ಕುಳಾಲು: ಮಳೆಗೆ ಕುಸಿದ ಶಾಲೆಯ ಛಾವಣಿ
Team Udayavani, Nov 7, 2022, 2:34 PM IST
ವಿಟ್ಲ: ಕೊಳ್ನಾಡು ಗ್ರಾಮದ ಕುಳಾಲು ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಹಂಚಿನ ಮಾಡು ಶುಕ್ರವಾರ ಸುರಿದ ಮಳೆಯ ಪರಿಣಾಮ ಕುಸಿದು ಬಿದ್ದು ಭಾರೀ ಹಾನಿ ಸಂಭವಿಸಿದೆ.
ಕಟ್ಟಡ ಜೀರ್ಣವಾಗಿರುವ ಕಾರಣ ಅಪಾಯ ಸಂಭವಿಸಬಹುದು ಎಂಬ ದೂರ ಗ್ರಹಿಕೆಯಿಂದ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಕೊಳ್ನಾಡು ಗ್ರಾ.ಪಂ. ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಅವರು ಚರ್ಚಿಸಿ, ಕೇವಲ 5 ದಿನಗಳ ಹಿಂದೆ ವಿದ್ಯಾರ್ಥಿಗಳನ್ನು ಮತ್ತೂಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದರು.
ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ ಆರೋಪ
ಈ ಶಾಲೆಗೆ 92 ವರ್ಷಗಳಾಗಿದ್ದು 6 ಕೊಠಡಿಗಳಿವೆ. 1ರಿಂದ 8ನೇ ತರಗತಿವರೆಗೆ ಒಟ್ಟು 93 ಮಕ್ಕಳಿದ್ದಾರೆ. 6 ಶಿಕ್ಷಕರ ಅಗತ್ಯ ವಿದ್ದು 4 ಮಂದಿ ಇದ್ದು ಇನ್ನೆರಡು ಹುದ್ದೆಗಳು ಖಾಲಿಯಾಗಿವೆ.
ಅತಿಥಿ ಶಿಕ್ಷಕರನ್ನು ಶ್ರೀ ವಾರಾಹೀ ಯುವಕ ಮಂಡಲ ಮತ್ತು ಮಕ್ಕಳ ಹೆತ್ತವರು ನೇಮಿಸಿದ್ದಾರೆ. ದುಬಾೖಯ ಉದ್ಯಮಿ ರಾಜಶೇಖರ ಚೌಟ ಮತ್ತು ಇತರರು ಸೇರಿ ಖರೀದಿಸಿದ ಬಸ್ನಲ್ಲಿ ವಿದ್ಯಾರ್ಥಿಗಳು ಓಡಾಡುತ್ತಿದ್ದಾರೆ. ಹೆತ್ತವರು, ದಾನಿಗಳು ಕೈಜೋಡಿಸಿದ್ದರೂ ಈ ಶಾಲೆಗೆ ಇಲಾಖೆಯ ಸ್ಪಂದನವಿಲ್ಲ ಎಂದು ಇಲ್ಲಿನ ಹೆತ್ತವರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ