ಆರೋಗ್ಯವರ್ಧಕ ಎಕ್ಕ


Team Udayavani, May 15, 2018, 3:37 PM IST

15-May-12.jpg

ಎಕ್ಕವನ್ನು ಅರ್ಕವೆಂದೇ ಕರೆಯಲಾಗುತ್ತದೆ. ಆಡುಭಾಷೆಯಲ್ಲಿ ಎಕ್ಕ ಎನ್ನಲಾಗುತ್ತದೆ. ಅರ್ಕ ಎಂದರೆ ಪೂಜನೀಯವೆಂದರ್ಥ. ಹಿಂದೂ ಸಂಸ್ಕೃತಿ ಪ್ರಕಾರ ಕೆಲವು ಮರ ಗಿಡಗಳಿಗೆ ಪವಿತ್ರ ಸ್ಥಾನವಿದೆ. ಈ ಎಕ್ಕ ಗಿಡಕ್ಕೆ ದೇವ ವೃಕ್ಷ ಎಂಬ ಭಾವನೆ ಇರುವುದರಿಂದ ಭಾರತದಲ್ಲಿ ಇದನ್ನು ಪೂಜಿಸಲಾಗುತ್ತದೆ.

ಎಕ್ಕದಲ್ಲಿ ಎರಡು ವಿಧ ಬಿಳಿ ಹಾಗೂ ನೇರಳೆ ಎಕ್ಕ. ಬಿಳಿ ಎಕ್ಕ ಬಹಳ ಶ್ರೇಷ್ಠವೆಂದು ಪ್ರತೀತಿ. ದೇವರ ಪೂಜೆಗೆ ಶ್ರೇಷ್ಠವಾದ ಈ ಎಕ್ಕದ ಗಿಡದ ಬೇರು, ತೊಗಟೆ, ಎಲೆ, ಹೂ ಅನ್ನು ಔಷಧಗಳಿಗೂ ಬಳಸಲಾಗುತ್ತದೆ. ಅಪಾರ ಔಷಧೀಯ ಗುಣವಿರುವ ಎಕ್ಕದಿಂದ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.

ಪ್ರಯೋಜನಗಳು
· ಕೀಲು ನೋವಿಗೆ ರಾಮಬಾಣ ಎಕ್ಕದ ಗಿಡದ ಎಲೆಗಳನ್ನು ಕೆಂಡದ ಮೇಲೆ ತಾಗಿಸಿ ನೋವು ಇರುವ ಕಡೆ ಶಾಖ ಕೊಟ್ಟರೆ ಸ್ವಲ್ಪ ದಿನಗಳಲ್ಲಿ ಕೀಲು ನೋವು ಗುಣಮುಖವಾಗುತ್ತದೆ.

· ಮೂಲವ್ಯಾದಿ ನಿವಾರಣೆ.

.ಮೂಲವ್ಯಾಧಿಯಿಂದ ಬಳಲುತ್ತಿರುವವರು ಎಕ್ಕದ ಗಿಡದ ಹಾಲಿಗೆ ಸ್ವಲ್ಪ ಅರಿಸಿನ ಬೆರೆಸಿ ಹಚ್ಚಿದರೆ ಬೇಗ ಗುಣವಾಗುತ್ತದೆ.

· ಹಲ್ಲು ನೋವಿನ ನಿವಾರಣೆ.

. ಎಕ್ಕದ ಗಿಡದ ಕಾಂಡವನ್ನು ಹಲ್ಲುಜ್ಜಲು ಬಳಸಿದರೆ ಹಲ್ಲುನೋವು ಬಹುಬೇಗ ಮಾಯವಾಗುತ್ತದೆ.

· ಗಾಯವನ್ನು ವಾಸಿ ಮಾಡುತ್ತದೆ.

. ಚರ್ಮದ ಮೇಲೆ ಆಗಿರುವ ಸಣ್ಣ ಪುಟ್ಟ ಗಾಯಗಳಿಗೆ ಎಕ್ಕದ ಗಿಡದ ಹಾಲನ್ನು ಹಚ್ಚಿದರೆ ಗಾಯವು ಬಹುಬೇಗ ವಾಸಿಯಾಗುತ್ತದ.

· ಚೇಳು ಕಚ್ಚಿದರೆ ಔಷಧ

.ಚೇಳು ಕಚ್ಚಿದಾಗ ಔಷಧ ಮಾಡಲು ಎಕ್ಕದ ಗಿಡದ ಎಲೆ ಮತ್ತು ಹಾಲನ್ನು ಬಳಸಲಾಗುತ್ತದೆ.

· ಕಾಲಾರಕ್ಕೆ ಔಷಧ.

ಎಕ್ಕದ ಬೇರಿನ ತೊಗಟೆ ಮತ್ತು ಮೆಣಸಿನ ಕಾಳು ಸಮತೂಕ ನುಣ್ಣಗೆ ಚೂರ್ಣ ಮಾಡಿ, ಹಸುರು ಶುಂಠಿ ರಸದಲ್ಲಿ ಮರ್ದಿಸಿ ಕಡಲೆಗಾತ್ರ ಗುಳಿಗೆಯನ್ನು ಮಾಡಿ ನೆರಳಲ್ಲಿ ಒಣಗಿಸಿ ಪ್ರತಿ ಎರಡು ತಾಸಿಗೊಮ್ಮೆ ಒಂದೊಂದು ಗುಳಿಗೆಯನ್ನು ನೀರಿನೊಂದಿಗೆ ಸೇವಿಸಿದರೆ ಕಾಲಾರ ನಿವಾರಣೆಯಾಗುವುದು. ಬಹುಬೇಗ ವಾಸಿಯಾಗುತ್ತದೆ .

ಚುಚ್ಚಿದ ಮುಳ್ಳು ತೆಗೆಯುತ್ತದೆ
ಕಾಲಿಗೆ ಮುಳ್ಳು ಚುಚ್ಚಿಕೊಂಡಾಗ ಎಕ್ಕದ ಹಾಲನ್ನು ಮುಳ್ಳು ಸೇರಿರುವ ಜಾಗಕ್ಕೆ ಹಾಕಿದರೆ ಮುಳ್ಳು ಮೇಲಕ್ಕೆ ಬಂದು ತೆಗೆಯಲು ಸುಲಭವಾಗುತ್ತದೆ. ಎಕ್ಕದ ಗಿಡದಲ್ಲಿರುವ ಹಾಲಿನಂತಹ ದ್ರವ ಕಣ್ಣಿಗೆ ಬಿದ್ದರೆ ಕಣ್ಣು ಹಾನಿಯಾಗುವುದು ಎಂಬ ನಂಬಿಕೆ ಇದೆ. ಹೀಗಾಗಿ ಇದನ್ನು ಬಳಸುವಾಗ ಹೆಚ್ಚು ಎಚ್ಚರಿಕೆಯಿಂದ ಇರುವುದು ಉತ್ತಮ.

 ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.