ಹಳೆಯಂಗಡಿ: ಡಿವೈಡರ್ಗೆ ಬೈಕ್ ಢಿಕ್ಕಿ, ಯುವಕ ದಾರುಣ ಸಾವು
Team Udayavani, Mar 25, 2022, 5:53 PM IST
ಹಳೆಯಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿಯಲ್ಲಿ ಬೈಕೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಮೂಲ್ಕಿ ಚಿತ್ರಾಪು ನಿವಾಸಿ ಗಣೇಶ್ ದೇವಾಡಿಗ (25) ಎಂದು ಗುರುತಿಸಲಾಗಿದೆ.
ಗಣೇಶ್ ಸುರತ್ಕಲ್ನ ಎನ್ಐಟಿಕೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ದುಡಿಯುತ್ತಿದ್ದರು. ಬೆಳಿಗ್ಗೆ ತನ್ನ ಕರ್ತವ್ಯಕ್ಕೆಂದು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಮುದ್ದೇಬಿಹಾಳ: ಸರ್ಕಾರಿ ಶಾಲೆಯ ಛಾವಣಿ ಕುಸಿತ: ವಿದ್ಯಾರ್ಥಿಗಳಿಗೆ ಗಾಯ
ಅಪಘಾತ ನಡೆದ ತಕ್ಷಣ ಹಳೆಯಂಗಡಿಯ ರಿಕ್ಷಾ ಚಾಲಕ ಯೋಗೀಶ ಅವರು ಗಮನಿಸಿ ಕೂಡಲೇ ಪೂಜಾ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ