ಸರಣಿ ರಜೆ: ದೇವಸ್ಥಾನಗಳಲ್ಲಿ ಭಕ್ತ ಜನಸಾಗರ
Team Udayavani, Mar 31, 2018, 9:50 AM IST
ಉಡುಪಿ/ಮಂಗಳೂರು: ನಾಡಿನ ವಿವಿಧ ದೇವಸ್ಥಾನಗಳಿಗೆ ಭೇಟಿ ಕೊಡುವ ಭಕ್ತರ ಸಂಖ್ಯೆ ಜಾಸ್ತಿಯಾಗಿದೆ. ಗುರುವಾರದಿಂದ ಮೊದಲ್ಗೊಂಡು ನಾಲ್ಕು ದಿನ ಸತತ ರಜೆಗಳು ಇರುವುದರಿಂದ ಮತ್ತು ಪಿಯುಸಿ ಪರೀಕ್ಷೆ ಮುಗಿದಿರುವುದರಿಂದ ಮಕ್ಕಳೊಂದಿಗೆ ಪೋಷಕರು ರಾಜ್ಯ ಮತ್ತು ಹೊರರಾಜ್ಯಗಳ ವಿವಿಧೆಡೆಗಳಿಂದ ಕೊಲ್ಲೂರು, ಉಡುಪಿ, ಧರ್ಮಸ್ಥಳ, ಸುಬ್ರಹ್ಮಣ್ಯ, ಕಟೀಲು ಮೊದಲಾದದೇವಸ್ಥಾನಗಳಿಗೆ ಆಗಮಿಸಿದ್ದರು. ಎಲ್ಲ ಕಡೆ ದೇವರ ದರ್ಶನ ವ್ಯವಸ್ಥೆ ಮಾಡಲು ಆಡಳಿತದವರು, ಸಿಬಂದಿ, ಭದ್ರತಾ ಸಿಬಂದಿ ಪ್ರಯತ್ನ ಪಡಬೇಕಾಯಿತು. ಕೊಲ್ಲೂರಿನಲ್ಲಿ ಮುಂಜಾನೆ ಆರಂಭಗೊಂಡ ಸರತಿ ಸಾಲು ಆರ್.ಎನ್. ಶೆಟ್ಟಿ ಅತಿಥಿಗೃಹದವರೆಗೆ, ಉಡುಪಿಯಲ್ಲಿ ಗೀತಾ ಮಂದಿರದವರೆಗೆ ಸರತಿ ಸಾಲು ಬೆಳೆದಿತ್ತು.
ವಸತಿಗೃಹ ಭರ್ತಿ: ಕೊಲ್ಲೂರು ದೇಗುಲ ಅಧೀನದಲ್ಲಿರುವ ವಸತಿಗೃಹ ಸಹಿತ ಎಲ್ಲ ವಸತಿಗೃಹಗಳು ಭರ್ತಿಯಾಗಿದ್ದು, ಅನ್ಯ ರಾಜ್ಯಗಳಿಂದ ಆಗಮಿಸಿದ ಭಕ್ತರು ಕುಂದಾಪುರ ಪರಿಸರದ ವಸತಿಗೃಹಗಳಿಗೆ ತೆರಳಬೇಕಾದ ಪರಿಸ್ಥಿತಿ ಕಂಡುಬಂತು. ಕೆಲವೊಂದು ವಸತಿಗೃಹಗಳಲ್ಲಿ ದುಬಾರಿ ಬಾಡಿಗೆ ವಸೂಲಿ ಮಾಡುತ್ತಿರುವ ಬಗ್ಗೆ ಅನೇಕ ಭಕ್ತರು ಆರೋಪಿಸಿದ್ದಾರೆ. ಉಡುಪಿ ಮೊದಲಾದೆಡೆಯೂ ಅತಿಥಿಗೃಹಗಳು ತುಂಬಿ ಹೋಗಿವೆ. ಹಟ್ಟಿಯಂಗಡಿ, ಆನೆಗುಡ್ಡೆ, ಮಂದಾರ್ತಿ ಮೊದಲಾದ ದೇವಸ್ಥಾನಗಳಲ್ಲೂ ಭಕ್ತರ ಸಂಖ್ಯೆ ಹೆಚ್ಚಿಗೆ ಕಂಡುಬಂತು.
— ಚಿತ್ರ: ರಮೇಶ್ ಕೊಲ್ಲೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!