ವಿವಿಧೆಡೆ ಆಲಿಕಲ್ಲು  ಮಳೆ; ಹಾನಿ


Team Udayavani, Apr 9, 2018, 8:21 AM IST

alikallu.jpg

ವೇಣೂರು: ರವಿವಾರ ಸಂಜೆ ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆ ಸುರಿದಿದೆ. ವೇಣೂರು ಪರಿಸರದಲ್ಲಿ ಅಡಿಕೆ ಗಾತ್ರದ ಆಲಿಕಲ್ಲುಗಳು ಭಾರೀ ಪ್ರಮಾಣದಲ್ಲಿ ಬಿದ್ದು ಜನರು ಗಾಬರಿಗೊಂಡರು.

ರವಿವಾರ ಸಂಜೆ 3.30ರ ಸುಮಾರಿಗೆ  ವೇಣೂರು, ಹೊಸಂಗಡಿ, ಕುಕ್ಕೇಡಿ ಭಾಗದಲ್ಲಿ ಗುಡುಗು ಮಿಂಚಿನ ಮಳೆಯ ಜತೆಗೆ ಆಲಿಕಲ್ಲು ಬೀಳಲು ಪ್ರಾರಂಭವಾಯಿತು. ದೊಡ್ಡ ಗಾತ್ರದ ಆಲಿಕಲ್ಲು ಗಳು ಭಾರೀ ಪ್ರಮಾಣದಲ್ಲಿ ಬಿದ್ದದ್ದರಿಂದ ಜನರು ದಿಗಿಲುಗೊಂಡರು. ದ್ವಿಚಕ್ರ ಸವಾರರು ಮಾತ್ರವಲ್ಲದೆ ಘನ ವಾಹನಗಳಿಗೂ ಸಂಚರಿಸಲು ಸಾಧ್ಯವಾಗದೆ ರಸ್ತೆ ಬದಿ ನಿಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ಮನೆ, ಕಟ್ಟಡಗಳ ಛಾವಣಿ ಮೇಲೆ ಆಲಿ ಕಲ್ಲುಗಳು ಬಿದ್ದು ಭಾರೀ ಸದ್ದು ಉಂಟಾಗಿ ಜನರು ಗಾಬರಿಗೀಡಾದರು. ವೇಣೂರು ಪರಿಸರದ ಮರಗಳಲ್ಲಿದ್ದ ಮಾವಿನ ಮಿಡಿ ಉದುರಿವೆ. ಗೇರು, ಬಾಳೆ ಕೃಷಿಗೂ ಹಾನಿಯಾಗಿದೆ.

ಪುತ್ತೂರು ತಾಲೂಕಿನ ಕೆದಿಲ, ಕಬಕ, ವಡ್ಯ, ಉಪ್ಪಿ ನಂಗಡಿ, ಬೆಳ್ತಂಗಡಿ ತಾಲೂಕಿನ ನಿಡ್ಲೆ, ಕಾವಳ ಮುಡೂರು, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ಐನೆಕಿದು ಗಳಲ್ಲಿಯೂ ಆಲಿಕಲ್ಲು ಸಹಿತ ಮಳೆಯಾಗಿದೆ. 

ಮರ ಬಿದ್ದು ಮನೆಗೆ ಹಾನಿ, ಗಾಯ
ಮಳೆ ಜತೆಗೆ ಬೀಸಿದ ಭಾರೀ ಗಾಳಿಯಿಂದ ಗುಂಡೂರಿ ರಾಮಪ್ಪ ಆಚಾರಿ ಅವರ ಮನೆ ಮೇಲೆ ಮರ ಬಿದ್ದು, ಅವರ ಸಹೋದರ ಸುಂದರ ಆಚಾರಿ ಗಾಯಗೊಂಡಿದ್ದಾರೆ. ಅವರನ್ನು ಸಿದ್ದಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಸುಮಾರು ಸಿಮೆಂಟ್ ಶೀಟ್ಗಳು ಪುಡಿಯಾಗಿದ್ದು, ಅಂಗಳದಲ್ಲಿ ನಿಲ್ಲಿಸಲಾಗಿದ್ದ 2 ಬೈಕ್ಗಳಿಗೂ ಹಾನಿಯಾಗಿದೆ. 

ಇಷ್ಟು ದೊಡ್ಡ ಆಲಿಕಲ್ಲು ಕಂಡಿಲ್ಲ
ವೇಣೂರಿನ ಹಿರಿಯ ವೈದ್ಯ 87ರ ಹರೆಯದ ಡಾ| ಬಿ.ಪಿ. ಇಂದ್ರ ಹೇಳುವಂತೆ ಅವರು ಯುವಕರಾಗಿದ್ದ ವೇಳೆ ಆಲಿಕಲ್ಲು ಮಳೆ ಬಿದ್ದಿದೆ. ಆದರೆ ಅದು ಹೆಕ್ಕುವಷ್ಟರಲ್ಲಿ ನೀರಾಗುತ್ತಿತ್ತು. ಇಷ್ಟೊಂದು ದೊಡ್ಡ ಗಾತ್ರದ ಆಲಿಕಲ್ಲುಗಳು ಭಾರೀ ಪ್ರಮಾಣದಲ್ಲಿ ಬಿದ್ದಿರುವುದನ್ನು ಕಂಡಿಲ್ಲ. ಮಾವು, ಅಡಿಕೆ, ಗೇರು, ಬಾಳೆ ಸಹಿತ ಕೃಷಿಗೆ ಆಲಿಕಲ್ಲು ಮಳೆ ಒಳ್ಳೆಯದಲ್ಲ. ಆದರೆ ಬಿರುಬೇಸಗೆಯಲ್ಲಿ ಸುರಿದ ಮಳೆ ಜೀವರಾಶಿಗೆ ಈ ಮಳೆ ತಂಪು ಒದಗಿಸಿದೆ ಎಂದಿದ್ದಾರೆ. 

ವೇಣೂರಿನ ಕೃಷ್ಣ ಭಟ್ ಅವರು ಮಾಹಿತಿ ನೀಡಿ, ಸುಮಾರು 100 ಚದರ ಅಡಿ ವಿಸ್ತೀರ್ಣದಲ್ಲಿ ಎರಡ ರಿಂದ ಮೂರು ಬಕೆಟುಗಳಷ್ಟು ಆಲಿಕಲ್ಲು ಬಿದ್ದಿವೆ ಎಂದಿದ್ದಾರೆ. ಬಾಳೆ ಎಲೆಗಳು ಚಿಂದಿಯಾಗಿವೆ, ಇತರ ಮರಗಳೂ ಹಾನಿಗೊಂಡಿವೆ ಎಂದು ವಿವರಿಸಿದ್ದಾರೆ.  
 

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.