ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರ
Team Udayavani, Oct 18, 2022, 8:45 AM IST
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ತತ್ಕ್ಷಣದಿಂದ ಅನ್ವಯವಾಗುವಂತೆ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಹರೀಶ್ ಪೂಂಜಾ ಅವರು ಅ. 13ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದು ಬೆಳ್ತಂಗಡಿಗೆ ಕಾರಿನಲ್ಲಿ ತೆರಳುವ ವೇಳೆ 11.15ರ ಸಮಯ ಅವರ ಕಾರನ್ನು ದುಷ್ಕರ್ಮಿಗಳು ಫರಂಗಿಪೇಟೆ ಬಳಿ ಅಡ್ಡಹಾಕಿ ನಿಂದಿಸಿದ್ದರು. ಅಲ್ಲದೆ ಆರೋಪಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ
ಪೊಲೀಸರು ಫಳ್ನೀರಿನ ರಿಯಾಜ್ನನ್ನು ಬಂಧಿಸಿದ್ದರು.
ಇದನ್ನೂ ಓದಿ : ದಿಂಡಿ ಯಾತ್ರೆಯ ಭಕ್ತರರಿಗೆ ಪ್ರಸಾದ ಸೇವೆ ಸಲ್ಲಿಸಿ ಧನ್ಯತೆ ಮೆರೆದ ಮುಸ್ಲಿಂ ವ್ಯಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ