ನಿಟ್ಟಡೆ ಆರೋಗ್ಯ ಉಪಕೇಂದ್ರ: ವಾರದಲ್ಲಿ ಒಂದೇ ದಿನ ಸೇವೆ


Team Udayavani, Jun 23, 2018, 2:10 AM IST

nittade-22-6.jpg

ವೇಣೂರು: ಸದಾ ಸೇವೆ ನೀಡಿ ಜನರಿಗೆ ಆರೋಗ್ಯ ಭಾಗ್ಯ ಕರುಣಿಸಬೇಕಾದ ಆರೋಗ್ಯ ಉಪಕೇಂದ್ರದಲ್ಲಿ ಒಬ್ಬರೇ ಸಿಬಂದಿ! ಇದು ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯ ನಿಟ್ಟಡೆ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಸ್ಥಿತಿ. ಪ್ರತೀ ಮಳೆ ಗಾಲದಲ್ಲಿ ಡೆಂಗ್ಯೂ ಸಹಿತ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಗ್ರಾಮ ಕುಕ್ಕೇಡಿ-ನಿಟ್ಟಡೆ. ಮಳೆಗಾಲದ ತುರ್ತು ಸಂದರ್ಭ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆಯಾ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪಕೇಂದ್ರಗಳು ಸದಾ ಚಟುವಟಿಕೆಯಿಂದ ಇರಬೇಕಾಗಿರುವುದು ಅಗತ್ಯ. ಆದರೆ ನಿಟ್ಟಡೆ ಆರೋಗ್ಯ ಕೇಂದ್ರವು ವಾರದಲ್ಲಿ ಒಂದು ದಿನ ಸೇವೆಗೆ ಸೀಮಿತಗೊಂಡು ಉಳಿದ ದಿನಗಳಲ್ಲಿ ಬಾಗಿಲು ಮುಚ್ಚುವಂತಾಗಿದೆ.

ಕಳೆದ ಸುಮಾರು 5 ವರ್ಷಗಳ ಹಿಂದೆ ಈ ಆರೋಗ್ಯ ಉಪಕೇಂದ್ರವನ್ನು ನಿರ್ಮಿಸಲಾಗಿದೆ. ಕಳೆದ ಸುಮಾರು 3 ವರ್ಷಗಳಿಂದ ಜನರ ಸೇವೆಗೆ ಲಭ್ಯವಿದ್ದು, ಒಬ್ಬರೇ ಸಿಬಂದಿ ಎಲ್ಲವನ್ನೂ ನಿರ್ವಹಿಸಬೇಕಾಗಿದೆ. ಶೀತ, ಜ್ವರಕ್ಕೆ ಮಾತ್ರ ಔಷಧ ನೀಡಲಾಗುತ್ತಿದೆ. ಬಿಪಿ, ಶುಗರ್‌ ಪರೀಕ್ಷೆ ಮಾಡಲಾಗುತ್ತಿದೆ. ರೋಗ ಹೇಳಿ ಕೇಳಿ ಬರುವುದಿಲ್ಲ, ವಾರದಲ್ಲಿ ಒಂದೇ ದಿನ ತೆರೆಯುವುದರಿಂದ ಸಮರ್ಪಕ ಸೇವೆ ಲಭ್ಯವಾಗುತ್ತಿಲ್ಲ ಎಂಬ ಆರೋಪ ಗ್ರಾಮಸ್ಥರದ್ದು.

ಎಲ್ಲವನ್ನೂ ನಿಭಾಯಿಸಬೇಕು
ಆರೋಗ್ಯ ಕೇಂದ್ರದಲ್ಲಿ ಒಬ್ಬರೇ ಸಿಬಂದಿ ಇದ್ದು, ಜವಾಬ್ದಾರಿ ಸಾಕಷ್ಟಿದೆ. ಇರುವ ಒಬ್ಬರು ಆರೋಗ್ಯ ಸಹಾಯಕಿ ನಿಟ್ಟಡೆ, ಕುಕ್ಕೇಡಿ ಗ್ರಾಮಗಳು ಸಹಿತ ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆರಂಬೋಡಿ, ಹೊಸಂಗಡಿ, ವೇಣೂರು, ಕರಿಮಣೇಲು ಗ್ರಾಮಗಳಿಗೆ ಮಕ್ಕಳ ಇಂಜೆಕ್ಷನ್‌ ನೀಡಲು ಫೀಲ್ಡ್‌ಗೆ ಹೋಗುತ್ತಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ನೆರವಿನೊಂದಿಗೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಜನರಲ್ಲಿ ಆರೋಗ್ಯದ ಬಗ್ಗೆ ಹಾಗೂ ಸೊಳ್ಳೆ ಸಂತಾನೋತ್ಪತ್ತಿ ತಾಣಗಳ ನಿರ್ಮೂಲನೆ  ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಎದೆಹಾಲು ಉಣ್ಣುವ ಮಕ್ಕಳಿಗೆ ಕಡ್ಡಾಯವಾಗಿ ಎದೆಹಾಲು ನೀಡುವಂತೆ ತಾಯಂದಿರ ಮನವರಿಕೆ ಮಾಡುತ್ತಿದ್ದಾರೆ.

ಕಂಪ್ಯೂಟರ್‌ ಸೌಲಭ್ಯವಿಲ್ಲ
ಕಡತಗಳ ನಿರ್ವಹಣೆಯನ್ನು ಕಂಪ್ಯೂಟರ್‌ ಮೂಲಕ ನಡೆಸಬೇಕಾಗುತ್ತದೆ. ಆದರೆ ಇಲ್ಲಿ ಕಂಪ್ಯೂಟರ್‌ ಸೌಲಭ್ಯ ಇಲ್ಲದೇ ಇರುವುದರಿಂದ ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಇದನ್ನು ನಿಭಾಯಿಸುತ್ತಾರೆ. ಈ ಕೆಲಸಗಳ ಮಧ್ಯೆ ವಾರದಲ್ಲಿ ಬುಧವಾರ ಮಾತ್ರ ಆರೋಗ್ಯ ಕೇಂದ್ರವನ್ನು ತೆರೆಯಲು ಸಾಧ್ಯವಾಗುತ್ತಿದ್ದು, ಉಳಿದ ದಿನಗಳಲ್ಲಿ ಗ್ರಾಮಸ್ಥರಿಗೆ ಆರೋಗ್ಯ ಸೇವೆ ಮರೀಚಿಕೆಯಾಗಿದೆ.

ಸುಸಜ್ಜಿತ ಕಟ್ಟಡ
ಸುಮಾರು 2013ರಲ್ಲಿ ನಿರ್ಮಿಸಲಾದ ಈ ಆರೋಗ್ಯ ಕೇಂದ್ರವನ್ನು ಇದೀಗ ಸಾಕಷ್ಟು ನವೀಕರಣ ಮಾಡಲಾಗಿದೆ, ಸುಸಜ್ಜಿತ ಕಾಂಪೌಂಡ್‌, ಗೇಟ್‌ ಗಳನ್ನು ಅಳವಡಿಸಲಾಗಿದೆ. ಸಿಬಂದಿಗೆ ಉಳಿದು ಕೊಳ್ಳಲು ವಸತಿ ಕೇಂದ್ರ ಕೂಡಾ ಇದೆ. 2017-18ರಲ್ಲಿ ಆರೋಗ್ಯ ಉಪಕೇಂದ್ರದ ನವೀಕರಣಕ್ಕಾಗಿ ವಿವಿಧ ಯೋಜನೆಯಡಿ 3.35 ಲಕ್ಷ ರೂ. ಅನುದಾನ ಲಭಿಸಿದ್ದು, ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಎಲ್ಲ ಸೌಲಭ್ಯ ಹೊಂದಿರುವ ಉಪಕೇಂದ್ರ ದಲ್ಲಿ ಸೇವೆ ವಾರದಲ್ಲಿ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರುವುದು ದುರದೃಷ್ಟಕರ. ಈ ಬಗ್ಗೆ ಆರೋಗ್ಯ ಇಲಾಖೆ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ.

ಡೆಂಗ್ಯೂ ಶಂಕಿತ ಪ್ರಕರಣ
ನಿಟ್ಟಡೆ ಆರೋಗ್ಯ ಉಪಕೇಂದ್ರದ ವ್ಯಾಪ್ತಿಯಲ್ಲಿ  ಸುಮಾರು 10 ಮಂದಿಗೆ ಶಂಕಿತ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಸಲಹೆ ಹಾಗೂ ಔಷಧದಿಂದ ಗುಣಮುಖರಾಗುತ್ತಿದ್ದಾರೆ, ಇನ್ನು ಕೆಲವರು ಗುಣಮುಖರಾಗಿದ್ದಾರೆ. ಗ್ರಾಮೀಣ ಭಾಗದ ಆರೋಗ್ಯ ಉಪಕೇಂದ್ರಗಳಲ್ಲಿ ಕನಿಷ್ಠ ಮೂವರು ಸಿಬಂದಿಯನ್ನಾದರೂ ನೇಮಿಸಿ  ಆರೋಗ್ಯಭಾಗ್ಯ ಕರುಣಿಸಲು ಆರೋಗ್ಯ ಇಲಾಖೆ ಮುಂದಾಗಬೇಕೆಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬಂದಿದೆ.

ನೇಮಕಾತಿಗೆ ಆದ್ಯತೆ 
ನಿಟ್ಟಡೆ ಆರೋಗ್ಯ ಉಪಕೇಂದ್ರಕ್ಕೆ ಸಿಬಂದಿ ನೇಮಕಾತಿ ಆಗಿಲ್ಲ. ಮುಂದಿನ ತಿಂಗಳಲ್ಲಿ ಸರಕಾರದಿಂದಲೇ ನೇಮಕಾತಿ ಆಗುವ ಸಾಧ್ಯತೆ ಇದೆ. ಆಸ್ಪತ್ರೆ ಖಾಲಿ ಇರಬಾರದು ಮತ್ತು ಗ್ರಾಮಸ್ಥರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಮಹಿಳಾ ಸಿಬಂದಿಯೋರ್ವರನ್ನು ಅಲ್ಲಿಗೆ ನಿಯೋಜನೆ ಮಾಡಲಾಗಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೇಮಕಾತಿಯಲ್ಲಿ ಇಲ್ಲಿಗೆ ಆದ್ಯತೆ ನೀಡುತ್ತೇವೆ. 
– ಡಾ| ಕಲಾಮಧು, ತಾ| ವೈದ್ಯಾಧಿಕಾರಿ

ಆರೋಗ್ಯದ ಬಗ್ಗೆ ಜಾಗೃತಿ 
ನಿಟ್ಟಡೆ ಉಪಕೇಂದ್ರ ಮಾತ್ರವಲ್ಲದೆ ಸಿಬಂದಿಯಿಲ್ಲದ ವೇಣೂರು ಪ್ರಾ.ಆ. ಕೇಂದ್ರದ ಗ್ರಾಮಗಳಿಗೂ ಕರ್ತವ್ಯ ನಿಮಿತ್ತ ನಾನು ತೆರಳಬೇಕಿದೆ. ಈಗಾಗಿ ನಿಟ್ಟಡೆ ಆರೋಗ್ಯ ಕೇಂದ್ರದಲ್ಲಿ ದಿನವಿಡೀ ಇರಲು ಸಾಧ್ಯ ಆಗುತ್ತಿಲ್ಲ. ಫೀಲ್ಡ್‌ ವರ್ಕ್‌ನಲ್ಲಿ ಗ್ರಾಮ ಗ್ರಾಮಗಳಿಗೆ ತೆರಳಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ. ಇದಕ್ಕೆ ಆಶಾ ಕಾರ್ಯಕರ್ತರು ಸಹಕಾರ ನೀಡುತ್ತಾರೆ.
– ಇಂದಿರಾ, ಆರೋಗ್ಯ ಸಹಾಯಕಿ

— ಪದ್ಮನಾಭ ವೇಣೂರು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.