ಇಂದು ಧರ್ಮಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ
Team Udayavani, May 22, 2018, 9:10 AM IST
ಬೆಳ್ತಂಗಡಿ: ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಮೇ 22ರಂದು ಬೆಳಗ್ಗೆ 8.30ಕ್ಕೆ ಧರ್ಮಸ್ಥಳಕ್ಕೆ ಅಗಮಿಸಲಿದ್ದಾರೆ.
ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಅವರು ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 8.30ಕ್ಕೆ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡ್ಗೆ ಆಗಮಿಸಲಿರುವ ಅವರು ಬಳಿಕ ಸನ್ನಿಧಿ ವಸತಿಗೃಹಕ್ಕೆ ತೆರಳಲಿದ್ದಾರೆ. 9.15ಕ್ಕೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಯಲಿದ್ದಾರೆ.
ದೇವರ ದರ್ಶನದ ಬಳಿಕ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಫಲಾಹಾರ ಸೇವಿಸಿ, 11.40ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿ ಶ್ರೀ ಶಾರದಾಂಬಾದೇವಿ ದೇವಸ್ಥಾನಕ್ಕೆ ಪ್ರಯಾಣಿಸಲಿದ್ದಾರೆ.