ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೈದ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು
Team Udayavani, Jul 2, 2022, 10:19 PM IST
ಗುತ್ತಿಗಾರು : ದೇವಚಳ್ಳ ಗ್ರಾಮದ ತಳೂರುವಿನಲ್ಲಿ ಮಗಳನ್ನು ಕಟ್ಟಿಕೊಂಡು ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮೃತಳ ಅತ್ತೆ, ಮೈದುನ ಹಾಗೂ ಮೈದುನನ ಪತ್ನಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.
ಘಟನೆಯಲ್ಲಿ ತಾಯಿ ಮೃತಪಟ್ಟರೆ, ಮಗಳು ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾಳೆ. ಅಗ್ನಿಶಾಮಕ ದಳದ ಸಿಬಂದಿ ದಯಾನಂದ ಅವರ ಪತ್ನಿ ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ಕ್ಲರ್ಕ್ ಆಗಿರುವ ಗೀತಾ (26) ಮೃತಪಟ್ಟವರು. ಮಗಳು ಪೂರ್ವಿಕಾ ಪವಾಡ ಸದೃಶ ಎಂಬಂತೆ ಬದುಕಿದ್ದಾಳೆ. ಘಟನೆಯ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಗೀತಾ ಅವರ ತಾಯಿ ಪುಷ್ಪಾವತಿಯವರು ನೀಡಿದ ದೂರಿನಂತೆ ಗೀತಾಳ ಪತಿಯ ತಾಯಿ ಸೀತಮ್ಮ, ಮೈದುನ ಜಯಪ್ರಕಾಶ ಹಾಗೂ ಮೈದುನನ ಪತ್ನಿ ನಿಶ್ಮಿತಾ ಕಳೆದ ಎರಡು ವರ್ಷದಿಂದ ಆಕೆಗೆ ಕಿರುಕುಳ ನೀಡುತ್ತಿದ್ದಾರೆ.
ಸಣ್ಣಪುಟ್ಟ ವಿಷಯಕ್ಕೆ ಜಗಳವಾಡುತ್ತಿದ್ದರು. ಒಂದೇ ಮನೆಯಲ್ಲಿದ್ದರೂ ಈ ಮೂರು ಜನ ಮಗಳ ಜತೆ ಮಾತುಕತೆ ನಿಲ್ಲಿಸಿದ್ದಾರೆ. ಅವರು ಮೂವರು ಪ್ರತ್ಯೇಕವಾಗಿದ್ದು, ಇವಳನ್ನು ಪ್ರತ್ಯೇಕಿಸಿದ್ದರು. ಈ ಬಗ್ಗೆ ಅವಳು ನನ್ನಲ್ಲಿ ದೂರವಾಣಿಯಲ್ಲಿ ದೂರಿದ್ದಳು ಎಂದವರು ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ