ಕರಾವಳಿ ತಾಪಮಾನದಲ್ಲಿ 2 ಡಿಗ್ರಿ ಸೆ. ಇಳಿಕೆ ಸಾಧ್ಯತೆ: ಐಎಂಡಿ

ಸದ್ಯಕ್ಕೆ ಉಷ್ಣ ಅಲೆ ಭೀತಿ ದೂರ

Team Udayavani, Mar 5, 2023, 7:46 AM IST

ಕರಾವಳಿ ತಾಪಮಾನದಲ್ಲಿ 2 ಡಿಗ್ರಿ ಸೆ. ಇಳಿಕೆ ಸಾಧ್ಯತೆ: ಐಎಂಡಿ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ನೀಡಿದ್ದ ಬಿಸಿ ಗಾಳಿ ಎಚ್ಚರಿಕೆಯನ್ನು ಹಿಂಪಡೆದಿದ್ದು, ರವಿವಾರ (ಮಾ. 5)ರಿಂದ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆ.ಗಳಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕರಾವಳಿಯಲ್ಲಿ ಉಷ್ಣ ಅಲೆಯ (ಹೀಟ್‌ ವೇವ್‌) ಪ್ರಭಾವ ಎರಡು ದಿನ ಕಂಡು ಬಂದಿತ್ತು. ಆದರೆ ಇದು ಸಾಮಾನ್ಯವಾಗಿ ಉಂಟಾಗುವ ಹೀಟ್‌ ವೇವ್‌ ಅಲ್ಲ, ಬದಲಾಗಿ ಆಗಾಗ್ಗೆ ತಾಪಮಾನದ ದಿಢೀರ್‌ ಏರಿಕೆಯಿಂದ ಈ ರೀತಿ ಆಗಿದೆ. ಹಾಗಾಗಿ ಎರಡು ದಿನಗಳಿಗೆ ಸೀಮಿತಗೊಂಡು ಕಡಿಮೆಯಾಗಿದೆ. ಸಾಮಾನ್ಯವಾಗಿ ಏಪ್ರಿಲ್‌ -ಮೇ ತಿಂಗಳಲ್ಲಿ ಉಷ್ಣ ಅಲೆಯ ಪ್ರಮಾಣ ಹೆಚ್ಚಿರುತ್ತದೆ ಎನ್ನುತ್ತಾರೆ ಹವಾಮಾನ ವಿಶ್ಲೇಷಕರು.

ವಾತಾವರಣದಲ್ಲಿ ಬಿಸಿಯ ಅನುಭವ
ಉಷ್ಣ ಅಲೆಯ ಪರಿಣಾಮ ಶನಿವಾರ ವಾತಾವರಣದಲ್ಲಿ ಉಷ್ಣತೆಯ ಅನುಭವ ಹೆಚ್ಚಾಗಿತ್ತು. ಮಧ್ಯಾಹ್ನ ಉರಿ ಸೆಕೆ ಜನರನ್ನು ಬಳಲಿ ಬೆಂಡಾಗುವಂತೆ ಮಾಡಿದೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿ, ರುಮಾಲು, ಟೋಪಿ, ಮರದ ನೆರಳಿನ ಆಶ್ರಯ ಪಡೆಯುವುದು ಸಾಮಾನ್ಯವಾಗಿತ್ತು. ಸೀಯಾಳ, ಜ್ಯೂಸ್‌ ಅಂಗಡಿಗಳಲ್ಲಿ ಜನರು ಹೆಚ್ಚಾಗಿ ಕಂಡು ಬಂದಿದ್ದಾರೆ. ಬಸ್ಸು ಸಹಿತ ವಿವಿಧ ವಾಹನಗಳಲ್ಲಿ ತೆರಳುವವರಿಗೆ ಗಾಳಿಯಲ್ಲಿ ಬಿಸಿ ಹೆಚ್ಚಿರುವುದು ಅನುಭವಕ್ಕೆ ಬಂದಿದೆ.
ಶನಿವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ ಸೆ. ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆ. ದಾಖಲಾಗಿದೆ.

ಉಷ್ಣ ಅಲೆ ಘೋಷಣೆ ಹೇಗೆ?
ಹವಾಮಾನ ಇಲಾಖೆ ಕರಾವಳಿಯಲ್ಲಿ ಹೀಟ್‌ ವೇವ್‌ ಘೋಷಿಸಬೇಕಾದರೆ ತಾಪಮಾನ 37 ಡಿಗ್ರಿ ಸೆ. ತಲುಪುವುದರೊಂದಿಗೆ ಸಾಮಾನ್ಯಕ್ಕಿಂತ 4.5 ಡಿಗ್ರಿ ಸೆ. ಉಷ್ಣಾಂಶ ಏರಿಕೆಯಾಗಬೇಕು. ಈ ರೀತಿಯ ತಾಪಮಾನ ಒಂದೇ ಭಾಗದ ಕನಿಷ್ಠ ಎರಡು ಹವಾಮಾನ ನಿಗಾ ಕೇಂದ್ರಗಳಲ್ಲಿ ಎರಡು ದಿನ ದಾಖಲಾದರೆ ಆಗ ಎರಡನೇ ದಿನ ಇದನ್ನು ಉಷ್ಣ ಅಲೆ ಎಂದು ಪ್ರಕಟಿಸಲಾಗುತ್ತದೆ. ಕರಾವಳಿಯಲ್ಲಿ ಕಾರವಾರ ಮತ್ತು ಪಣಂಬೂರು ಹವಾಮಾನ ಕೇಂದ್ರಗಳಲ್ಲಿ ಇದು ದಾಖಲಾಗಿದ್ದು, ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಐದಾರು ಸ್ಟೇಷನ್‌ಗಳಿಂದ ಉಷ್ಣಾಂಶ ಮಾಹಿತಿ ಇಲಾಖೆಗೆ ಲಭ್ಯವಾಗುತ್ತದೆ. ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಐಎಂಡಿ ಬೆಂಗಳೂರು ವಿಜ್ಞಾನಿ ಪ್ರಸಾದ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಬಿಸಿಲಿನ ಬೇಗೆಗೆ ಕಂಗಾಲಾದ ಜನ
ಸುಳ್ಯ: ಕೆಲವು ದಿನಗಳಿಂದ ಭಾರೀ ಬಿಸಿಲು ಮತ್ತು ವಾತಾವರಣದಲ್ಲಿ ತೀವ್ರ ಉಷ್ಣತೆ ಕಂಡುಬರುತ್ತಿದ್ದು, ಜನರು ಕಂಗಾಲಾಗಿದ್ದಾರೆ. ವಾತಾವರಣದ ಉಷ್ಣತೆ ಶನಿವಾರ ಮತ್ತಷ್ಟು ಏರಿಕೆಯಾಗಿದೆ. ಸುಳ್ಯ ತಾಲೂಕು ಸಹಿತ ವಿವಿಧೆಡೆ ಮಧ್ಯಾಹ್ನ ಉರಿ ಬಿಸಿಲಿಗೆ ಭೂಮಿ ಕಾದ ಕಬ್ಬಿಣದಂತಾಗಿರುವುದು ಅನುಭವಕ್ಕೆ ಬಂದಿದೆ.

ಶನಿವಾರ ಬೆಳಗ್ಗಿನಿಂದಲೇ ಉಷ್ಣಾಂಶ ಏರಿಕೆಯಾಗುತ್ತಿದ್ದು 11ಯ ಹೊತ್ತಿಗೆ ಭಾರೀ ಬಿಸಿಲು ಇತ್ತು. 12.30 – 1ರ ವೇಳೆಗೆ ಬಿಸಿಲ ಬೇಗೆ ಮತ್ತಷ್ಟು ಏರಿದೆ. ಹಗಲು ಜನತೆ ಮನೆಯಿಂದ ಹೊರಬರಲಾಗದಂತಹ ಸ್ಥಿತಿ ಇತ್ತು. ಪಾದಚಾರಿಗಳಿಗೆ ಬೆಂಕಿಯ ನಡುವೆ ನಡೆದಾಡಿದ ಅನುಭವ ಉಂಟಾಗಿದೆ.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Exam 24×7: 17 ಮಂದಿಗೆ ಸರಕಾರಿ ಮೆಡಿಕಲ್‌ ಸೀಟು

Exam 24×7: 17 ಮಂದಿಗೆ ಸರಕಾರಿ ಮೆಡಿಕಲ್‌ ಸೀಟು

Ullal ಮರಳು ಅಕ್ರಮ ಸಾಗಾಟ ಲಾರಿ, ಚಾಲಕ ವಶಕ್ಕೆ

Ullal ಮರಳು ಅಕ್ರಮ ಸಾಗಾಟ ಲಾರಿ, ಚಾಲಕ ವಶಕ್ಕೆ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.