ಜ. 14-16: ರಾ. ಹೆ. ಕೆಲಸ ಸ್ಥಗಿತ ಖಂಡಿಸಿ  ಪಾದಯಾತ್ರೆ


Team Udayavani, Jan 13, 2019, 4:17 AM IST

highway.jpg

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಹಾಸನ- ಗುಂಡ್ಯ- ಬಿ.ಸಿ. ರೋಡ್‌ ನಡುವಣ ಚತುಷ್ಪಥ ಹೆದ್ದಾರಿ ಕಾಮಗಾರಿ ಅರ್ಧಕ್ಕೆ ನಿಂತಿರುವುದನ್ನು ಪ್ರತಿಭಟಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ ಜ. 14, 15, 16ರಂದು ನಡೆಯಲಿದೆ. 

“ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ-ಜನರ ಜೀವ ಉಳಿಸಿ’ ಘೋಷಣೆಯೊಂದಿಗೆ ಈ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಜ. 14ರಂದು ಬೆಳಗ್ಗೆ 9 ಗಂಟೆಗೆ ನೆಲ್ಯಾಡಿ ಬಸ್‌ ತಂಗುದಾಣದ ಬಳಿ ಸಚಿವ ಯು.ಟಿ. ಖಾದರ್‌ ಉದ್ಘಾಟಿಸುವರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಅಧ್ಯಕ್ಷತೆ ವಹಿಸುವರು. ಹಾಸನ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಜಾವುಗಲ್‌, ಶಾಸಕರಾದ ಎಂ.ಇ. ಗೋಪಾಲ ಸ್ವಾಮಿ ಮತ್ತು ಎಚ್‌.ಕೆ. ಮಹೇಶ್‌, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಡಾ| ರಘು ಉಪಸ್ಥಿತರಿರುವರು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಾದಯಾತ್ರೆಯು ಅಂದು ಸಂಜೆ 4.30ಕ್ಕೆ ಉಪ್ಪಿನಂಗಡಿ ತಲುಪಿ ಅಲ್ಲಿ ಪ್ರತಿಭಟನ ಸಭೆ ನಡೆಯಲಿದೆ. ಮಾಜಿ ಶಾಸಕರಾದ ವಸಂತ ಬಂಗೇರ, ಎಚ್‌.ಎಂ. ವಿಶ್ವನಾಥ್‌, ಜೆ.ಆರ್‌. ಲೋಬೊ, ಕೇರಳ ಪಿಸಿಸಿ ವಕ್ತಾರ ಹರೀಶ್‌ ಬಾಬು ಭಾಗವಹಿಸಲಿದ್ದಾರೆ ಎಂದರು. 

ಜ. 15ರಂದು ಉಪ್ಪಿನಂಗಡಿಯಿಂದ ಹೊರಟು ಸಂಜೆ ಮಾಣಿ ಜಂಕ್ಷನ್‌ ತಲುಪಿ ಪ್ರತಿಭಟನ ಸಭೆನಡೆಯಲಿದೆ.
ಜ. 16ರಂದು ಮಾಣಿಯಿಂದ ಮುಂದುವರಿದು ಸಂಜೆ ಬಿ.ಸಿ. ರೋಡ್‌ ತಲಪುವುದು. ಬಸ್‌ ನಿಲ್ದಾಣದ ಬಳಿ ನಡೆಯುವ ಸಮಾರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ನಾರಾಯಣ ರಾವ್‌, ಅರುಣ್‌ ಮಾಚಯ್ಯ, ಮಾಜಿ ಶಾಸಕ ಬಿ.ಎ. ಮೊದಿನ್‌ ಬಾವಾ, ಸವಿತಾ ರಮೇಶ್‌ ಭಾಗವಹಿಸುವರು. 
ಮೂರು ದಿನಗಳಲ್ಲಿ ಒಟ್ಟು 42 ಕಿ.ಮೀ. ಪಾದಯಾತ್ರೆ ಸಂಚರಿಸಲಿದೆ. ಅಪೂರ್ಣ ಹೆದ್ದಾರಿಯ ಅವ್ಯವಸ್ಥೆ ಭೀಕರವಾಗಿದೆ. ಇದರ ವಿರುದ್ಧ ಪ್ರತಿಭಟಿಸುವುದಾಗಿ ಜಿಲ್ಲಾ ಕಾಂಗ್ರೆಸ್‌ ಹೇಳಿಕೆ ನೀಡಿತ್ತು. ಅದರ ಪ್ರಕಾರ  ಪಾದಯಾತ್ರೆ ರೂಪಿಸಲಾಗಿದೆ ಎಂದು ರಮಾನಾಥ ರೈ ವಿವರಿಸಿದರು. 

ಕರಪತ್ರ ಬಿಡುಗಡೆ
ಪಾದಯಾತ್ರೆಗೆ ಸಂಬಂಧಿಸಿದ ಕರಪತ್ರಗಳನ್ನು ರಮಾನಾಥ ರೈ ಬಿಡುಗಡೆ ಮಾಡಿದರು. ಕೋಡಿಜಾಲ್‌ ಇಬ್ರಾಹಿಂ, ರಾಜಶೇಖರ ಕೋಟ್ಯಾನ್‌, ಮಾಧವ ಮಾವೆ, ಬಿ.ಎಚ್‌. ಖಾದರ್‌, ಸಂತೋಷ್‌ ಶೆಟ್ಟಿ, ಜೆ. ಅಬ್ದುಲ್‌ ಸಲೀಂ, ಜಯಶೀಲ ಅಡ್ಯಂತಾಯ, ಪ್ರವೀಣ್‌ ಚಂದ್ರ ಆಳ್ವ, ನಝೀರ್‌ ಬಜಾಲ್‌, ಟಿ.ಕೆ. ಸುಧೀರ್‌, ಅಬ್ಟಾಸ್‌ ಅಲಿ, ಬಿ. ಅಬೂಬಕರ್‌ ಉಪಸ್ಥಿತರಿದ್ದರು.

ತಪ್ಪು ಮಾಡಿದವರಿಗೆ ಜೀವ ಭಯ
ಮೂವರು ಹಿಂದೂ ನಾಯಕರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಬಗ್ಗೆ ಪೊಲೀಸರು ತಮಗೇನೂ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾಗಿ ನಾನೂ ಏನನ್ನೂ ಹೇಳಲಿಚ್ಛಿಸುವುದಿಲ್ಲ. ಆದರೆ ಒಂದು ಮಾತು ಹೇಳುತ್ತೇನೆ. “ತಪ್ಪು ಮಾಡಿದವರಿಗೆ ಜೀವ ಭಯ ಇದ್ದೇ ಇರುತ್ತದೆ. ಯಾವುದೇ ತಪ್ಪು ಮಾಡದ ಸಾಮಾನ್ಯ ನಾಗರಿಕರಿಗೆ ಯಾವುದೇ ಭಯ ಇರುವುದಿಲ್ಲ’ ಎಂದು ರಮಾನಾಥ ರೈ ಅವರು ಹೇಳಿದರು. 

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.