಿ ಗಿಡ ನೆಟ್ಟಿದ್ದರು. ಮಂಗಳೂರಿನಲ್ಲಿ ಗಿಡ ನೆಡುವ ಜತೆಗೆ ಮಳೆಕೊಯ್ಲು, ಇಂಗುಗುಂಡಿ ರಚನೆ ಮೂಲಕ ಗ್ರೀನ್ ಮಂಗಳೂರು ಸಾಕಾರ ನಮ್ಮ ಗುರಿಯಾಗಿದೆ ಎಂದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ
ವಿಶ್ವಹಿಂದೂ ಪರಿಷತ್ ಮುಖಂಡ ಎಂ.ಬಿ. ಪುರಾಣಿಕ್ ಮಾತನಾಡಿ, ಮರ, ಗಿಡಗಳಿಲ್ಲದೆ ಮಾನವ ಬದುಕಲು ಸಾಧ್ಯವಿಲ್ಲ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದ್ದು, ಗಿಡ ನೆಟ್ಟು ಪರಿಸರ ಸಂರಕ್ಷಿಸಬೇಕು ಎಂದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ದಕ್ಷಿಣ ಪ್ರಾಂತ ಸಹ ಸಂಘ ಚಾಲಕ ಡಾ| ಪಿ. ವಾಮನ ಶೆಣೈ ಅವರು ಗಿಡ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮುಂದಿನ ದಿನಗಳಲ್ಲಿ ಪ್ರತೀ ಶನಿವಾರ ಗಿಡ ನೆಡಲಾಗುವುದು. ಆರಂಭಿಕ ಹಂತದಲ್ಲಿ ನಗರದಲ್ಲಿ 10 ಸಾವಿರಕ್ಕೂ ಅಧಿಕ ಗಿಡ ನೆಟ್ಟು,ಸಸಿಗಳನ್ನು ಪೋಷಿಸಲು ವ್ಯವಸ್ಥೆ ಮಾಡಲಾಗಿದೆ. ವಿವಿಧ ಸಂಘ – ಸಂಸ್ಥೆಗಳು, ವಿದ್ಯಾರ್ಥಿಗಳು, ವಕೀಲರು ಈ ಕಾರ್ಯದಲ್ಲಿ ಕೈಜೋಡಿಸಿದ್ದಾರೆ ಎಂದು ವೇದವ್ಯಾಸ ಕಾಮತ್ ಹೇಳಿದರು.
ಪ್ರತೀ ಶನಿವಾರ ಗಿಡ ನೆಡಲಾಗುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ