ಶೈಕ್ಷಣಿಕ ಗುರಿ ಜ್ಞಾನಾರ್ಜನೆಯಲ್ಲ ಕ್ರಿಯಾಶೀಲತೆ :ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ
ಡಾ| ಹೆಗ್ಗಡೆ, ಗುರುರಾಜ್ ಪೂಜಾರಿ, ಶಾಸಕ ಹರೀಶ್ ಪೂಂಜರಿಗೆ ಗೌರವ
Team Udayavani, Aug 11, 2022, 9:13 AM IST
ಬೆಳ್ತಂಗಡಿ : ಜ್ಞಾನಾರ್ಜನೆ ಯೊಂದೇ ಶಿಕ್ಷಣದ ಏಕೈಕ ಉದ್ದೇಶವಲ್ಲ. ಪಡೆದ ಜ್ಞಾನವನ್ನು ಅಗತ್ಯವಿರುವಲ್ಲಿ ಬಳಸಿಕೊಳ್ಳದೇ ಇದ್ದರೆ ಪಡೆದ ಶಿಕ್ಷಣ ವ್ಯರ್ಥ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆ, ಕೌಶಲವನ್ನು ಗುರುತಿಸಿ ಪೋಷಿಸಿದಾಗ ಅದು ವರವಾಗಿ ಪರಿಣಮಿಸುತ್ತದೆ ಎಂದು ರಾಜ್ಯಸಭೆಯ ನೂತನ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.
ಉಜಿರೆ ಎಸ್ಡಿಎಂ ಕಾಲೇಜು ವತಿಯಿಂದ ಬುಧವಾರ ಎಸ್ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ 2021-22ನೇ ಸಾಲಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿ ಮಾತನಾಡಿದರು.
ಅಧ್ಯಯನದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳುವ ಬದ್ಧತೆಯಿದ್ದಾಗ ಸಾಧನೆಯ ಹಾದಿ ಸ್ಪಷ್ಟವಾಗುತ್ತದೆ. ವ್ಯಕ್ತಿಗತ ಜ್ಞಾನ, ಕೌಶಲಗಳಿಗೆ ಸಂಸ್ಕಾರಯುತ ನಡವಳಿಕೆಯಿಂದ ಹೊಸದೊಂದು ಆಯಾಮ ದೊರಕುತ್ತದೆ. ಖಾಸಗಿ ಅಥವಾ ಸರಕಾರಿ ವಲಯಗಳಲ್ಲಿ ಕಾರ್ಯೋನ್ಮು ಖ ರಾಗಿರುವಾಗ ಇನ್ನೊಬ್ಬರೊಂದಿಗೆ ಹೇಗೆ ನಡೆದುಕೊಳ್ಳುತ್ತೇವೆ ಎನ್ನುವುದೇ ಮುಖ್ಯ ವಾಗುತ್ತದೆ. ಸೌಜನ್ಯದ ನಡವಳಿಕೆ ವೃತ್ತಿ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ. ಈ ಬಗೆಯ ತಿಳುವಳಿಕೆಯಿಂದ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಪದವಿ ಪೂರ್ಣಗೊಳ್ಳುವುದಕ್ಕೆ ಮುಂಚೆಯೇ ಸಾಧನೆಯ ಕನಸುಗಳನ್ನು ಸಾಕಾರಗೊಳಿ ಸಿಕೊಳ್ಳುವ ಹಂಬಲಗಳನ್ನಿರಿಸಿಬೇಕು. ಸ್ಪರ್ಧಾತ್ಮಕ ಜಗತ್ತಿನ ವೇಗಕ್ಕೆ ತಕ್ಕಂತೆ ಸಾಮರ್ಥ್ಯ ಹೆಚ್ಚಿಸಿಕೊಂಡಾಗ ಸಾಧನೆ ನಿಶ್ಚಿತವಾಗುತ್ತದೆ. ಉಜಿರೆಯ ಸರ್ವತೋಮುಖ ಪ್ರಗತಿಗೆ ಡಾ| ಬಿ. ಯಶೋವರ್ಮರ ಪ್ರಯೋಗಶೀಲ ಪ್ರಯತ್ನವನ್ನು ಸ್ಮರಿಸುತ್ತೇನೆ ಎಂದರು.
ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹಷೇìಂದ್ರ ಕುಮಾರ್ ಮತ್ತು ಡಾ| ಎಸ್. ಸತೀಶ್ಚಂದ್ರ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲ ಡಾ| ಎ. ಜಯಕುಮಾರ್ ಶೆಟ್ಟಿ ವಾರ್ಷಿಕ ವರದಿ ಸಾದರ ಪಡಿಸಿದರು. ಪ್ರಾಂಶುಪಾಲ ಡಾ| ಪಿ.ಎನ್. ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗ ಡೀನ್ ಡಾ| ಶಲೀಪ್ ಕುಮಾರಿ ವಂದಿಸಿದರು. ಪ್ರಾಧ್ಯಾಪಕ ಡಾ| ಕುಮಾರ್ ಹೆಗ್ಡೆ ಬಿ.ಎ. ಡಾ| ಚಿತ್ರಾ ಮತ್ತು ಡಾ| ನೆಫಿಸೆತ್ ಕಾರ್ಯಕ್ರಮ ನಿರೂಪಿಸಿದರು.
ಸಾಧಕರಿಗೆ ಗೌರವ
ರಾಜ್ಯಸಭಾ ಸದಸ್ಯರಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಉಜಿರೆಯ ರಸ್ತೆಯನ್ನು ಸುಂದರಗೊಳಿಸಿರುವ ಶಾಸಕ ಹರೀಶ್ ಪೂಂಜ ಮತ್ತು ಎಸ್ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ್ ಪೂಜಾರಿ ಅವ ರನ್ನು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿ ಸಮ್ಮಾನಿಸಲಾಯಿತು.
ಸಾರ್ಥಕ, ಪುಣ್ಯದ ಕ್ಷಣ
ಸಮ್ಮಾನ ಸ್ವೀಕರಿಸಿದ ಗುರುರಾಜ್ ಮಾತನಾಡಿ, ನಿರ್ದಿಷ್ಟ ಗುರಿಯೊಂದಿಗೆ ಯಾವುದೇ ಕ್ಷೇತ್ರದಲ್ಲಿ ಕಠಿನ ಪರಿಶ್ರಮ ಮತ್ತು ನಿರಂತರ ಅಭ್ಯಾಸ ಮಾಡಿದಲ್ಲಿ ಯಶಸ್ಸು ಖಚಿತ. ಪದಕ ಗೆದ್ದು ಮರಳಿದಾಗ ಡಾ| ಹೆಗ್ಗಡೆಯವರು ವಿಮಾನ ನಿಲ್ದಾಣದಲ್ಲಿ ಗೌರವಿಸಿದ್ದು ಸಾರ್ಥಕ ಪುಣ್ಯ ಕ್ಷಣವಾಗಿದೆ. 2010ರಿಂದ 5 ವರ್ಷಗಳ ಕಾಲ ನಾನು ಎಸ್ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಎಚ್., ಶಾರದಾ ಮತ್ತು ರಾಜೇಂದ್ರ ಪ್ರಸಾದ್ ಅವರ ನಿರಂತರ ತರಬೇತಿ ಮತ್ತು ಪ್ರೋತ್ಸಾಹವೂ ಇದರ ಹಿಂದೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ