15 ದಿನದಲ್ಲೇ ಉದ್ಯೋಗಕ್ಕೆ ಕತ್ತರಿ


Team Udayavani, Aug 3, 2017, 7:10 AM IST

UPNYASAKA.jpg

ಮಂಗಳೂರು: ರಾಜ್ಯ ಸರಕಾರವು 2017-18ನೇ ಸಾಲಿನಲ್ಲಿ ನೇಮಕಗೊಂಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ 15 ದಿನಗಳ ಉದ್ಯೋಗ ಭಾಗ್ಯ ನೀಡಿದೆ. ಅಂದರೆ ಜು. 15ರಂದು ಅತಿಥಿ ಉಪನ್ಯಾಸಕರನ್ನು ನೇಮಿಸಿದ್ದ ಸರಕಾರ ಜುಲೈ 31ಕ್ಕೆ ಮತ್ತೆ ಹೊಸ ಸುತ್ತೋಲೆಯನ್ನು ಹೊರಡಿಸುವ ಮೂಲಕ ಹಿಂದಿನ ನೇಮಕಾತಿಯನ್ನು ರದ್ದುಗೊಳಿಸಿದೆ. 

ಹೀಗಾಗಿ ಜು.15ರ ವೇಳೆಗೆ ಸರಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡವರಲ್ಲಿ ಶೇ.50ರಷ್ಟು ಮಂದಿ ರಾಜ್ಯ ಸರಕಾರದ ಆದೇಶದಿಂದ ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ರಾಜ್ಯದ ಸರಕಾರಿ ಪದವಿ ಕಾಲೇಜುಗಳಿಗೆ ಈಗಾಗಲೇ ಖಾಯಂ ಉಪನ್ಯಾಸಕರನ್ನು ನೇಮಿಸಿರುವ ಸರಕಾರ, ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಅತಿಥಿ ಉಪನ್ಯಾಸಕರನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಅತಿಥಿ ಉಪ ನ್ಯಾಸಕರ ಭವಿಷ್ಯ ಅತಂತ್ರ ಸ್ಥಿತಿಗೆ ತಲು ಪಿರುವ ಜತೆಗೆ, ವಿದ್ಯಾರ್ಥಿಗಳಿಗೂ ಪಾಠ ಇಲ್ಲದಂತಾಗಿದೆ. 

ಭಿನ್ನ ರೀತಿಯ ಸುತ್ತೋಲೆ
2013ರಲ್ಲಿ ನೇಮಕಗೊಂಡ ಅತಿಥಿ ಉಪ ನ್ಯಾಸಕರನ್ನು ಹಲವು ಗೊಂದಲಗಳ ಮಧ್ಯೆ 2016-17ನೇ ಶೈಕ್ಷಣಿಕ ವರ್ಷದ ವರೆಗೆ ಮುಂದುವರಿಸಿತ್ತು. ಆದರೆ ಈ ಶೈಕ್ಷಣಿಕ ವರ್ಷದಿಂದ ತನ್ನ ನಿಯಮದಲ್ಲಿ ಬದ ಲಾವಣೆ ಮಾಡಿಕೊಂಡು ಅತಿಥಿ ಉಪ ನ್ಯಾಸಕರ ನೇಮಕಾತಿಗಾಗಿ ಜೂ. 23ಕ್ಕೆ ಸುತ್ತೋಲೆ ಯೊಂದನ್ನು ಹೊರಡಿಸಿತ್ತು. 

ಇದರಲ್ಲಿ ಕೆಲವೊಂದು ಅರ್ಹತೆಗಳನ್ನು ನೀಡ ಲಾಗಿದ್ದು, ಅವರು ಪಡೆದ ಅಂಕಗಳಿಗೆ ಗರಿಷ್ಠ 40 ಅಂಕಗಳು, ಪಿಎಚ್‌ಡಿ/ಎನ್‌ಇಟಿ/ಎಸ್‌ಎಲ್‌ಇಟಿ ಪಡೆದವರಿಗೆ 30 ಅಂಕಗಳು, ಪ್ರತಿ ವರ್ಷಕ್ಕೆ 3 ಅಂಕಗಳಂತೆ 10 ವರ್ಷ ಅನುಭವ ಪಡೆದವರಿಗೆ ಗರಿಷ್ಠ 30 ಅಂಕಗಳನ್ನು ನೀಡಿ ಒಟ್ಟು 100 ಅಂಕಗಳಲ್ಲಿ ಆಯ್ಕೆಪ್ರಕ್ರಿಯೆ ನಡೆಸಿತ್ತು. 

ಅದರಂತೆ ಜು.14ರ ವೇಳೆಗೆ ಅತಿಥಿ ಉಪನ್ಯಾಸಕರ ಅಂತಿಮ ಅರ್ಹತಾ ಪಟ್ಟಿ ಸಿದ್ಧ ಗೊಳಿಸಲಾಗಿತ್ತು. ಆಯ್ಕೆಗೊಂಡ ಅಭ್ಯರ್ಥಿ  ಗಳು ಜು. 15ರಿಂದ ಕೆಲಸಕ್ಕೆ ಹಾಜ ರಾಗಿ ದ್ದರು. ಆದರೆ ಜು. 31ಕ್ಕೆ ಸರಕಾರ ಮತ್ತೂಂದು ಸುತ್ತೋಲೆ ಹೊರ ಡಿಸುವ ಮೂಲಕ ಹಿಂದಿನ ನೇಮಕಾತಿ ರದ್ದುಗೊಳಿಸಿದೆ. 

ಆ ಸುತ್ತೋಲೆಯ ಪ್ರಕಾರ ಅಭ್ಯರ್ಥಿಯ ಅರ್ಹತೆಗೆ ಆತ ಪಡೆದ ಅಂಕಗಳಲ್ಲಿ ಶೇ. 50 ಅನ್ನು ಗಣನೆಗೆ ತೆಗೆದುಕೊಂಡು ಅದಕ್ಕೆ ಗರಿಷ್ಠ 50 ಅಂಕಗಳು, ಪಿಎಚ್‌ಡಿಗೆ 15 ಅಂಕ, ಎನ್‌ಇಟಿ/ಎಸ್‌ಎಲ್‌ಇಟಿಗೆ 12 ಅಂಕ, ಎಂ.ಫಿಲ್‌ ಪಡೆದವರಿಗೆ 8 ಅಂಕ, ಪ್ರತಿ ವರ್ಷಕ್ಕೆ 3 ಅಂಕಗಳಂತೆ 5 ವರ್ಷ ಅನುಭವ ಪಡೆ ದವರಿಗೆ ಗರಿಷ್ಠ 15 ಅಂಕ ನೀಡಿ ಒಟ್ಟು 100 ಅಂಕಗಳಲ್ಲಿ ಮತ್ತೆ ಆಯ್ಕೆಪ್ರಕ್ರಿಯೆ ನಡೆಸಿದೆ. 

ಈ ಸುತ್ತೋಲೆಯ ಪ್ರಕಾರ ಹಿಂದೆ ನೇಮಕಗೊಂಡವ ರಲ್ಲಿ ಶೇ. 50ರಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. 

250 ಖಾಯಂ ಉಪನ್ಯಾಸಕರು 
ದ.ಕ., ಕೊಡಗು ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ 37 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಇಲ್ಲಿಗೆ ಸುಮಾರು 250 ಮಂದಿ ಖಾಯಂ ಉಪನ್ಯಾಸಕರು ಆಗಮಿಸಲಿದ್ದಾರೆ. ಇವರು ಅತಿಥಿ ಉಪನ್ಯಾಸಕರಿಗಿಂತ ಎರಡು ಪಟ್ಟು ಅಂದರೆ ವಾರದಲ್ಲಿ 16 ಗಂಟೆ ಪಾಠ ಮಾಡ ಬೇಕಾಗುತ್ತದೆ. ಹೀಗಾಗಿ ಇಬ್ಬರು ಅತಿಥಿ ಉಪನ್ಯಾಸಕರ ಜವಾಬ್ದಾರಿಯನ್ನು ಖಾಯಂ ಉಪನ್ಯಾಸಕರು ನಿರ್ವಹಿಸಲಿದ್ದು, ಅತಿಥಿ ಉಪನ್ಯಾಸಕರ ಸಂಖ್ಯೆ ಅರ್ಧದಷ್ಟು ಇಳಿಕೆ ಯಾಗಲಿದೆ. ದ.ಕ.ದಲ್ಲಿ ಒಟ್ಟು 19 ಸ. ಪ್ರಥಮ ದರ್ಜೆ ಕಾಲೇಜುಗಳಿದ್ದು, ಹಿಂದಿನ ಶೈಕ್ಷಣಿಕ ವರ್ಷದಲ್ಲಿ 641 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದರು. 

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸರಕಾರ ಎ, ಬಿ, ಸಿ ವಲಯಗಳನ್ನಾಗಿ ವಿಭಾಗಿಸಿರುತ್ತದೆ. ಅಂದರೆ ಎ ವಲಯದ ಕಾಲೇಜು ನಗರದ ಕಾಲೇಜುಗಳಾಗಿದ್ದು, ಸಿ ವಲಯ ಗ್ರಾಮೀಣ ಭಾಗದ ಕಾಲೇಜಾಗಿರುತ್ತದೆ. ಪ್ರಸ್ತುತ ಸರಕಾರವು ಸಿ ವಲಯದ ಉಪನ್ಯಾಸಕರನ್ನು ಉಳಿದ ವಲಯಕ್ಕೆ ವರ್ಗಾವಣೆಗೊಳಿ ಸಿದ್ದು, ಹೊಸ ಖಾಯಂ ಉಪನ್ಯಾಸಕರನ್ನು ಸಿ ವಲಯಕ್ಕೆ ನೇಮಕಗೊಳಿಸುತ್ತದೆ. 

ಆ.10ರೊಳಗೆ ನೇಮಕ
ನಮ್ಮ ವ್ಯಾಪ್ತಿಯ 37 ಸರಕಾರಿ ಕಾಲೇಜುಗಳಿಗೆ ಸುಮಾರು 250 ಖಾಯಂ ಉಪನ್ಯಾಸಕರ ಮರು ನೇಮಕವಾಗಲಿದ್ದು, ಉಳಿದಂತೆ ಸುಮಾರು 300ರಷ್ಟು ಅತಿಥಿ ಉಪನ್ಯಾಸಕರ ನೇಮಕವಾಗಬಹುದು. ಆ. 10 ರೊಳಗೆ ಖಾಯಂ ಉಪನ್ಯಾಸಕರ ನೇಮಕವಾಗಲಿದೆ. ಉಳಿದ ಹುದ್ದೆಗಳನ್ನು ಅತಿಥಿ ಉಪನ್ಯಾಸಕರು ತುಂಬಲಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾಗಿಲ್ಲ.
– ಡಾ| ಉದಯಶಂಕರ್‌
ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು, ಮಂಗಳೂರು ವಿಭಾಗ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.