ಕರಾವಳಿ ಪರಿಸರದಲ್ಲಿ ಗುಡುಗು,ಸಿಡಿಲು ಸಹಿತ ಉತ್ತಮ ಮಳೆ
Team Udayavani, Nov 13, 2020, 8:28 PM IST
ಮಂಗಳೂರು : ಒಮ್ಮೆಲೇ ಸುರಿದ ಬಾರೀ ಮಳೆಯಿಂದಾಗಿ ಶುಕ್ರವಾರ ಸಂಜೆ ಜನಜೀವನ ಅಸ್ತವ್ಯಸ್ಥಗೊಂಡಿತು. ದೀಪಾವಳಿ ಹಬ್ಬಕ್ಕೆ ಖರೀದಿಯಲ್ಲಿ ತೊಡಗಿದ್ದ ಜನರಿಗೆ ಒಮ್ಮೆಲೇ ಸುರಿದ ಮಳೆಯಿಂದಾಗಿ ಖರೀದಿಗೆ ಅಡ್ಡಿಯಾಯಿತು.
ಕರಾವಳಿ ಪರಿಸರದಲ್ಲಿ ಶುಕ್ರವಾರ ಸಂಜೆ ಗುಡುಗು ಸಿಡಿಲಿನ ಸಹಿತ ಭಾರೀ ಮಳೆಯಾಗಿದೆ. ಮಂಗಳೂರಿನಲ್ಲಿ ಶುಕ್ರವಾರ ಸಂಜೆಯ ವೇಳೆಗೆ ಭಾರೀ ಮಳೆಯಾಗಿದ್ದು, ನಗರ ಸೇರಿದಂತೆ, ಬಂಟ್ವಾಳ ತಾಲೂಕಿನ ಬಹುತೇಕ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು, ಮಿಂಚು, ಅರ್ಧ ತಾಸಿಗೂ ಹೆಚ್ಚು ಮಳೆಯ ಆರ್ಭಟ ಇತ್ತು. ಸಾಮಾಗ್ರಿಗಳನ್ನುಕೊಳ್ಳುವಲ್ಲಿ ನಿರತರಾಗಿದ್ದ ಜನರಿಗೆ ಏಕಾಏಕಿ ಸುರಿದ ಮಳೆಯಿಂದ ಹಬ್ಬದ ಶಾಪಿಂಗ್ ಗೆ ತುಸು ತೊಂದರೆ ಆಯಿತು. ಪಟಾಕಿ, ಹೂಹಣ್ಣು, ಹಣತೆ, ಗೂಡುದೀಪ ವ್ಯಾಪಾರಸ್ಥಿರಿಗೂ ಮಳೆಯಿಂದಾಗಿ ವ್ಯಾಪಾರಕ್ಕೆ ತೊಂದರೆ ಉಂಟಾಯಿತು. ರೈನ್ ಕೋಟ್, ಕೊಡೆ ತಾರದಿದ್ದವರಿಗೆ ಸಂಜೆ ಕಚೇರಿಯಿಂದ ಮನೆಗೆ ತೆರಳಲು ಸಮಸ್ಯೆಯಾಯಿತು.
ಮಂಗಳೂರು ಸೇರಿದಂತೆ, ಕರಾವಳಿಯ ಕೆಲ ಪ್ರದೇಶದಲ್ಲಿ ಶುಕ್ರವಾರ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಉಡುಪಿಯ ಕಟಪಾಡಿ,ಕಾಪು, ಕುಂದಾಪುರ ಪರಿಸರದಲ್ಲಿ ಅಲ್ಪಸ್ವಲ್ಪ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ