ಎಚ್1ಎನ್1: ಬಂಟ್ವಾಳದ ಯುವಕ ಸಾವು
Team Udayavani, Mar 6, 2017, 12:04 PM IST
ಬಂಟ್ವಾಳ: ಉಳಿ ಗ್ರಾಮದ ಕಕ್ಯೆಪದವು ಪುಣೆದಡಿ ಗೋಪಾಲ ಭಂಡಾರಿ ಅವರ ಪುತ್ರ ಅನೂಪ್ ಕುಮಾರ್ (33) ಕಕ್ಯೆಪದವು ಎಚ್1ಎನ್1 ಜ್ವರದಿಂದ ರವಿವಾರ ಮೃತಪಟ್ಟಿದ್ದಾರೆ.
ಬೆಂಗಳೂರಿನ ಹೆಬ್ಟಾಳದ ಖಾಸಗಿ ಸಂಸ್ಥೆಯೊಂದರಲ್ಲಿ ಕಳೆದ 10 ವರ್ಷಗಳಿಂದ ತಾಂತ್ರಿಕ ಅಧಿಕಾರಿಯಾಗಿದ್ದ ಅವರು ಕೆಲವು ಸಮಯದಿಂದ ಜ್ವರದಿಂದ ಬಳಲುತ್ತಿದ್ದು, ಹೆಬ್ಟಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರವಿವಾರ ಸಂಜೆ ಅವರು ಮೃತಪಟ್ಟರು. ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಅವರು ಬೆಂಗಳೂರು ಭಂಡಾರಿ ಸಮಾಜ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕಕ್ಕೆಪದವಿನಲ್ಲಿ ಜೈತುಳುನಾಡು ಪುಣೆದಡಿ ಸಂಘವನ್ನು ಸ್ಥಾಪಿಸಿದ್ದ ಅವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ