ಸ್ವಂತ ಮನೆ ಇದ್ದವರಿಗೆ “ಹೋಂ ಸ್ಟೇ’ ಆರಂಭಕ್ಕೆ  ಗ್ರೀನ್‌ ಸಿಗ್ನಲ್‌


Team Udayavani, Jul 24, 2017, 8:45 AM IST

green-signal.jpg

– ದಿನೇಶ್‌ ಇರಾ

ಮಹಾನಗರ: ರಾಜ್ಯ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಜಿಲ್ಲೆಯಲ್ಲಿ ಹೋಂ ಸ್ಟೇ ಯೋಜನೆಯನ್ನು ಆರಂಭಿಸಿದೆ.

ಕರಾವಳಿ ಪ್ರಾಕೃತಿಕ ಪ್ರವಾಸಿ ತಾಣವಾಗಿದ್ದು, ಇಲ್ಲಿಗೆ ಆಗಮಿಸುವ ಪ್ರವಾಸಿಗರು ಹೆಚ್ಚಾಗಿ ಗುತ್ತಿನ ಮನೆ, ಗ್ರಾಮೀಣ ಶೈಲಿಯ ಹೋಂಸ್ಟೇಗೆ  ಬೇಡಿಕೆ ಇಡುತ್ತಿದ್ದಾರೆ. ಹೀಗಾಗಿ ಈ ವಿನ್ಯಾಸದಲ್ಲಿರುವ ಹಲವು ಮನೆಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ.

ಹೋಂ ಸ್ಟೇ ಎಂದರೆ “ಭೇಟಿದಾರರಿಗೆ/ ಪ್ರವಾಸಿಗರಿಗೆ ಬಾಡಿಗೆ ಆಧಾರದ ಮೇಲೆ ವಸತಿ ಸೌಲಭ್ಯ ಕಲ್ಪಿಸುವ ಸ್ಥಳೀಯ ಕುಟುಂಬಗಳ ಖಾಸಗಿ ಮನೆ. ಹೋಂ ಸ್ಟೇ ಯೋಜನೆಯನ್ನು ಆರಂಭಿಸಲು ಯಾವುದೇ ವ್ಯಾಪಾರ ಪರವಾನಿಗೆಯ ಆವಶ್ಯಕತೆ ಇಲ್ಲ.  ಕೇವಲ  ಪ್ರವಾಸೋದ್ಯಮ ಇಲಾಖೆಯ ಅನುಮೋದನೆ ಪಡೆದರೆ ಸಾಕು ಎನ್ನುತ್ತಾರೆ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಅಧಿಕಾರಿ. 

ಹೋಂ ಸ್ಟೇ ಯೋಜನೆಗಳಿಗೆ ರಿಯಾಯಿತಿ
ಯಾವುದೇ ಕೊಠಡಿ ಶುಲ್ಕವು ದಿನಕ್ಕೆ 5 ಸಾವಿರ ರೂ. ಗಳಿಗಿಂತ‌ ಕಡಿಮೆಯಿದ್ದಲ್ಲಿ ವಿಲಾಸಿ ತೆರಿಗೆ ಪಾವತಿಯಿಂದ ವಿನಾಯಿತಿ ಇದೆ. ವಿದ್ಯುತ್ಛಕ್ತಿ ಮತ್ತು ನೀರಿನ ಶುಲ್ಕಗಳನ್ನು ಗೃಹ ಬಳಕೆಯ ದರದಲ್ಲಿ ಪಾವತಿಸಬೇಕಾಗುತ್ತದೆ. 
ವಸತಿ ಉದ್ದೇಶಗಳಿಗೆ ನಿರ್ದಿಷ್ಟ ಪಡಿಸಿರುವಂತೆ ಆಸ್ತಿ  ತೆರಿಗೆ ದರಗಳನ್ನು ಪಾವತಿಸಬಹುದು. 

ಹೋಂ ಸ್ಟೇ ಯೋಜನೆಯನ್ನು ಆರಂಭಿಸಲು ಆಸಕ್ತರು ರಾಜ್ಯ ಸರಕಾರದ www.karnatakatourism.org ವೆಬ್‌ಸೈಟ್‌ ಮೂಲಕ ನೇರವಾಗಿ ನೋಂದಣಿ ಮಾಡಬಹುದು. 

3 ವರ್ಷಗಳಿಗೆ ನೋಂದಣಿ 500 ರೂ. ಎಂದು ಪ್ರವಾಸೋದ್ಯಮ ಇಲಾಖೆಯ ಮೂಲಗಳು ತಿಳಿಸಿವೆ.
ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಸುಧೀರ್‌ ಗೌಡ “ಉದಯವಾಣಿ ಸುದಿನ’ ಜತೆಗೆ ಮಾತನಾಡಿ, ಮಡಿಕೇರಿ ಮೈಸೂರು ನಗರಗಳಲ್ಲಿ ಹೋಂಸ್ಟೇಗೆ ಹೆಚ್ಚಿನ ಬೇಡಿಕೆಯಿದೆ. ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಕೊಡುವ ನಿಟ್ಟಿನಲ್ಲಿ ಸರಕಾರ ಎಲ್ಲ ಜಿಲ್ಲೆಗಳಲ್ಲೂ ಹೋಂಸ್ಟೇ ಆರಂಭಿಸಲು ಚಿಂತನೆ ನಡೆಸಿದೆ. ಪ್ರವಾಸೋದ್ಯಮ ಇಲಾಖೆಯೇ ಇದಕ್ಕೆ ಪರವಾನಗಿ ನೀಡಲಿದೆ. ಇದು ಕಡ್ಡಾಯ. ಜಿಲ್ಲೆಯಲ್ಲಿ ಈ ಕುರಿತ ಪ್ರಕ್ರಿಯೆ ಆರಂಭ‌ವಾಗಿದೆ.  ವ್ಯಾಪಾರ ಲೈಸೆನ್ಸ್‌ ಸಹಿತ ಇತರ ಯಾವುದೇ ಪರವಾನಗಿಯ ಅಗತ್ಯ ಇಲ್ಲ ಎನ್ನುತ್ತಾರೆ ಅವರು.

ಮಾರ್ಗಸೂಚಿಗಳು
– ನಿವಾಸದ ಮಾಲಕರಾಗಿರಬೇಕು ಹಾಗೂ ಅದೇ ನಿವಾಸದಲ್ಲಿ ವಾಸವಿರಬೇಕು.
– ಗರಿಷ್ಠ 5 ಹಾಗೂ ಕನಿಷ್ಠ 2 ಕೊಠಡಿಗಳನ್ನು ಹೊಂದಿದ್ದು, ಗುಣಮಟ್ಟದ ಶೌಚಾಲಯ ಹಾಗೂ  ಸೇವೆಯನ್ನು ಸಲ್ಲಿಸಬೇಕು.
– ಹೋಂ ಸ್ಟೇ ಮಾಲಕರು ಅತಿಥಿಗಳು ಪಾವತಿಸಬೇಕಾದ ದರಪಟ್ಟಿಯನ್ನು ನಿಖರವಾಗಿ ವಿವರಿಸಬೇಕು.
– ಅತಿಥಿಗಳ ವಿವರದ ಬಗ್ಗೆ ನೋಂದಣಿ ಪುಸ್ತಕವನ್ನು ಹಾಗೂ ಎಲೆಕ್ಟ್ರಾನಿಕ್‌ ಮಾಧ್ಯಮದ ಮೂಲಕ ಗಣಕೀಕರಣ ಮಾಡಿಸಬೇಕು.
– ಮನೆಯ ಕಾಂಪೌಂಡ್‌ ಮತ್ತು ಮುಖ್ಯದ್ವಾರಕ್ಕೆ ಒಟ್ಟು 2 ಸಿಸಿ ಕ್ಯಾಮೆರಾ ಅಳವಡಿಸಿರಬೇಕು.
– ವರ್ಷಕ್ಕೊಮ್ಮೆ ಪೊಲೀಸರಿಂದ ನಿರಾಕ್ಷೇಪಣಾ ಪತ್ರ ಪಡೆದು, ಪರವಾನಿಗೆ ನವೀಕರಣ ಮಾಡಬೇಕು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.