Haleyangadi: ಹಳೆಯಂಗಡಿ- ಒಂದು ಚರಂಡಿಯ ದುರಂತ ಕಥೆ…


Team Udayavani, Dec 1, 2023, 5:10 PM IST

Haleyangadi: ಹಳೆಯಂಗಡಿ- ಒಂದು ಚರಂಡಿಯ ದುರಂತ ಕಥೆ…

ಹಳೆಯಂಗಡಿ: ಇಲ್ಲಿನ ಹಳೆಯಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಇಂದಿರಾನಗರದ ಜನವಸತಿ ಪ್ರದೇಶದ ಚರಂಡಿಯಲ್ಲಿ ಹೂಳು ತುಂಬಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ದುರಸ್ತಿ ಅಥವಾ ತೆರವು ಮಾಡುವ ಬಗ್ಗೆ ಗ್ರಾಮ ಪಂಚಾಯತ್‌ ತಯಾರಿದ್ದರೂ ಬಿಲ್ಲು ಪಾವತಿಯ ವಿವಾದದಿಂದ ಸಾಧ್ಯವಾಗಿಲ್ಲ.

ಗಬ್ಬೆದ್ದು ನಾರುತ್ತಿದೆ
ಇಂದಿರಾನಗರದ ಉದ್ಯಾನವನದ ಸುತ್ತಲೂ ಮೇಲ್ಭಾಗದ ಜನವಸತಿ ಪ್ರದೇಶದ ಮನೆಗಳಲ್ಲಿನ ಕೊಳಚೆ ನೀರು ನೇರವಾಗಿ ಹರಿಯುವ ಚರಂಡಿ ತುಂಬಿದ ಅನಂತರ ರಸ್ತೆಯ ಮೇಲೆ ಹರಿದಾಡಿ ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ನಡೆದಾಡಲು ತೆರಳಲು ಆಗಿದೆ. ಜತೆಗೆ ಸಾಂಕ್ರಾಮಿಕ ರೋಗಗಳನ್ನು ಆಹ್ವಾನಿಸುವ ವಾತಾವರಣ ನಿರ್ಮಾಣವಾಗಿದೆ. ಆರೋಗ್ಯ ಇಲಾಖೆಯೂ ಈ ಬಗ್ಗೆ ಮೌನವಹಿಸಿದೆ ಹಾಗೂ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದರೂ ಬಿಲ್‌ ಪಾವತಿ ವಿವಾದದ ಕಾರಣ ನೀಡುತ್ತಾರೆ ಎಂಬುವುದು ಗ್ರಾಮಸ್ಥರ ಆರೋಪ.

ಬಿಲ್ಲು ಪಾವತಿಯ ವಿವಾದ
ಉದಯವಾಣಿ ಸುದಿನವು ಈ ಬಗ್ಗೆ ಗ್ರಾಮ ಪಂಚಾಯತ್‌ನಲ್ಲಿ ಮಾಹಿತಿ ಕಲೆ ಹಾಕಿದಾಗ ಈ ಚರಂಡಿಯ ದುರಸ್ತಿ ಸಹಿತ ಶಾಶ್ವತ ಪರಿಹಾರಕ್ಕಾಗಿ 1.5 ಲಕ್ಷ ರೂ. ಮೀಸಲಿರಿಸಲಾಗಿದೆ. ಆದರೆ ಇದೇ ವಾರ್ಡ್‌ನಲ್ಲಿ ಗ್ರಾಮ ಪಂಚಾಯತ್‌ನ ಮೂಲಕ ಈ ಹಿಂದೆ
ಕಾಮಗಾರಿಯೊಂದನ್ನು ನಡೆಸಲಾಗಿತ್ತು ಇದರ ಬಿಲ್ಲನ್ನು ಗುತ್ತಿಗೆದಾರರಿಗೆ ಪಾವತಿಸದ ಕಾರಣ ಇಂದಿರಾ ನಗರದ ವಾರ್ಡ್‌ ನ ಗ್ರಾಮ ಪಂಚಾ ಯತ್‌ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದ್ದರಿಂದ ಪಂಚಾಯತ್‌ ನ ಸಾಮಾನ್ಯ ಸಭೆಯಲ್ಲಿ ವಾದ- ವಿವಾದದಿಂದ ಮಂಜೂರಾದ  ಯೋಜನೆಯನ್ನು ಆಡಳಿತ ಮಂಡಳಿ ಜಾರಿ ಮಾಡಲು ಈ ಹಿಂದಿನ ಬಿಲ್ಲನ್ನು ಪಾವತಿಸಲು ಸಹಕಾರ ನೀಡಬೇಕು ಎಂದು ಹೇಳಿದೆ. ಆದರೆ ಹಿಂದಿನ ಬಿಲ್ಲನ್ನು ಪಾವತಿಸಲು ವಿರೋಧ ಪಕ್ಷದ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿದೆ. ಹಿಂದಿನ ಬಿಲ್‌ ಪಾವತಿಯಾಗದ ಕಾರಣ ಯಾವುದೇ ಗುತ್ತಿ ಗೆದಾರರು ಕಾಮಗಾರಿ ಕೈಗೊಳ್ಳಲು ಮುಂದೆ ಬರುತ್ತಿಲ್ಲ.

ಹಳೆ ಬಿಲ್ಲಿಗೆ ತಾಂತ್ರಿಕ ಅಡಚಣೆ
ನಡೆಸಿದ ಕಾಮಗಾರಿಯ ಮುಂದುವರಿದ ಕೆಲಸ ಎಂದು ಬಿಲ್ಲು ಮಾಡುವಾಗ ಅದರ ತಾಂತ್ರಿಕಾಂಶವನ್ನು ಹೇಗೆ ಮಾಡುತ್ತಾರೆ.
ಅಲ್ಲಿ ಆ ಕೆಲಸ ಮಾಡಿರಬೇಕಲ್ಲವೇ ಇದೇ ನಮ್ಮ ಆಕ್ಷೇಪ, ಕಾಮಗಾರಿಯ ಜಿಪಿಆರ್‌ ಎಸ್‌ ಹೇಗೆ ಮಾಡುತ್ತಾರೆ. ಯಾರೇ ಆಗಿರಲಿ ಪ್ರಾಮಾಣಿಕತೆಯಿಂದ ಕಾಮಗಾರಿ ನಡೆಸಲಿ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಕಾಮಗಾರಿ ನಡೆಸಬೇಕು, ಗುತ್ತಿಗೆದಾರರ ಮಾತನ್ನು ಕೇಳುವಂತಾಗಬಾರದು. ಸೂಕ್ತವಾದ ದಾಖಲೆಯೊಂದಿಗೆ ಬಿಲ್ಲು ಪಾವತಿಯಾಗಲಿ ಇಲ್ಲಿನ ಜ್ವಲಂತ ಸಮಸ್ಯೆಗೆ ಕೂಡಲೆ ಪರಿಹಾರ ಕಾಣಬೇಕು ಎಂಬುದು ನಮ್ಮ ಒತ್ತಾಸೆ ಎನ್ನುತ್ತಾರೆ ಸದಸ್ಯ ಅಬ್ದುಲ್‌ ಖಾದರ್‌.

ಕಾಮಗಾರಿ ನಡೆಸಲು ಸಿದ್ಧ
ಇದೇ ವಾರ್ಡ್‌ನ ಸದಸ್ಯರೊಬ್ಬರು ಸೂಚಿಸಿದಂತೆ ಕಾಮಗಾರಿಯನ್ನು ನಡೆಸಲಾಗಿದೆ. ಅದರ ಮುಂದುವರಿದ ಕಾಮಗಾರಿಯನ್ನು ಎಂಜಿನಿಯರ್‌ ಮೂಲಕವೇ ನಡೆಸಿದ್ದರ ಬಿಲ್ಲನ್ನು ನೀಡಲು ಆ ವಾರ್ಡ್‌ನ ಸದಸ್ಯರು ಬಲವಾದ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಅಡ್ಡಿ ಪಡಿಸಿದ್ದರಿಂದ ಗುತ್ತಿಗೆಗಾರರು ಯಾರೂ ಕಾಮಗಾರಿ ನಡೆಸಲು ಮುಂದೆ ಬರುತ್ತಿಲ್ಲ, ನಡೆದ ಕಾಮಗಾರಿಯಲ್ಲಿ ಯಾವುದೇ ಗೊಂದಲ ಇಲ್ಲದಿದ್ದರೂ ಸುಖಾಸುಮ್ಮನೆ ಅಡ್ಡಿ ಪಡಿಸುತ್ತಿರುವುದು ಸರಿಯಲ್ಲ. ಚರಂಡಿ ಕಾಮಗಾರಿ ನಡೆಸಲು ನಾವು ಸಹ ಸಜ್ಜಾಗಿದ್ದೇವೆ ಹಣವನ್ನು ಸಹ ಮೀಸಲಿರಿಸಲಾಗಿದೆ ಮೊದಲು ಹಳೆ ಬಿಲ್ಲನ್ನು ಪಾವತಿಸಲು ಅವಕಾಶ ಮಾಡಿಕೊಡಬೇಕು.
ಪೂರ್ಣಿಮಾ, ಅಧ್ಯಕ್ಷರು, ಹಳೆಯಂಗಡಿ ಗ್ರಾ.ಪಂ

ಕಿಸೆಯಿಂದ ಹಣ ಹಾಕಿ ಕೆಲಸ
ಚರಂಡಿಯಲ್ಲಿ ಕೊಳಚೆ ನೀರು ಹರಿದಾಡಿ, ದುರ್ವಾಸನೆ, ಆರೋಗ್ಯ ಸಮಸ್ಯೆ ಇದ್ದರೂ ಪಂಚಾಯತ್‌ನಲ್ಲಿ ತಮ್ಮ ಸ್ವ ಹಿತಾಸಕ್ತಿಯ ಹಠ ಸಾಧನೆ ಆಗುತ್ತಿದೆ. ನಾನೇ ಸ್ವತಃ ಕಿಸೆಯಿಂದ ಹಣಕೊಟ್ಟು ತಾತ್ಕಾಲಿಕ ದುರಸ್ತಿ ಮಾಡಿಸಿದ್ದೇನೆ, ಜನರ ಸಮಸ್ಯೆಗೆ ಸ್ಪಂದಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು, ಸ್ವ ಪ್ರತಿಷ್ಠೆಯಿಂದ ಏನೂ ಸಾಧನೆಯಾಗುವುದಿಲ್ಲ ಎನ್ನುತ್ತಾರೆ ಸದಸ್ಯ ಅಬ್ದುಲ್‌ ಅಜೀಜ್‌.

ಸದಸ್ಯರ ಆಕ್ಷೇಪ ಕಾಮಗಾರಿ ಈ ಹಿಂದಿನ ಪಿಡಿಒ ಅವರ ಅವಧಿಯಲ್ಲಿ ನಡೆದಿರುವುದು. ಇದಕ್ಕೆ ಪಂಚಾಯತ್‌ನ ಸದಸ್ಯರ ಆಕ್ಷೇಪವು ಸಾಮಾನ್ಯ ಸಭೆಯಲ್ಲಿ ವ್ಯಕ್ತಪಡಿಸಿದ್ದರಿಂದ ತಡೆಹಿಡಿಯಲಾಗಿದೆ. ಎಲ್ಲ ಸದಸ್ಯರ ಒಮ್ಮತದ ನಿರ್ಣಯಕ್ಕೆ ಬದ್ಧರಾದಲ್ಲಿ ಸುಲಭವಾಗಿ ಸಮಸ್ಯೆ ಇತ್ಯರ್ಥವಾಗುತ್ತದೆ. ಸದಸ್ಯರೊಬ್ಬರು ತಾತ್ಕಾಲಿಕವಾಗಿ ದುರಸ್ತಿ ಮಾಡಿಸಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಧಿಕಾರಿಗಳನ್ನು ಈ ವಿವಾದಕ್ಕೆ ಎಳೆದುತರಬೇಡಿ.
-ದೀಪ್ತಿ, ಪಿಡಿಒ (ಪ್ರಭಾರ)

*ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.