ಮಳೆ ಪ್ರಮಾಣ ಹೆಚ್ಚಿದ್ದರೂ ಅಂತರ್ಜಲ ಮಟ್ಟ ಕುಸಿತ 


Team Udayavani, Jan 10, 2019, 5:31 AM IST

10-january-3.jpg

ಸುಳ್ಯ: ಜಿಲ್ಲೆಯಲ್ಲಿ ಈ ವರ್ಷ ಮಳೆಯ ಪ್ರಮಾಣ ಹೆಚ್ಚಾಗಿದ್ದರೂ ಅಂತರ್ಜಲ ಮಟ್ಟ ಕುಸಿದಿದೆ. ಇದು ಎಚ್ಚರಿಕೆಯ ಕರೆ ಗಂಟೆಯಾಗಿದೆ. ಕಳೆದ ಎರಡು ವರ್ಷಗಳ ಜನವರಿಯಿಂದ ಡಿಸೆಂಬರ್‌ ತನಕದ ಅಂಕಿ-ಅಂಶಗಳ ಪ್ರಕಾರ 2018ರ ಸ್ಥಿತಿಯಿದು. ಹೊಸ ವರ್ಷದ ಆರಂಭದ ತಿಂಗಳಲ್ಲೇ ನೀರಿನ ಹಾಹಾಕಾರ ಉಂಟಾಗಬಹುದು ಎನ್ನುವ ಮುನ್ಸೂಚನೆ ಇದಾಗಿದೆ. ಹಾಗಾಗಿ ಜಲ ಸಂರಕ್ಷಣೆಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಾಮುಖ್ಯ ನೀಡಬೇಕು ಎನ್ನುವುದು ಇನ್ನಾದರೂ ಅರಿವಾಗಬೇಕು.

ಗರಿಷ್ಠ ಕುಸಿತ
ಐದು ವರ್ಷಗಳ ಅಂಕಿ-ಅಂಶ ಗಮನಿಸಿದರೆ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿರುವುದು ಗಮನಕ್ಕೆ ಬರುತ್ತದೆ. ಆದರೆ ಕುಸಿದಿದ್ದ ಮಳೆ ಪ್ರಮಾಣ 2018ರಲ್ಲಿ ಏರಿಕೆ ಕಂಡಿದೆ. ಅದು ಪ್ರಾಕೃತಿಕ ವಿಕೋಪದ ಪರಿಣಾಮ ಆಗಿರಬಹುದಾಗಿದೆ. ಹೊಸ ವರ್ಷದಲ್ಲಿ ಮುಂದುವರಿಯುತ್ತದೆ ಎನ್ನುವಂತಿಲ್ಲ.

2017ರಲ್ಲಿ ಮಂಗಳೂರು ತಾಲೂಕಿನಲ್ಲಿ 14.52 ಮೀ.ನಲ್ಲಿದ್ದ ಅಂತರ್ಜಲ ಮಟ್ಟ 2018ರಲ್ಲಿ 16.68 ಮೀ., ಪುತ್ತೂರಿನಲ್ಲಿ 6.83 ಮೀ.ನಿಂದ 8.88 ಮೀ., ಬೆಳ್ತಂಗಡಿಯಲ್ಲಿ 11.02ರಿಂದ 11.04 ಮೀ., ಬಂಟ್ವಾಳದಲ್ಲಿ 7.45ರಿಂದ 8.61 ಮೀ.ಗೆ ಕುಸಿದಿದೆ. ಸುಳ್ಯ ತಾಲೂಕಿನಲ್ಲಿ 9.53 ಮೀ.ನಲ್ಲಿದ್ದುದು 9.36 ಮೀ.ಗೆ ಏರಿದೆ. ಅರಣ್ಯ ನಾಶ, ಪ್ರಕೃತಿ ವಿರೋಧಿ ಕೃತ್ಯ, ನೀರಿಂಗಿಸಲು ಪೂರಕ ಕ್ರಮಗಳು ಇಲ್ಲದಿರುವುದು ಸತತವಾಗಿ ಅಂತರ್ಜಲ ಮತ್ತು ಮಳೆ ಕುಸಿತಕ್ಕೆ ಕಾರಣ ಎಂದು ಅಧ್ಯಯನಗಳು ತಿಳಿಸಿವೆ.

1.04 ಮೀ. ಕುಸಿತ
2017ಕ್ಕೆ ಹೋಲಿಸಿದರೆ 2018ರಲ್ಲಿ ಅಂತರ್ಜಲ ಮಟ್ಟ 1.04 ಮೀ.ನಷ್ಟು ಕೆಳಕ್ಕೆ ಕುಸಿದಿದೆ. 2017ರಲ್ಲಿ 9.87 ಮೀ.ನಲ್ಲಿದ್ದ ಮಟ್ಟ 2018ರಲ್ಲಿ 10.91 ಮೀ.ಗೆ ಜಾರಿದೆ. ಜನವರಿಯಿಂದ ಡಿಸೆಂಬರ್‌ ತನಕದ ಪ್ರತಿ ತಿಂಗಳ ಜಲಮಟ್ಟ ಗಮನಿಸಿದರೆ ಹೆಚ್ಚಾಗಿ ಕುಸಿತವೇ ದಾಖಲಾಗಿದೆ. ಸುಳ್ಯದಲ್ಲಿ ಮಾತ್ರಕೊಂಚ ಸುಧಾರಣೆ ಬಿಟ್ಟರೆ ಬಾಕಿ ಎಲ್ಲ ತಾ| ಗಳಲ್ಲಿ ಗ್ರಾಫ್‌ ಇಳಿಮುಖವೇ ಇದೆ.

ಜನಜಾಗೃತಿ ಅವಶ್ಯ
ಮಳೆ ನೀರು ಸದ್ಬಳಕೆ, ಅಂತರ್ಜಲ ಮಟ್ಟ ಸುಧಾರಣೆಗೆ ಹೆಚ್ಚು ಒತ್ತು ನೀಡಬೇಕಿದೆ. ಸ್ವಂತ ಜಮೀನಿನಲ್ಲಿ ಇಂಗುಗುಂಡಿಯಂತಹ ಅಂತರ್ಜಲ ವೃದ್ಧಿಗೆ ಸಹಕಾರಿಯಾದ
ಪೂರಕ ಕ್ರಮಗಳನ್ನು ಗರಿಷ್ಠ ಪ್ರಮಾಣದಲ್ಲಿ ಅನುಷ್ಠಾನಿಸಬೇಕು. ಜಲಸಂರಕ್ಷಣೆ ಕುರಿತು ಜನಜಾಗೃತಿ ಅತ್ಯವಶ್ಯವಾಗಿದೆ.
-ಜಾನಕಿ,
ಭೂ ವಿಜ್ಞಾನಿ, ಅಂತರ್ಜಲ ವಿಭಾಗ,
ಮಂಗಳೂರು

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.