ಬಾವಾ ಮಾಡಿರುವ ಅಭಿವೃದ್ಧಿಗೆ ಈ ಬಾರಿ ಮತದಾರರು ಕೈ ಹಿಡಿಯಲಿದ್ದಾರೆ: ಹೆಚ್.ಡಿ.ದೇವೇಗೌಡ
Team Udayavani, May 1, 2023, 4:29 PM IST
ಸುರತ್ಕಲ್: “ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಲಾಯಿತು. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು ಹಿಂದಿನ ಶಾಸಕ ಮೊಯ್ದಿನ್ ಬಾವ ಅವರ ಅವಧಿಯಲ್ಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಮೋಸದಿಂದ ಟಿಕೆಟ್ ಸಿಗುವುದನ್ನು ತಪ್ಪಿಸಿದರು. ನಾವು ಅವರಲ್ಲಿ ಧೈರ್ಯ ತುಂಬಿ ಜೆಡಿಎಸ್ ನಿಂದ ಟಿಕೆಟ್ ನೀಡಿದ್ದೇವೆ. ಬಾವಾ ಮಾಡಿರುವ ಅಭಿವೃದ್ಧಿ, ತ್ಯಾಗಕ್ಕೆ ಈ ಬಾರಿ ಮತದಾರರು ಕೈ ಹಿಡಿಯಲಿದ್ದಾರೆ” ಎಂದರು.
“ಜೆಡಿಎಸ್ ಸರಕಾರದ ಅವಧಿಯಲ್ಲಿ ಮಹಿಳೆಯರಿಗೆ ಸ್ವಾವಲಂಬನೆ ಸಿಕ್ಕಿತು, ರೈತರ ಸಾಲ ಮನ್ನಾ ಆಗಿ ನೆಮ್ಮದಿಯ ಜೀವನ ಸಿಕ್ಕಿತು, ರಾಜ್ಯದಲ್ಲಿ ಶಾಂತಿ ನೆಮ್ಮದಿಯಿಂದ ಜನರು ಜೀವಿಸುವಂತಾಯಿತು. ಬಾವಾ ಅವರು ಮೂರನೇ ನಂಬರ್ ನಲ್ಲಿ ಇದ್ದಾರೆ. ಭತ್ತದ ತೆನೆ ಹೊತ್ತ ಅನ್ನಪೂರ್ಣೇಶ್ವರಿಯ ಚಿಹ್ನೆ ಅವರದ್ದಾಗಿದೆ. ಮೇ 10ರಂದು ಸಂಜೆ 5 ಗಂಟೆಯ ವರೆಗೆ ಕಾಲಾವಕಾಶ ಇದೆ, ನಾನು ಕೈಮುಗಿದು ಬೇಡಿಕೊಳ್ಳುತ್ತಿದ್ದೇನೆ. ಅವರಿಗೆ ಮತ ಕೊಟ್ಟು ಹರಸಿ. ಜನರಿಗೆ ಬಾವಾ ಮೇಲೆ ವಿಶ್ವಾಸವಿದ್ದು ಅವರು ಮತ ಕೊಟ್ಟು ಗೆಲ್ಲಿಸಲಿದ್ದಾರೆ” ಎಂದರು.
ಪತ್ರಿಕಾಗೋಷ್ಟಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳಾದ ಮೊಯ್ದಿನ್ ಬಾವ, ಡಾ.ಅಮರಶ್ರೀ, ಸುಮತಿ ಹೆಗ್ಡೆ, ಯುವಜನತಾದಳದ ಅಕ್ಷಿತ್ ಸುವರ್ಣ, ಜಿಲ್ಲಾಧ್ಯಕ್ಷ ಎಂಬಿ ಸದಾಶಿವ, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ