ಬೆಳ್ತಂಗಡಿ ಸುತ್ತಮುತ್ತ ಗುಡುಗು ಸಿಡಿಲು ಸಹಿತ ಭಾರೀ ಮಳೆ
ರಾ.ಹೆ.ಗೆ ಮರ ಬಿದ್ದು ತಾಸುಗಳ ಕಾಲ ರಸ್ತೆ ತಡೆ
Team Udayavani, May 12, 2023, 6:50 AM IST
ಬೆಳ್ತಂಗಡಿ: ತಾಲೂಕಿನ ಬಹುತೇಕ ಕಡೆ ಗುರುವಾರ ಸಂಜೆ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆಯಾದ ಪರಿಣಾಮ ಮರಗಳು ಉರುಳಿ ರಾಷ್ಟ್ರೀಯ ಹೆದ್ದಾರಿ ಸಹಿತ ರಸ್ತೆ ತಡೆ ಉಂಟಾಯಿತು.
ಬೆಳಗ್ಗೆ ಬಿಸಿಲಿನ ವಾತಾವರಣದಿಂದ ಕೂಡಿದ್ದು, ಸಂಜೆಯಾಗುತ್ತಲೇ ಮೋಡ ಕವಿಯಲಾರಂಭಿಸಿ 5 ಗಂಟೆ ವೇಳೆಗೆ ಸಿಡಿಲು, ಮಿಂಚು ಸಹಿತ ಮಳೆ ಆರಂಭವಾಯಿತು. ಬೆಳ್ತಂಗಡಿಯಿಂದ ಮಂಗಳೂರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಪಿಲಿಚಂಡಿಕಲ್ಲು ಬಳಿ ಬೃಹತ್ ಮರವೊಂದು ರಸ್ತೆಗೆ ಉರುಳಿ ತಾಸುಗಳ ಕಾಲ ರಸ್ತೆ ತಡೆ ಉಂಟಾಯಿತು. ಸ್ಥಳೀಯರು ಜೆಸಿಬಿ ಮೂಲಕ ಮರ ತೆರವು ಮಾಡಿದರು. ಬಳಿಕ ಅರಣ್ಯ ಇಲಾಖೆ ಸಿಬಂದಿ ಮರ ತೆರವುಗೊಳಿಸಿದರು. ತುರ್ತು ಕಾರಣ ಸಹಿತ ದೂರದ ಊರಿಗೆ ಪ್ರಯಾಣಿಸುವ ಮಂದಿ ಪರದಾಡುವಂತಾಯಿತು.
ಮರಗಳು ಬಿದ್ದು ಹಾನಿ
ಬೆಳ್ತಂಗಡಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದ ಬಳಿ ಮರ ಉರುಳಿ ಬಿದ್ದು ಆವರಣ ಗೋಡೆಗೆ ಹಾಗೂ ವಿದ್ಯುತ್ ತಂತಿ, ಕಂಬ ಸಹಿತ ಮುರಿದುಬಿದ್ದಿದೆ. ಸವಣಾಲು ರಸ್ತೆಯ ಕಲ್ಕಣಿ ಬಳಿ ಮನೆಯೊಂದಕ್ಕೆ ತೆಂಗಿನ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಬೆಳ್ತಂಗಡಿ ಗುರುದೇವ ಕಾಲೇಜು ಬಳಿ ತಿಂಗಿನ ಮರವೊಂದು ಧರೆಗುರುಳಿದೆ.
ಮನೆಗೆ ಹಾನಿ
ಕುವೆಟ್ಟು ಗ್ರಾಮದ ಕವಿತಾ ರಮೇಶ್ ಪೂಜಾರಿ ಅವರ ಮನೆ ಭಾಗಶಃ ಹಾನಿಯಾಗಿದೆ. ತಾಲೂಕಿನಲ್ಲಿ ಒಟ್ಟು 12 ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಂತ್ಯಾರು. ಕುವೆಟ್ಟು, ಗೇರುಕಟ್ಟೆ, ಬೆಳ್ತಂಗಡಿ, ಲಾೖಲ ಸಹಿತ ಸುತ್ತಮುತ್ತ ಉತ್ತಮ ಮಳೆಯಾಗಿದ್ದು ಇತರೆಡೆ ಸಾಧಾರಣ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ