ಮಳೆ ಬಂದರೆ ಕೆಸರಿನ ಸಮಸ್ಯೆ; ಬೇಸಗೆಯಲ್ಲಿ ಧೂಳಿನ ಕಿರಿಕಿರಿ

ಬೈಕಂಪಾಡಿ, ಮೀನಕಳಿಯ: ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಸ್ಥಳೀಯರು

Team Udayavani, Apr 25, 2022, 12:03 PM IST

baikampady

ಬೈಕಂಪಾಡಿ: ಮಳೆ ಬಂದರೆ ಕೆಸರಿನ ಸಮಸ್ಯೆ, ಬೇಸಗೆಯಲ್ಲಿ ಧೂಳಿನ ಕಿರಿಕಿರಿ. ಒಳ್ಳೆಯ ರಸ್ತೆಯಿದ್ದರೂ ಕಂಟೈನರ್‌ ಸಂಚಾರದಿಂದ ಉಂಟಾಗುವ ಧೂಳು ಸ್ಥಳೀಯ ಜನರನ್ನು ಕಂಗೆಡಿಸುತ್ತಿದೆ. ಇದರಿಂದ ಕಂಗೆಟ್ಟ ಜನರು ಮಾಸ್ಕ್, ಸ್ಕಾರ್ಫ್‌ಗಳಿಗೆ ಮೊರೆ ಹೋಗುವ ಸ್ಥಿತಿ ಎದುರಾಗಿದೆ.

ಬೈಕಂಪಾಡಿ, ಪಣಂಬೂರು ಕೈಗಾರಿಕೆ ವಲಯ ಪ್ರದೇಶ. ಆದರೆ ಇದರ ನಡುವೆ ಕೆಲವೊಂದು ವಸತಿ ಬಡಾವಣೆಯಿದೆ. ಬಂದರು ಅಂಚಿನಲ್ಲಿಯೇ ಬೈಕಂಪಾಡಿ, ಮೀನಕಳಿಯ ಪ್ರದೇಶವಿದೆ. ಇಲ್ಲಿನ ಮೀನಕಳಿಯ ಪ್ರಧಾನ ರಸ್ತೆಗೆ ಕಾಂಕ್ರೀಟ್‌ ಅಳವಡಿಸಿ ದ್ವಿಪಥ ಮಾಡಲಾಗಿದೆ. ಆದರೆ ಜನರಿಗೆ ಮಾತ್ರ ಇದರ ಪ್ರಯೋಜನ ಲಭಿಸುತ್ತಿಲ್ಲ. ಕಾರಣ ಒಂದೆಡೆ ಲಾರಿ ನಿಲುಗಡೆ, ಇನ್ನೊಂದೆಡೆ ಸುತ್ತಮುತ್ತ ಇರುವ ಖಾಸಗಿ ಜಾಗಗಳಲ್ಲಿ ಗೋದಾಮು ಇರುವುದರಿಂದ ದಿನಕ್ಕೆ ನೂರಾರು ಟ್ರಕ್‌ಗಳು ಇಲ್ಲಿ ಓಡಾಡುತ್ತವೆ. ಕಂಟೈನರ್‌ ಇಡುವ ಜಾಗಗಳು ಕಲ್ಲು ಮಣ್ಣಿನಿಂದ ಕೂಡಿದ ಜಾಗವಾಗಿದ್ದು, ಲಾರಿಗಳ ಸಂಚಾರದಿಂದ ಧೂಳು ಸೃಷ್ಟಿಯಾಗಿ ಜನರ ಆರೋಗ್ಯಕ್ಕೆ ಕುತ್ತು ತರುತ್ತಿವೆ. ನಿತ್ಯ ಸಾವಿರಾರು ಮಂದಿ ಜನರು, ವಿದ್ಯಾರ್ಥಿಗಳು, ಮಹಿಳೆಯರು ಈ ರಸ್ತೆಯಲ್ಲಿ ಓಡಾಟ ನಡೆಸುವರು.

ಪಣಂಬೂರು ಬೀಚ್‌ ರಸ್ತೆಗೆ ಪರ್ಯಾಯವಾಗಿ ಮೀನಕಳಿಯ ರಸ್ತೆ ಬಳಕೆಯಾಗುತ್ತಿದೆ. ಈ ರಸ್ತೆಯಲ್ಲಿ ಟ್ರಕ್‌ ವೇಗದಿಂದ ಸಾಗಿದರಂತೂ ಆ ವಾಹನ ಮತ್ತು ಎದುರಿಗಿದ್ದವರೂ ಕಾಣದಷ್ಟು ದಟ್ಟ ಧೂಳು ಆವರಿಸಿಕೊಳ್ಳುತ್ತದೆ. ಅಲ್ಲಿದ್ದವರು ಒಂದೆರಡು ನಿಮಿಷ ನಿಂತು ಹೋಗಬೇಕಾದ ಸ್ಥಿತಿ ಉದ್ಭವಿಸುತ್ತದೆ. ಧೂಳಿನ ಸಮಸ್ಯೆಗೆ ಮುಕ್ತಿ ನೀಡುವ ಕೆಲಸ ಮಹಾನಗರ ಪಾಲಿಕೆಯಿಂದ ಇನ್ನೂ ನಡೆಯದಿರುವುದು ಖೇದಕರ.

ಬೈಕಂಪಾಡಿ ಮೇಲ್ಸೇತುವೆ ದಾಟಿದ ಕೂಡಲೇ ಸಿಗುವ ಕಾಂಕ್ರೀಟ್‌ ಚತುಷ್ಪಥ ರಸ್ತೆಯನ್ನು ಜನರ ಸುಗಮ ಓಡಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ದುರಸ್ತಿಗೊಳಿಸಲು ಮಹಾನಗರ ಪಾಲಿಕೆ, ಸಂಚಾರಿ ಪೊಲೀಸ್‌ ಇಲಾಖೆ ಮುಂದಾಗಬೇಕಿದೆ. ಇದರ ಜತೆಗೆ ಕಾಂಕ್ರೀಟ್‌ ರಸ್ತೆಯ ಇಕ್ಕೆಲಗಳಲ್ಲಿ ಶೇಖರಣೆಯಾದ ಮರಳು, ಮಣ್ಣಿನ ತೆರವಿಗೆ ಕ್ರಮ ಜರಗಿಸಬೇಕಿದೆ.

ಅಗತ್ಯ ಕ್ರಮ

ಮಹಾನಗರ ಪಾಲಿಕೆಯ ಕಾಂಕ್ರೀಟ್‌ ರಸ್ತೆಯ ಮೇಲೆ ಲಾರಿ ಟ್ರಕ್‌ಗಳ ಸಂಚಾರದಿಂದ ಮಣ್ಣು, ಧೂಳಿನ ಕಣ ಅಧಿಕವಾಗಿದ್ದರೆ, ಇತರ ಸವಾರರಿಗೆ ಹಾನಿಯಾಗುವಂತಿದ್ದರೆ, ಇದನ್ನು ತೆರವುಗೊಳಿಸಲು, ನಿಗದಿತವಾಗಿ ಸ್ವಚ್ಛತೆ ಕಾಪಾಡಲು ಹಾಗೂ ಇದಕ್ಕೆ ಕಾರಣರಾದ ಸಮೀಪದ ಸಂಬಂಧಪಟ್ಟ ಕಂಪೆನಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರ ಗಮನಕ್ಕೆ ತರಲಾಗುವುದು. -ಡಾ| ಮಂಜಯ್ಯ ಶೆಟ್ಟಿ, ಮುಖ್ಯ ಆರೋಗ್ಯಾಧಿಕಾರಿ, ಪಾಲಿಕೆ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.