ಅರ್ಧದಷ್ಟು ಕೆಎಸ್ಸಾರ್ಟಿಸಿ ನೌಕರರಿಗೆ ಮತದಾನ ಭಾಗ್ಯವಿಲ್ಲ!

ಅಲ್ಲಿ ಓಟು, ಇಲ್ಲಿ ಡ್ಯೂಟಿ

Team Udayavani, Apr 26, 2019, 6:00 AM IST

BU-S

ಸಾಂದರ್ಭಿಕ ಚಿತ್ರ.

 ವಿಶೇಷ ವರದಿ-ಮಹಾನಗರ: ಸಾರ್ವ ಜನಿಕರಿಗೆ ಪ್ರತಿದಿನ ಉತ್ತಮ ಸೇವೆ ಸಲ್ಲಿಸುತ್ತಿರುವ ದೇಶದ ನಂಬರ್‌ ಒನ್‌ ಸಾರಿಗೆ ಸಂಸ್ಥೆಯಾದ ಕೆಎಸ್ಸಾರ್ಟಿಸಿಯ ಹೆಚ್ಚಿನ ಸಿಬಂದಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನದಿಂದ ವಂಚಿತರಾಗಿದ್ದಾರೆ.

ಉತ್ತರ ಕನ್ನಡ ಸಹಿತ ರಾಜ್ಯದ 14 ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆದಿದ್ದು, ಮಂಗಳೂರು, ಪುತ್ತೂರು, ಉಡುಪಿ ವಿಭಾಗಗಳಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಕೆಎಸ್ಸಾರ್ಟಿಸಿ ಚಾಲಕ, ನಿರ್ವಾಹಕ ಸಹಿತ ಮೆಕ್ಯಾನಿಕ್‌ ವಿಭಾ ಗದಲ್ಲಿ ದುಡಿಯುತ್ತಿರುವ ಅರ್ಧದಷ್ಟು ಕಾರ್ಮಿಕರು ಮತದಾನಕ್ಕೆ ತೆರಳಲು ಸಾಧ್ಯವಾಗಲಿಲ್ಲ.

ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗ ದಲ್ಲಿ 1,800 ಚಾಲಕರು ನಿರ್ವಾಹಕರು ಸೇರಿ ಒಟ್ಟು ಸುಮಾರು 2,500 ಮಂದಿ ಸಿಬಂದಿ, ಪುತ್ತೂರು ವಿಭಾಗದಲ್ಲಿ 1,824 ಚಾಲಕರು, ನಿರ್ವಾಹಕರು ಸೇರಿ 2,423 ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಯಾಣಿಕರಿಗೆ ಬಸ್‌ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಬಾರದು ಎಂಬ ಉದ್ದೇಶದಿಂದ ಹೆಚ್ಚಿನ ಕಾರ್ಮಿ ಕರು ಕೆಲಸ ನಿರ್ವಹಿಸಿದ್ದರು. ಕೆಎಸ್ಸಾರ್ಟಿಸಿ ಅಧಿಕಾರಿಗಳು ಹೇಳುವ ಪ್ರಕಾರ ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗ ದಲ್ಲಿ ಉ.ಕ. ಜಿಲ್ಲೆಯ ಶೇ.50ರಷ್ಟು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನುಳಿದ ಅರ್ಧದಷ್ಟು ಮಂದಿ ಮತದಾನಕ್ಕೆಂದು ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ.

ಮಂಗಳೂರು ಕೆಎಸ್ಸಾರ್ಟಿಸಿ ವಿಭಾ ಗದಿಂದ (ಮಂಗಳೂರಿನಲ್ಲಿ-3, ಕುಂದಾ ಪುರ, ಉಡುಪಿ) ಪ್ರತೀ ದಿನ ವಿವಿಧ ಪ್ರದೇಶಗಳಿಗೆ ಸುಮಾರು 350ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಅದರಂತೆಯೇ ಪುತ್ತೂರು ವಿಭಾಗದಿಂದ (ಪುತ್ತೂರು, ಬಿ.ಸಿ. ರೋಡ್‌, ಧರ್ಮಸ್ಥಳ, ಮಡಿಕೇರಿ, ಸುಳ್ಯ) ಸುಮಾರು 560 ಬಸ್‌ಗಳು ಸಂಚರಿಸುತ್ತವೆ. ಇವುಗಳಲ್ಲಿ ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಪುತ್ತೂರು ಡಿಪೋದ ಸುಮಾರು 50ಕ್ಕೂ ಹೆಚ್ಚು ಕೆಎಸ್ಸಾರ್ಟಿಸಿ ಬಸ್‌ಗಳು ಚುನಾವಣ ಕರ್ತವ್ಯಕ್ಕೆ ತೆರಳಿದ್ದವು.

ಶೇ.30ರಷ್ಟು ನೌಕರರಿಗೆ ಮಾತ್ರ ಮತದಾನಕ್ಕೆ ಅವಕಾಶ
ಕೆಎಸ್ಸಾರ್ಟಿಸಿ ಸಿಬಂದಿ ಮತ್ತು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಅವರು “ಉದಯ ವಾಣಿ’ಗೆ ಪ್ರತಿಕ್ರಿಯಿಸಿ, ಕೆಎಸ್ಸಾರ್ಟಿಸಿ ಚಾಲಕರು, ನಿರ್ವಾಹಕರು ಸಹಿತ ಇತರ ಸಿಬಂದಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯ ಚುನಾವಣ ಆಯುಕ್ತರಿಗೆ ಈ ಹಿಂದೆಯೇ ಪತ್ರ ಬರೆದಿದ್ದೇವೆ. ಮೇಲಧಿಕಾರಿಗಳಿಗೆ ತಿಳಿ ಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಾರೆ.
ಇದರಿಂದಾಗಿ ಸುಮಾರು ಶೇ.30ರಷ್ಟು ನೌಕರರಿಗೆ ಮಾತ್ರ ಮತದಾನಕ್ಕೆ ಅವಕಾಶ ದೊರಕಿದೆ ಎನ್ನುತ್ತಾರೆ.

ಅಂಚೆ ಮತದಾನಕ್ಕೆ ಅವಕಾಶವಿಲ್ಲ
ಚುನಾವಣ ಕರ್ತವ್ಯಕ್ಕೆ ನಿಯೋಜಿಸಿರುವ ಬಸ್‌ ಚಾಲಕ, ನಿರ್ವಾಹಕರಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ. ಆದರೆ ಎಂದಿನಂತೆ ಕರ್ತವ್ಯ ನಿರ್ವಹಿ ಸುತ್ತಿರುವ ಕಾರ್ಮಿಕರಿಗೆ ಮತ ದಾನಕ್ಕೆ ಅವಕಾಶವಿರಲಿಲ್ಲ. ಆದರೂ ಕೆಲವು ಸಿಬಂದಿ ರಜೆ ಹಾಕಿ ಮತದಾನಕ್ಕೆಂದು ತಮ್ಮ ಊರುಗಳಿಗೆ ತೆರಳಿದ್ದರು. ಇದೇ ಕಾರಣಕ್ಕೆ ಜಿಲ್ಲೆಯ ಕೆಲವು ರೂಟ್‌ಗಳಲ್ಲಿ ಬಸ್‌ ಸಂಚಾರದಲ್ಲಿಯೂ ವ್ಯತ್ಯಯವಾಗಿತ್ತು.

 ಸಿಬಂದಿ ಮತದಾನಕ್ಕೆ
ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಸಿಬಂದಿ ಮತದಾನಕ್ಕೆ ತಮ್ಮ ಊರುಗಳಿಗೆ ತೆರಳಿದ್ದಾರೆ. ಉತ್ತರ ಕನ್ನಡ ಮೂಲದ ಕಾರ್ಮಿಕರು ತಮ್ಮ ಎಪಿಕ್‌ ಕಾರ್ಡ್‌ ಅನ್ನು ತಾವು ದುಡಿಯುವ ಪ್ರದೇಶಕ್ಕೆ ವರ್ಗಾವಣೆ ಮಾಡಿಕೊಂಡಿಲ್ಲ. ಇದರಿಂದ ಕೆಲವೊಬ್ಬರು ಮತದಾನಕ್ಕೆ ತಮ್ಮ ಊರುಗಳಿಗೆ ತೆರಳುವಂತಾಗಿದೆ.
 - ದೀಪಕ್‌ ಕುಮಾರ್‌
ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗಾಧಿಕಾರಿ

 ಮನವಿ ಮಾಡಿದ್ದೆವು
ಕೆಎಸ್ಸಾರ್ಟಿಸಿಯ ಎಲ್ಲ ಸಿಬಂದಿ ಚುನಾವಣೆಯ ದಿನ ಮತದಾನಕ್ಕೆ ಅವಕಾಶ ಕೊಡಬೇಕು. ಇಲ್ಲವಾದರೆ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು. ಈ ಬಗ್ಗೆ ಈಗಾಗಲೇ ಮುಖ್ಯ ಚುನಾವಣ ಆಯುಕ್ತರಿಗೆ ಮತ್ತು ಸಾರಿಗೆ ನಿಗಮಕ್ಕೆ ಮನವಿ ನೀಡಿದ್ದೆವು. ಆದರೆ ಪರಿಗಣಿಸಲಿಲ್ಲ. ಮುಂಬರುವ ಚುನಾವಣೆಯ ವೇಳೆ ನಮ್ಮ ಮನವಿ ಪರಿಗಣಿಸದಿದ್ದರೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ.
– ಪ್ರವೀಣ್‌ ಕುಮಾರ್‌
ಕೆಎಸ್ಸಾರ್ಟಿಸಿ ಸಿಬಂದಿ ಮತ್ತು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.