ವ್ಯಾಪ್ತಿ ಪ್ರದೇಶದಿಂದ ದೂರವಾಗುತ್ತಿದೆ ಬಿಎಸ್ಸೆನ್ನೆಲ್‌

ಗ್ರಾಮೀಣ ಭಾಗದಲ್ಲಿ ಗ್ರಾಹಕರಿಗೆ ಕೈಕೊಡುತ್ತಿದೆ ನೆಟ್‌ವರ್ಕ್‌

Team Udayavani, Apr 12, 2019, 6:00 AM IST

h-26

ಬೆಳ್ಳಾರೆ ಬಿಎಸ್ಸೆನ್ನೆಲ್‌ ಟವರ್‌ ಮತ್ತು ಕಚೇರಿ.

ಬೆಳ್ಳಾರೆ: ಟವರ್‌ನ ಅಡಿಯಲ್ಲಿ ನಿಂತರೂ ಬೆಳ್ಳಾರೆ ಹಾಗೂ ಆಸುಪಾಸಿನ ಗ್ರಾಮೀಣ ಭಾಗಗಳಲ್ಲಿ ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸಿಗುತ್ತಿಲ್ಲ. ವಿದ್ಯುತ್‌ ಹೋದರೆ ಇಲ್ಲಿ ಮೊಬೈಲ್‌ ಸಿಗ್ನಲ್‌ ಸಿಗುವುದೇ ಇಲ್ಲ. ಜನರೇಟರ್‌ ಇದ್ದರೂ ನಿರ್ವಹಣೆ ಕೊರತೆಯಿಂದ ಕೈಕೊಡುವ ನೆಟ್‌ವರ್ಕ್‌ನಿಂದಾಗಿ ಗ್ರಾಹಕರು ಬೇಸತ್ತು ಹೋಗಿದ್ದಾರೆ.

ಬಿಎಸ್ಸೆನ್ನೆಲ್‌ ಸಿಮ್‌ ಅನ್ನು ಖಾಸಗಿ ಕಂಪೆನಿಗಳ ನೆಟ್‌ವರ್ಕ್‌ಗೆ ಬದಲಾಯಿಸಿಕೊಳ್ಳಲು (ಪೋರ್ಟ್‌) ಗ್ರಾಹಕರು ನಿರ್ಧರಿಸಿದ್ದಾರೆ. ವಿದ್ಯುತ್‌ ಇಲ್ಲದಿರುವಾಗ ಗ್ರಾಮೀಣ ಭಾಗದ ಬಿಎಸ್ಸೆನ್ನೆಲ್‌ ನಂಬರ್‌ಗೆ ಕರೆ ಮಾಡಿದರೆ ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ ಎನ್ನುವ ಉತ್ತರ ಸಿಗುತ್ತದೆ. ಪ್ರತಿದಿನ ತಾಂತ್ರಿಕ ತೊಂದರೆಗಳು ಕಾಡುತ್ತಲೇ ಇದ್ದು, ಇಲಾಖೆಯ ನಿರ್ಲಕ್ಷ್ಯದಿಂದ ಸರಕಾರಿ ಸ್ವಾಮ್ಯದ ಸಂಸ್ಥೆಯ ನೆಟ್‌ವರ್ಕ್‌ ಗ್ರಾಹಕರಿಂದ ದೂರವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇದರ ಮುನ್ಸೂಚನೆ ಎಂಬಂತೆ ಟವರ್‌ಗಳ ನಿರ್ವಹಣೆ ಆಗಲೇ ಸ್ಥಗಿತವಾಗಿದೆ.

ಉದ್ಯೋಗಿಗಳ ಸಮಸ್ಯೆ
ಬಿಎಸ್ಸೆನ್ನೆಲ್‌ ಟವರ್‌ನ ನಿರ್ವಹಣೆಗೆ ಕನಿಷ್ಠ ಇಬ್ಬರು ಉದ್ಯೋಗಿಗಳಾದರೂ ಬೇಕು. ಆದರೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡವರಿಗೆ ಸಂಬಳ ಸಿಗದೆ ಉದ್ಯೋಗ ಬಿಟ್ಟಿದ್ದಾರೆ. ವಿದ್ಯುತ್‌ ಕೈಕೊಟ್ಟಾಗ ಜನರೇಟರ್‌ ನಿರ್ವಹಣೆಗೆ ಕೆಲಸದವರಿಲ್ಲದೆ ನೆಟ್‌ವರ್ಕ್‌ ಕೈಕೊಡುತ್ತಿದೆ. ಬೆಳ್ಳಾರೆಯಲ್ಲಿ ಅಧಿಕಾರಿಯೇ ಟವರ್‌ ನಿರ್ವಹಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನೆಟ್‌ವರ್ಕ್‌ ಸಮಸ್ಯೆ ಬಗ್ಗೆ ನಿಗಮವನ್ನು ಸಂಪರ್ಕಿಸಿದರೆ ಕೂಲಿಯಾಳುಗಳ ಸಮಸ್ಯೆಯನ್ನೇ ಮುಂದಿಡುತ್ತಿದ್ದಾರೆ. ಆದರೆ, ಗ್ರಾಮೀಣ ಭಾಗದಲ್ಲಿ ಖಾಸಗಿ ನೆಟ್‌ವರ್ಕ್‌ ಗಳೂ ಇಲ್ಲದೆ ಬಿಎಸ್ಸೆನ್ನೆಲ್‌ ಗ್ರಾಹಕರು ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ವಿದ್ಯುತ್ತಿದ್ದರೆ ನೆಟ್‌ವರ್ಕ್‌ ಇರುತ್ತದೆ. ಕಲ್ಮಡ್ಕ, ನಿಂತಿಕಲ್ಲು, ಎಡಮಂಗಲ, ಬಾಳಿಲ, ಕಳಂಜ ಮೊದಲಾದ ಗ್ರಾಮೀಣ ಭಾಗದಲ್ಲಿ ಬಿಎಸ್ಸೆನ್ನೆಲ್‌ ಸಿಗ್ನಲ್‌ ಸಮಸ್ಯೆ ತೀವ್ರವಾಗಿದೆ.

ಸ್ಥಿರ ದೂರವಾಣಿಯೂ ಭಿನ್ನವಾಗಿಲ್ಲ
ಗ್ರಾ.ಪಂ., ಹಣಕಾಸು ಸಂಸ್ಥೆಗಳು, ವಾಣಿಜ್ಯ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು, ವ್ಯಾಪಾರ ಮಳಿಗೆಗಳು, ಆನ್‌ಲೈನ್‌ ಸೇವಾ ಕೇಂದ್ರಗಳು ನಿರಂತರ ಬಿಎಸ್ಸೆನ್ನೆಲ್‌ ಮುಖಾಂತರ ವ್ಯವಹಾರ ನಡೆಸುತ್ತಿದ್ದು, ಇಂಟರ್‌ನೆಟ್‌ ವ್ಯವಸ್ಥೆಯಲ್ಲೂ ತೊಡಕುಗಳಾಗುತ್ತಿದೆ. ಬ್ಯಾಂಕ್‌ ವ್ಯವಹಾರ ಆನ್‌ಲೈನ್‌ ಮುಖಾಂತರವೇ ನಡೆಯುತ್ತಿ¤ದ್ದು, ನೆಟ್‌ವರ್ಕ್‌ ಸಮಸ್ಯೆಯಿಂದ ಗ್ರಾಹಕರು ಬ್ಯಾಂಕ್‌ಗಳಲ್ಲಿ ಕಾಯುವ ಸ್ಥಿತಿ ಇದೆ. ಹೆಚ್ಚಿನ ಸ್ಥಿರ ದೂರವಾಣಿ ಗ್ರಾಹಕರು ಬೇಸತ್ತು ಸಂಪರ್ಕವನ್ನೇ ರದ್ದುಪಡಿಸುತ್ತಿದ್ದಾರೆ.

ಭರವಸೆ ಈಡೇರಲೇ ಇಲ್ಲ
ಬೆಳ್ಳಾರೆ ಪರಿಸರದಲ್ಲಿ ಅತೀ ಹೆಚ್ಚು ಬಿಎಸ್ಸೆನ್ನೆಲ್‌ ಮೊಬೈಲ್‌ ಹಾಗೂ ಸ್ಥಿರ ದೂರವಾಣಿ ಗ್ರಾಹಕರಿದ್ದು, ಇಲ್ಲಿನ ನೆಟ್‌ವರ್ಕ್‌ ಹಾಗೂ ಇತರ ಸಮಸ್ಯೆಗಳ ಪರಿಹಾರಕ್ಕೆ ರೋಟರಿ ಕ್ಲಬ್‌ ಹಾಗೂ ವರ್ತಕರ ಸಂಘ ಮೂರು ವರ್ಷಗಳ ಹಿಂದೆ ಬಿಎಸ್ಸೆನ್ನೆಲ್‌ ಅಧಿಕಾರಗಳೊಂದಿಗೆ ಸಂವಾದ ಏರ್ಪಡಿಸಿ ಗ್ರಾಹಕರ ಸಮಸ್ಯೆಗಳನ್ನು ವಿವರಿಸಿದ್ದರು. ನೆಟ್‌ವರ್ಕ್‌, ಸ್ಥಿರ ದೂರವಾಣಿ ಹಾಗೂ ಬ್ರಾಡ್‌ ಬ್ಯಾಂಡ್‌ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದ್ದರು. ಆಗ ಭರವಸೆ ನೀಡಿ ತೆರಳಿದ್ದ ಅಧಿಕಾರಿಗಳು ತಿರುಗಿಯೂ ನೋಡಿಲ್ಲ.

ನಮ್ಮಿಂದಾದ ಪ್ರಯತ್ನ
ಡೀಸೆಲ್‌ ಸಮಸ್ಯೆ ಇರುವುದು ನಿಜ. ಕಾರ್ಮಿಕರ ಸಮಸ್ಯೆಯೂ ಇದೆ. ಟವರ್‌ ನಿರ್ವಹಣೆಗೆ ನಮ್ಮಿಂದಾದ ಪ್ರಯತ್ನ ಮಾಡುತ್ತಿದ್ದೇವೆ.
ಶಿವರಾಮ ಗೌಡ
ಉಪ ವಿಭಾಗೀಯ ನಿಯಂತ್ರಣಾಧಿಕಾರಿ, ಬೆಳ್ಳಾರೆ‌

 ಸಮಸ್ಯೆ ಬಗೆಹರಿಸಿ
ಸಮಸ್ಯೆ ಇಂದು ನಿನ್ನೆಯದಲ್ಲ. ಹಲವು ವರ್ಷಗಳಿಂದ ನೆಟ್‌ವರ್ಕ್‌ ಸಮಸ್ಯೆಯಿಂದ ಜನ ಬೇಸತ್ತಿದ್ದಾರೆ. ನೆಟ್‌ವರ್ಕ್‌ ಸಮಸ್ಯೆಯಿಂದ ಕಚೇರಿಗಳಲ್ಲಿ ಕೆಲಸ-ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ. ನಾವು ರೋಟರಿ ಸಂಸ್ಥೆ ಮತ್ತು ವರ್ತಕರ ಸಂಘದ ಮೂಲಕ ಸಂವಾದ ನಡೆಸುವಾಗಲೇ ಬಿಎಸ್ಸೆನ್ನೆಲ್‌ನ ಎಲ್ಲ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇವೆ. ಆಗಲೇ ಸರಿಪಡಿಸಬಹುದಿತ್ತು. ಇನ್ನು ಮುಂದೆಯಾದರೂ ಇಲಾಖೆ ಎಚ್ಚೆತ್ತುಕೊಂಡರೆ ಗ್ರಾಹಕರು ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ನಲ್ಲೇ ಉಳಿಯಬಹುದು.
ಬಿ. ಸುಬ್ರಹ್ಮಣ್ಯ ಜೋಶಿ ಬಿಎಸ್ಸೆನ್ನೆಲ್‌ ಗ್ರಾಹಕ

ಬಿಎಸ್ಸೆನ್ನೆಲ್‌ ಉಳಿಸಿ
ಗ್ರಾಮೀಣ ಭಾಗದಲ್ಲಿ ಅತೀ ಹೆಚ್ಚಿನ ಮೊಬೈಲ್‌ ಬಳಕೆದಾರರು ಬಿಎಸ್ಸೆನ್ನೆಲ್‌ ಸಿಮ್‌ ಹೊಂದಿದ್ದಾರೆ. ಕಲ್ಮಡ್ಕದಲ್ಲಿ ಕರೆಂಟ್‌ ಹೋದರೆ ನೆಟ್‌ವರ್ಕ್‌ ಪದೇ ಪದೇ ಕೈಕೊಡುತ್ತಿದೆ. ಖಾಸಗಿ ನೆಟ್‌ವರ್ಕ್‌ ಇಲ್ಲದೇ ಇರುವುದರಿಂದ ಬಿಎಸ್ಸೆನ್ನೆಲ್‌ ಅನ್ನು ಉಳಿಸಲೇಬೇಕಿದೆ.
ಭಾಸ್ಕರ ಜೆ., ಬಿಎಸ್ಸೆನ್ನೆಲ್‌ ಗ್ರಾಹಕ

ಉಮೇಶ್‌ ಮಣಿಕ್ಕಾರ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.