ಗ್ರಾಮೀಣ ಭಾಗಕ್ಕೂ ಆರೋಗ್ಯ ಸೇವೆ: “ನಮ್ಮ ಕ್ಲಿನಿಕ್‌’ವಿಸ್ತರಣೆ

ಒಂದೇ ಸೂರಿನಡಿ ಹಲವು ಸೇವೆಗಳು

Team Udayavani, Jun 4, 2023, 3:12 PM IST

ಗ್ರಾಮೀಣ ಭಾಗಕ್ಕೂ ಆರೋಗ್ಯ ಸೇವೆ: “ನಮ್ಮ ಕ್ಲಿನಿಕ್‌’ವಿಸ್ತರಣೆ

ಮಹಾನಗರ: ಹೊಸದಿಲ್ಲಿಯಲ್ಲಿರುವ ಮೊಹಲ್ಲಾ ಕ್ಲಿನಿಕ್‌ ಮಾದರಿಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರಂಭವಾದ “ನಮ್ಮ ಕ್ಲಿನಿಕ್‌’ ಸೇವೆ ಗ್ರಾಮೀಣ ಭಾಗಕ್ಕೂ ವಿಸ್ತರಣೆಯಾಗಲಿದೆ.

ಇದೀಗ ಪ್ರಧಾನಮಂತ್ರಿ ಅಭೀಮ್‌ ಯೋಜನೆಯ ಮೂಲಕ ಮಂಗಳೂರು ಗ್ರಾಮೀಣ ಭಾಗದ ನಾಲ್ಕು ಕಡೆ ಸೇರಿದಂತೆ ವಿಟ್ಲದಲ್ಲಿಯೂ ನಮ್ಮ ಕ್ಲಿನಿಕ್‌ ನಿರ್ಮಾಣ ಆಗಲಿದೆ. ನಿರ್ಮಾಣ ಸಂಬಂಧ ಕಟ್ಟಡ ಪರಿಶೀಲನೆ ಈಗಾಗಲೇ ನಡೆದಿದ್ದು, ಇನ್ನೇನು ಕೆಲ ವಾರಗಳಲ್ಲೇ ಅಂತಿಮಗೊಳ್ಳಲಿದೆ.

ಜಿಲ್ಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಸೂಟರ್‌ಪೇಟೆ, ಬೋಳಾರ, ಬಂದರು, ಪಚ್ಚನಾಡಿ, ಕೋಡಿಕಲ್‌, ಮೀನಕಳಿಯ, ಕುಂಜತ್ತಬೈಲ್‌, ಸುಳ್ಯದ ದುಗ್ಗಲಡ್ಕ, ಮೂಡುಬಿದಿರೆಯ ಗಂಟಾಲ್‌ಕಟ್ಟೆ, ಉಳ್ಳಾಲದ ಕೆರೆಬೈಲು, ಕಡಬದ ಕೋಡಿಂಬಾಳ, ಪುತ್ತೂರಿನ ಬನ್ನೂರಿನಲ್ಲಿ ಕ್ಲಿನಿಕ್‌ಗಳಿವೆ. ಈಗಾಗಲೇ ಆರಂಭವಾಗಿರುವ ನಮ್ಮ ಕ್ಲಿನಿಕ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಇಲ್ಲಿ ಸೇವೆಗಳು ಉಚಿತವಾಗಿದ್ದು, ಸಾರ್ವಜನಿಕರು ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಅಧಿಕಾರಿಗಳ ಪ್ರಕಾರ ಸುಮಾರು 25 ರಿಂದ 30 ಮಂದಿ ಪ್ರತೀ ದಿನ ಸೇವೆ ಪಡೆದುಕೊಳ್ಳುತ್ತಿದ್ದಾರೆ.

ಒಂದೇ ಸೂರಿನಡಿ ಹಲವು ಸೇವೆ
ನಮ್ಮ ಕ್ಲಿನಿಕ್‌ಗಳಲ್ಲಿ ಹಲವು ಸೇವೆಗಳು ಒಂದೇ ಸೂರಿನಲ್ಲಿ ದೊರಕಲಿದೆ. ಗರ್ಭಿಣಿ ಆರೈಕೆ, ಶಿಶುವಿನ ಆರೈಕೆ, ಮಕ್ಕಳ ಸೇವೆ, ಕುಟುಂಬ ಕಲ್ಯಾಣ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಂಪೂರ್ಣ ಓಪಿಡಿ ಸೇವೆಗಳು, ಮಧುಮೇಹ, ರಕ್ತದೊತ್ತಡ ಚೆಕ್‌ ಅಪ್‌, ಕ್ಯಾನ್ಸರ್‌ ಸ್ಕ್ರೀನಿಂಗ್‌ ಸೇವೆ, ಬಾಯಿ ಆರೋಗ್ಯ ಸಮಸ್ಯೆಗಳು ಸೇವೆ, ಕಣ್ಣಿನ ತಪಾಸಣೆ, ಮೂಗು, ಗಂಟಲು ಇತರೇ ಸೇವೆಗಳು, ಮಾನಸಿಕ ಆರೋಗ್ಯ ಸ್ಕ್ರೀನಿಂಗ್‌ ಸೇವೆ, ವೃದ್ಧಾಪ್ಯ ಆರೈಕೆ ಸಹಿತ ತುರ್ತು ವೈದ್ಯಕೀಯ ಸೇವೆ ಸಹಿತ ಒಟ್ಟು 12 ಪ್ರಮುಖ ಆರೋಗ್ಯ ಸೇವೆಗಳು ಲಭ್ಯ ಇರಲಿವೆ. ವೈದ್ಯಾಧಿಕಾರಿ, ಶುಶ್ರೂಷಕಿ, ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ಡಿ ಗ್ರೂಪ್‌ ಸಿಬಂದಿ ಸೇರಿ ಒಟ್ಟು ನಾಲ್ಕು ಮಂದಿ ಕಾರ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರಿಗೆ ಉಚಿತ ಸೇವೆ ಸಿಗಲಿದೆ.

ಐದು ಕಡೆ ಎಲ್ಲೆಲ್ಲಿ?
ಹೊಸತಾಗಿ ನಿರ್ಧಾರ ಕೈಗೊಂಡಂತೆ ಜಿಲ್ಲೆಯ ಐದು ಕಡೆಗಳಲ್ಲಿ ನಮ್ಮ ಕ್ಲಿನಿಕ್‌ ತಲೆ ಎತ್ತಲಿದೆ. ಅದರಂತೆ ಕೋಟೆಕಾರ್‌, ವಿಟ್ಲ, ಮೂಲ್ಕಿ, ಕಿನ್ನಿಗೋಳಿ, ಬಜಪೆಯಲ್ಲಿ ನಮ್ಮ ಕ್ಲಿನಿಕ್‌ ಸದ್ಯದಲ್ಲೇ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಇನ್ನೇನು ಕೆಲವೇ ಸಮಯದಲ್ಲಿ ಸರಕಾರದಿಂದಲೂ ಅಧಿಕೃತ ಮುದ್ರೆ ಬೀಳುವ ಸಾಧ್ಯತೆ ಇದೆ.

ಸದ್ಯದಲ್ಲೇ ವೈದ್ಯರ ನೇಮಕ
ಮಂಗಳೂರು ಪಾಲಿಕೆ ವ್ಯಾಪ್ತಿಯ ಏಳು ಕಡೆ ಸೇರಿದಂತೆ ಜಿಲ್ಲೆಯ 12 ಕಡೆಗಳಲ್ಲಿ ಸದ್ಯ ನಮ್ಮ ಕ್ಲಿನಿಕ್‌ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಸೇವೆಯನ್ನು ಮತ್ತಷ್ಟು ಕಡೆಗಳಿಗೆ ವಿಸ್ತರಿಸುವ ಉದ್ದೇಶದಿಂದ ಇನ್ನೂ ಐದು ಕಡೆಗಳಲ್ಲಿ ಹೊಸತಾಗಿ ನಮ್ಮ ಕ್ಲಿನಿಕ್‌ ಆರಂಭಿಸುತ್ತಿದ್ದೇವೆ. ಈಗಾಗಲೇ ಜಾಗ ಗುರುತು ಮಾಡಲಾಗಿದ್ದು, ಸರಕಾರಕ್ಕೆ ವರದಿ ಸಲ್ಲಿಕೆ ಮಾಡಿ, ಸದ್ಯದಲ್ಲೇ ವೈದ್ಯರ ನೇಮಕ ನಡೆಯಲಿದೆ.
– ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಕರಾವಳಿಯ ವಿಭಿನ್ನ ಸಂಸ್ಕೃತಿ ಮಾದರಿ: ಚಿತ್ರನಟ ಅಭಿಷೇಕ್‌ ಅಂಬರೀಷ್‌

Mangaluru ಕರಾವಳಿಯ ವಿಭಿನ್ನ ಸಂಸ್ಕೃತಿ ಮಾದರಿ: ಚಿತ್ರನಟ ಅಭಿಷೇಕ್‌ ಅಂಬರೀಷ್‌

Ullal ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

Ullal ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

h d kumaraswamy

NICE: ನೈಸ್‌ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್‌ ಹೋರಾಟ:ಕುಮಾರಸ್ವಾಮಿ

high court karnataka

High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ

devegouda

Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.