“75′ ಹರಿನಮನ: ಪುನರೂರು ಸೇವೆ ಅನುಕರಣೀಯ: ಡಾ| ಶೆಟ್ಟಿ
Team Udayavani, Sep 8, 2018, 9:57 AM IST
ಮಂಗಳೂರು: ಎಲ್ಲ ರಂಗಗಳಲ್ಲಿಯೂ ಸಂಘಟಕರಾಗಿ, ಪ್ರವರ್ತಕ ರಾಗಿ, ಪ್ರೋತ್ಸಾಹಕರಾಗಿ ಹರಿಕೃಷ್ಣ ಪುನರೂರು ನೀಡುತ್ತಿರುವ ಸೇವೆ ಮತ್ತು ಕೊಡುಗೆ ಅನುಕರಣೀಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ| ಎಂ. ಶಾಂತಾರಾಮ ಶೆಟ್ಟಿ ಶ್ಲಾಘಿಸಿದರು.
ಕದ್ರಿಯ ನೃತ್ಯ ಭಾರತಿ ವತಿಯಿಂದ ಶುಕ್ರವಾರ ಪುರಭವನದಲ್ಲಿ ಜರಗಿದ ಹರಿಕೃಷ್ಣ ಪುನರೂರು ಜನ್ಮ ಅಮೃತ ಮಹೋತ್ಸವ- 75 ಹರಿನಮನ ಎಂಬ ಹರಿಕೃಷ್ಣ ಪುನರೂರು ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಅಭಿನಂದನಾ ಭಾಷಣಗೈದರು.
ಸಾಹಿತ್ಯ, ಲಲಿತಕಲೆಗಳು, ಉದ್ಯಮ, ಸಮಾಜಸೇವೆ, ದಾನ, ಧಾರ್ಮಿಕ, ಶಿಕ್ಷಣ ಸಹಿತ ಎಲ್ಲ ಕ್ಷೇತ್ರಗಳಿಗೂ ಪುನರೂರು ಅವರು ಕ್ರಿಯಾತ್ಮಕವಾಗಿ ಸ್ಪಂದಿಸುತ್ತಿ ದ್ದಾರೆಂದು ಮುಖ್ಯ ಅತಿಥಿಯಾಗಿದ್ದ ಆಳ್ವಾಸ್ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಧರ್ಮಸ್ಥಳದ ಡಿ. ಹರ್ಷೇದ್ರ ಕುಮಾರ್ ಅವರು ಹರಿಕೃಷ್ಣ ಪುನ ರೂರು-ಉಷಾರಾಣಿ ದಂಪತಿಯನ್ನು ಸಮ್ಮಾನಿಸಿ ಶುಭ ಹಾರೈಸಿದರು.
ಸೇವಾಬದ್ಧತೆ: ಪುನರೂರು
ಸಮಾಜದ ಸರ್ವತೋಮುಖ ಏಳಿಗೆಯ ಸೇವಾಬದ್ಧತೆಯನ್ನು ಗುರುಹಿರಿಯರು, ಸ್ನೇಹಿತರ ಮಾರ್ಗದರ್ಶನ ದಿಂದ ರೂಢಿಸಿಕೊಂಡಿರುವುದಾಗಿ ಸಮ್ಮಾನ ಸ್ವೀಕರಿಸಿದ ಹರಿಕೃಷ್ಣ ಪುನರೂರು ಹೇಳಿದರು. ಶರವು ರಾಘವೇಂದ್ರ ಶಾಸಿŒ ಅಧ್ಯಕ್ಷತೆ
ವಹಿಸಿದ್ದರು. ಜಯಂತಿ ಲಕ್ಷ್ಮೀ ನಾರಾಯಣ ಆಸ್ರಣ್ಣ, ಕರ್ಣಾಟಕ ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್, ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್, ಶ್ರೀಪತಿ ಭಟ್ ಮೂಡಬಿದಿರೆ, ಲಕ್ಷ್ಮೀ ರಾವ್ ಆರೂರು, ಪ್ರಭಾ ಸುವರ್ಣ ಮುಂಬಯಿ ಅತಿಥಿಗಳಾಗಿದ್ದರು. ಶಾರದಾ ವಿದ್ಯಾಲಯ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್ ಅಭಿನಂದನಾ ಭಾಷಣ ಮಾಡಿದರು.
ನೃತ್ಯ ಭಾರತಿ ಸ್ಥಾಪಕಾಧ್ಯಕ್ಷೆ ವಿ| ಗೀತಾ ಸರಳಾಯ ಪ್ರಸ್ತಾವನೆಗೈದರು. ಸುಧಾಕರ ರಾವ್ ಪೇಜಾವರ ಸ್ವಾಗತಿಸಿ
ದರು. ವಿ| ರಶ್ಮಿ ಚಿದಾನಂದ್ ಸಮ್ಮಾನಪತ್ರ ವಾಚಿಸಿದರು. ವಿ| ರಮ್ಯಾಚಂದ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್