ನಿಗಮ ಕೊಟ್ಟ ಸರಕಾರ ಹಣ ಕೊಡದಿರುವುದೇ? ಟೀಕಾಕಾರರಿಗೆ ಹರಿಕೃಷ್ಣ ಬಂಟ್ವಾಳ ತಿರುಗೇಟು


Team Udayavani, Feb 23, 2023, 7:17 AM IST

ನಿಗಮ ಕೊಟ್ಟ ಸರಕಾರ ಹಣ ಕೊಡದಿರುವುದೇ? ಟೀಕಾಕಾರರಿಗೆ ಹರಿಕೃಷ್ಣ ಬಂಟ್ವಾಳ ತಿರುಗೇಟು

ಮಂಗಳೂರು: ರಾಜ್ಯ ಸರಕಾರವು ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಘೋಷಿಸುವ ಮೂಲಕ ಶ್ಲಾಘನೀಯ ಕೆಲಸ ಮಾಡಿದೆ. ಇಷ್ಟು ಮಾಡಿರುವ ಸರಕಾರಕ್ಕೆ ಹಣ ಒದಗಿಸುವ ತಾಕತ್ತಿಲ್ಲವೇ. ಈವರೆಗೆ ನಿಗಮಕ್ಕಾಗಿ ಯಾವುದೇ ಧನಾತ್ಮಕ ಯತ್ನ ಮಾಡದೆ ಕೇವಲ ಹೇಳಿಕೆ ನೀಡುತ್ತಿದ್ದವರು ಈಗ ಗೊಂದಲ ಮೂಡಿಸುವುದರಲ್ಲಿ ನಿರತರಾಗಿದ್ದಾರೆ ಎಂದು ಬಿಜೆಪಿ ವಕ್ತಾರ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ನಾರಾಯಣಗುರು ಅಭಿವೃದ್ಧಿ ನಿಗಮವನ್ನು ವಿಳಂಬವಾಗಿ ಚುನಾವಣೆಯ ಕಾರಣಕ್ಕೆ ಘೋಷಿಸಲಾಗಿದೆ ಎಂದು ಕೆಲವರು ಆರೋಪಿಸಿರುವುದು ಸರಿಯಲ್ಲ. ನಿಗಮ ರಚನೆ ಪ್ರಕ್ರಿಯೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೇ ಆರಂಭವಾಗಿತ್ತು. ಆಗ ಆರ್ಯ ಈಡಿಗ ಸಂಘದ ನಾರಾಯಣಸ್ವಾಮಿ ಈ ಬಗ್ಗೆ ಪ್ರಯತ್ನಿಸಿದ್ದರೂ ಫ‌ಲಕಾರಿ ನೀಡಿರಲಿಲ್ಲ. ಈಗ ನಮ್ಮ ಸರಕಾರ ಘೋಷಿಸಿದೆ, ಮುಂದಕ್ಕೆ ಅನುದಾನವನ್ನೂ ಒದಗಿಸುತ್ತದೆ. ನಿಗಮ ರಚನೆಯ ಹಿಂದೆ ಅನೇಕ ವರ್ಷಗಳಿಂದ ಹೋರಾಟ ಮಾಡಿದ ಬಿಲ್ಲವ ಮುಖಂಡರು, ಸಂಘಟನೆಗಳು ಇವೆ ಎಂದರು.

ಕಾಂಗ್ರೆಸ್‌ ಮಾಡಿದ್ದೇನು?
ಕರಾವಳಿಯಲ್ಲಿ ನಾರಾಯಣಗುರು ವಸತಿ ಶಾಲೆ, ಕೋಟಿಚೆನ್ನಯ ಸೈನಿಕ ಶಾಲೆ, ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ನಿಲ್ದಾಣ ಹೆಸರಿಗೆ ಅನುಮೋದನೆ, ಮಂಗಳೂರಿನ ಲೇಡಿಹಿಲ್‌ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರು ಹೀಗೆ ಎಲ್ಲವೂ ಬಿಜೆಪಿ ಸರಕಾರ ಇರುವಾಗ ಆಗಿವೆ. ಹಾಗಿದ್ದರೆ ಹಿಂದಿನ ಕಾಂಗ್ರೆಸ್‌ ಸರಕಾರ ಅವಧಿಯಲ್ಲಿ ಯಾಕೆ ಈ ಸಾಧನೆ ಮಾಡಿಲ್ಲ, ಅದನ್ನು ಯಾಕೆ ಅವರು ಪ್ರಶ್ನಿಸುವುದಿಲ್ಲ ಎಂದರು.

ಸಚಿವ ಡಾ| ಅಶ್ವತ್ಥನಾರಾಯಣ ಕ್ಷಮೆ ಕೇಳಿದ ಬಳಿಕವೂ ಸಿದ್ದರಾಮಯ್ಯ ಆರೋಪಿಸುತ್ತಲೇ ಇದ್ದಾರೆ. ಸಿದ್ದರಾಮಯ್ಯರನ್ನು ಹೊಡೆದುಹಾಕಬೇಕು ಎಂದರೆ, ಸೋಲಿಸಬೇಕು ಎಂಬ ಅರ್ಥದಲ್ಲಿ ಅಶ್ವತ್ಥನಾರಾಯಣ ಹೇಳಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ ಉತ್ತರ ಭಾರತದಲ್ಲಿ ಮಾಜಿ ಸಚಿವ ರಾಜ್‌ ಪಟೇಲ್‌ ಎಂಬಾತ ಪ್ರಧಾನಿ ಮೋದಿ ಅವರನ್ನು ಕೊಲ್ಲಬೇಕು ಎಂದು ಹೇಳಿರುವುದನ್ನು ಖಂಡಿಸದೆ ಇದೇ ಕಾಂಗ್ರೆಸಿಗರು ಮೌನವಾಗಿರುವುದು ಕಾಂಗ್ರೆಸಿನ ಯಾವ ನೀತಿ ಎಂದು ಹರಿಕೃಷ್ಣ ಪ್ರಶ್ನಿಸಿದರು.

ವಕ್ತಾರ ರಾಧಾಕೃಷ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣೇಶ್‌ ಹೊಸಬೆಟ್ಟು, ಸಂದೇಶ್‌ ಶೆಟ್ಟಿ, ರಣದೀಪ್‌ ಕಾಂಚನ್‌ ಉಪಸ್ಥಿತರಿದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.