ಬಿಜೆಪಿಗೆ “ಗ್ಯಾರಂಟಿ’ ಆತಂಕ : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಮಹಮ್ಮದ್‌


Team Udayavani, Aug 27, 2023, 12:43 AM IST

ಬಿಜೆಪಿಗೆ “ಗ್ಯಾರಂಟಿ’ ಆತಂಕ : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಮಹಮ್ಮದ್‌

ಮಂಗಳೂರು: ಕಾಂಗ್ರೆಸ್‌ ವಾಗ್ಧಾನ ಮಾಡಿದ್ದ 5 ಗ್ಯಾರಂಟಿಗಳ ಪೈಕಿ ಮೂರನ್ನು ಅಧಿಕಾರಕ್ಕೆ ಬಂದ 90 ದಿನಗಳಲ್ಲಿ ಅನುಷ್ಠಾನಗೊಳಿಸಿದ್ದು ಗ್ಯಾರಂಟಿಗಳ ಹೆದರಿಕೆಯಿಂದ ಬಿಜೆಪಿ ಯವರು ವಿರೋಧ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಆ. 30ರಂದು ಗೃಹಲಕ್ಷ್ಮೀ, ಡಿಸೆಂಬರ್‌ನಲ್ಲಿ ಯುವನಿಧಿಗೆ ಚಾಲನೆ ನೀಡಲಾಗುವುದು. ಪಕ್ಷ ನುಡಿದಂತೆ ನಡೆಯುತ್ತಿದೆ. ಕಾಂಗ್ರೆಸ್‌ನ ಗ್ಯಾರಂಟಿಗಳಿಂದಾಗಿ ಬಿಜೆಪಿಯವರಿಗೆ ಲೋಕಸಭೆ ಚುನಾವಣೆಯಲ್ಲಿಯೂ ಸೋಲುವ ಭೀತಿ ಉಂಟಾಗಿದೆ. ಹಾಗಾಗಿ ಗ್ಯಾರಂಟಿಗಳಿಗೆ ಟೀಕೆ ಮಾಡುತ್ತಿದ್ದಾರೆ ಎಂದರು.

ಶೀಘ್ರ ವೀಕ್ಷಕರ ನೇಮಕ
ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರತೀ ಕ್ಷೇತ್ರಕ್ಕೂ ಶೀಘ್ರದಲ್ಲಿಯೇ ಓರ್ವ ಸಚಿವರು, ರಾಜ್ಯ ಕಾಂಗ್ರೆಸ್‌ನ ಓರ್ವ ಹಿರಿಯ ಮುಖಂಡರನ್ನು ವೀಕ್ಷಕರನ್ನಾಗಿ ಎಐಸಿಸಿ ನೇಮಿಸಲಿದೆ. ಚುನಾವಣೆಯ 6 ತಿಂಗಳ ಮೊದಲು ಅಭ್ಯರ್ಥಿಗಳ ಆಯ್ಕೆಯಾಗಲಿದೆ. ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ಉಡುಪಿ-ಚಿಕ್ಕಮಗಳೂರು ಮತ್ತು ಮಂಗಳೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವುದಕ್ಕಾಗಿ ಈ ಭಾಗಕ್ಕೆ ಪ್ರತ್ಯೇಕ ರಾಜಕೀಯ ತಂತ್ರಗಾರಿಕೆ ಮಾಡಲಾಗುವುದು. ಕಾಂಗ್ರೆಸ್‌ನ ಕಾರ್ಯಕ್ರಮಗಳನ್ನು ನೋಡಿ ಜನ ಮತ ಹಾಕಲಿದ್ದಾರೆ. ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಗೆಕಾಂಗ್ರೆಸ್‌ ಪಕ್ಷ ಸಿದ್ಧವಾಗಿದೆ ಎಂದು ಹೇಳಿದರು.

ಮೋದಿ ಸುಳ್ಳು ಭರವಸೆ
ಪ್ರಧಾನಿ ಮೋದಿ ಒಂಬತ್ತೂವರೆ ವರ್ಷಗಳಿಂದ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ಸುಳ್ಳು ಹೇಳುವ ವಿಚಾರ ದಲ್ಲಿ ಆಸ್ಕರ್‌ ಪ್ರಶಸ್ತಿ ನೀಡುವುದಾದರೆ ಅವರಿಗೆ ನೀಡಬಹುದು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೋರ್ವರ ಖಾತೆಗೆ ತಲಾ 15 ಲ.ರೂ. ಜಮೆ ಮಾಡುವುದು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದು, ರೈತರ ಆದಾಯ ದ್ವಿಗುಣಗೊಳಿಸುವುದು ಮೊದಲಾದ ಯಾವುದೇ ಭರವಸೆ ಈಡೇರಿಸಿಲ್ಲ. ಪೆಟ್ರೋಲ್‌ 55 ರೂ.ಗಳಿಂದ 105 ರೂ.ಗಳಿಗೆ, ಗ್ಯಾಸ್‌ ಬೆಲೆ 400 ರೂ.ಗಳಿಂದ 1,200 ರೂ.ಗಳಿಗೆ ಏರಿಕೆಯಾಗಿದೆ. ಇದಕ್ಕೆ ಬಿಜೆಪಿಯವರು ಉತ್ತರಿಸಬೇಕು. ಮನ್‌ಕಿ ಬಾತ್‌ ಭಾಷಣ ನಡೆಯುವುದಿಲ್ಲ. ಕಾಮ್‌ ಕಿ ಬಾತ್‌ ಮಾತ್ರ ನಡೆಯುತ್ತದೆ ಎಂದು ಟೀಕಿಸಿದರು.

“ಆಪರೇಷನ್‌’ ಅಗತ್ಯವಿಲ್ಲ
ರಾಜ್ಯದಲ್ಲಿ ಕಾಂಗ್ರೆಸ್‌ 136 ಸ್ಥಾನಗಳ ಸ್ಪಷ್ಟ ಬಹುಮತದೊಂದಿಗೆ ಆಡಳಿತ ನಡೆಸುತ್ತಿದೆ. “ಆಪರೇಷನ್‌’ನ ಅಗತ್ಯವಿಲ್ಲ. ಪಕ್ಷದ ತಣ್ತೀ ಸಿದ್ಧಾಂತ, ನಾಯಕತ್ವ ಒಪ್ಪಿಕೊಂಡು ಬರುವವರನ್ನು ಸ್ವಾಗತಿಸುತ್ತೇವೆ. ಬಿಜೆಪಿ, ಜೆಡಿಎಸ್‌ನ ಶಾಸಕರ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಲೀಂ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಸಚಿವ ರಮಾನಾಥ ರೈ, ನಾಯಕರಾದ ಜೆ.ಆರ್‌. ಲೋಬೋ, ಐವನ್‌ ಡಿ’ಸೋಜಾ, ಶಾಹುಲ್‌ ಹಮೀದ್‌, ಟಿ.ಎಂ. ಶಹೀದ್‌ ಮೊದಲಾದವರಿದ್ದರು.

 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.