![1-assam](https://www.udayavani.com/wp-content/uploads/2024/07/1-assam-415x233.jpg)
ಕರಾವಳಿಯಾದ್ಯಂತ ಉತ್ತಮ ಮಳೆ
Team Udayavani, Apr 16, 2018, 12:03 PM IST
![rain.jpg](https://www.udayavani.com/wp-content/uploads/2018/04/16/rain-620x393.jpg)
ಮಂಗಳೂರು/ಉಡುಪಿ: ಕರಾವಳಿಯ ವಿವಿಧೆಡೆ ರವಿವಾರ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆಯಾಗಿದೆ.
ಮಂಗಳೂರು ನಗರ ಮತ್ತು ಪುತ್ತೂರಿನಲ್ಲಿ ಬೆಳಗ್ಗೆ ಸುಮಾರು ಎರಡು ತಾಸು ಮಳೆಯಾಗಿದೆ. ಸುರತ್ಕಲ್, ಕೋಟೆಕಾರು, ತಲಪಾಡಿ,ಕಿನ್ನಿಗೋಳಿ, ಕುಂಜೂರು, ಶಿರ್ವ, ಬಂಟ್ವಾಳ, ಮೂಲ್ಕಿ, ವಿಟ್ಲ, ಪಡುಬಿದ್ರಿ, ವೇಣೂರು, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಉಪ್ಪಿನಂಗಡಿ, ಧರ್ಮಸ್ಥಳ ಸಹಿತ ನಗರದ ನಾನಾ ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ವಿದ್ಯುತ್ ಕೈಕೊಟ್ಟಿತ್ತು. ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ-ಮಳೆಯಾಗಿದ್ದು, ಮರ್ಧಾಳ ಸರಕಾರಿ ಶಾಲೆಯ ಆವರಣ ಗೋಡೆ ಕುಸಿದಿದೆ. ಬೆಳ್ತಂಗಡಿಯ ಬಂಗಾಡಿ ಬೆದ್ರಬೆಟ್ಟಿನಲ್ಲಿ ನವೀಕರಣಗೊಂಡು ಉದ್ಘಾಟನೆಯಾದ ಮರಿಯಾಂಬಿಕಾ ಚರ್ಚಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅಡಚಣೆಯಾಯಿತು.
ಉಡುಪಿ ಜಿಲ್ಲೆಯ ತೆಕ್ಕಟ್ಟೆ, ಉಡುಪಿ, ಮಲ್ಪೆ, ಬ್ರಹ್ಮಾವರ, ಕುಂಜಾಲು, ಆರೂರುಗಳಲ್ಲಿ ಮಳೆಯಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಕ್ರೀಡಾಕೂಟಕ್ಕೆ ಅಡ್ಡಿ
ಮಡಿಕೇರಿ: ಮಡಿಕೇರಿಯಲ್ಲಿ ಕೊಡವ ಕ್ರೀಡಾಕೂಟ ಕುಲ್ಲೇಟಿರ ಕಪ್ ಹಾಕಿ ಉತ್ಸವಕ್ಕೆ ಗಾಳಿ-ಮಳೆ ಅಡ್ಡಿ ಉಂಟು ಮಾಡಿತು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.