ಹಾಸನ ಎಸ್ಡಿಎಂ ಆಯುರ್ವೇದ ಪ್ರಥಮ
Team Udayavani, May 4, 2018, 12:05 PM IST
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜು ಆವರಣದ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚು ರೋಪತಿ ಹಾಗೂ ಯೋಗವಿಜ್ಞಾನ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಹಾಸನದ ಎಸ್.ಡಿ.ಎಂ. ಆಯುರ್ವೇದ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ.
ಹಾಸನದ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ಮೈಸೂರು ಜೆಎಸ್ಎಸ್ನ ನಿವ್ರಿಶ್ ಬೆಸ್ಟ್ ರೈಡರ್, ಹಾಸನ ಎಚ್ ಐಎಂಎಸ್ನ ಮಂಜುನಾಥ್ ಉತ್ತಮ ಕ್ಯಾಚರ್, ಹಾಸನ ಎಸ್.ಡಿ.ಎಂ. ಕಾಲೇಜಿನ ತೀರ್ಥೇಶ್ ಉತ್ತಮ ಆಲ್ರೌಂಡರ್ ಪ್ರಶಸ್ತಿ ಪಡೆದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಎಸ್.ಡಿ.ಎಂ. ನ್ಪೋರ್ಟ್ಸ್ ಕ್ಲಬ್ನ ನಿವೃತ್ತ ಕಾರ್ಯದರ್ಶಿ ಬಾಲಭಾಸ್ಕರ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಹಾಗೂ ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ