ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ
Team Udayavani, Nov 29, 2021, 7:48 PM IST
ಮಂಗಳೂರು: ತನ್ನ ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಸೋಮವಾರ ಅವರು ಬಿಡುಗಡೆಯಾಗಿದ್ದಾರೆ.
ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು,ತಡವಾಗಿ ಬೆಳಕಿಗೆ ಬಂದಿತ್ತು. ರತ್ನಾಕರ್ ಮಹಿಳಾ ಸಿಬಂದಿ ಜತೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಾವಳಿಗಳು ಮಾಧ್ಯಮದಲ್ಲಿ ಶುಕ್ರವಾರ ಪ್ರಸಾರವಾದ ಬೆನ್ನಲ್ಲೇ ಕಚೇರಿ ಸಿಬಂದಿಯೊಬ್ಬರು ನಗರ ಪೊಲೀಸ್ ಆಯುಕ್ತರು ಹಾಗೂ ಮಹಿಳಾ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಆರೋಪಿ ರತ್ನಾಕರ್ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು
ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ :ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ