ಪುಣಚ: ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊ ಹಾನಿಗೊಳಿಸಿದ ದುಷ್ಕರ್ಮಿಗಳು
Team Udayavani, May 18, 2019, 1:41 PM IST
ವಿಟ್ಲ: ಇಲ್ಲಿನ ಪುಣಚ- ತೋರಣಕಟ್ಟೆ ರಸ್ತೆಯ ಮನೇಲ ಕ್ರಿಸ್ತರಾಜ ದೇವಾಲಯಕ್ಕೆ ಸೇರಿದ ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊವನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ಶನಿವಾರ ನಡೆದಿದೆ.
ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದು , ಗ್ರೋಟ್ಟೊವಿನ ಹೊರಗಿನ ಗಾಜು ಪುಡಿಯಾಗಿದೆ. ಶನಿವಾರ ಬೆಳಗ್ಗೆ 5.45ರ ಸುಮಾರಿಗೆ ಸ್ಥಳೀಯ ಮಹಿಳೆಯೋರ್ವರು ಪೂಜೆ ಸಲ್ಲಿಸಲು ಬಂದಾಗ ಯಾವುದೇ ಹಾನಿಯಾಗಿರುವ ಬಗ್ಗೆ ಮಹಿಳೆಯ ಗಮನಕ್ಕೆ ಬಂದಿರಲಿಲ್ಲ. ಆದರೆ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ಅವರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧರ್ಮಗುರು ಪ್ರಕಾಶ್ ಡಿಸೋಜಾ ಆಗ್ರಹಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.