ಬಿರುಸಿನ ಮಳೆ: ಕೃಷಿ ಕಾರ್ಯಕ್ಕೆ ತೊಡಕು; ರೋಗ ಭೀತಿ


Team Udayavani, Jul 14, 2018, 2:10 AM IST

bele-haalu-13-7.jpg

ಆಲಂಕಾರು: ಈ ವರ್ಷದ ಮಳೆಗಾಲ ಉತ್ತಮ ಆರಂಭವನ್ನೇ ಪಡೆದಿದ್ದು, ನದಿ ಪಾತ್ರದ ರೈತಾಪಿ ಜನತೆಯನ್ನು ಹೈರಾಣಾಗಿಸಿದೆ. ನದಿ ದಂಡೆಯ ರೈತರ ತೋಟಗಳಲ್ಲಿ ತಿಂಗಳುಗಟ್ಟಲೆ ನೆರೆ ನೀರು ನಿಂತು ಕೊಳೆ ರೋಗದಿಂದ ಅಡಿಕೆ ಬೆಳೆಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಭೀತಿ ಎದುರಾಗಿದ್ದರೆ, ಗದ್ದೆಗಳಲ್ಲಿ ಭತ್ತ ಬೇಸಾಯ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಳೆರೋಗದ ಭೀತಿ
ಕರಾವಳಿಯಲ್ಲಿ ಭತ್ತದ ಕೃಷಿ ಹಾಗೂ ಅಡಿಕೆ ಪ್ರಮುಖ ಬೆಳೆಯಾಗಿದೆ. ಮಳೆ ಆರಂಭವಾದ ಬಳಿಕ ಒಂದು ದಿನವೂ ಬಿಡುವು ಕೊಡದೆ ಮಳೆ ಸುರಿಯುತ್ತಿರುವುದರಿಂದ ಅಡಿಕೆಗೆ ಪ್ರಥಮ ಹಂತದ ಔಷಧಿ ಸಿಂಪರಣೆಗೂ ಅವಕಾಶ ಸಿಕ್ಕಿಲ್ಲ. ಈ ಪರಿಣಾಮ ನೆರೆ ನೀರು ನಿಲ್ಲದ ತೋಟಗಳಿಗೂ ಕೊಳೆರೋಗದ ಭೀತಿ ಎದುರಾಗಿದೆ. ಅಡಿಕೆ ಕೃಷಿಗೆ ಪ್ರತೀ 30ರಿಂದ 45 ದಿನಗಳಿಗೊಮ್ಮೆ ಔಷಧಿ ಸಿಂಪರಣೆ ಮಾಡಬೇಕಾಗುತ್ತದೆ. ಆದರೆ ನಿರಂತರ ಮಳೆಯ ಕಾರಣ ಜೂನ್‌ ತಿಂಗಳ ಪ್ರಥಮ ಹಂತದ ಔಷಧಿ ಸಿಂಪರಣೆಯು ಇನ್ನೂ ಮಾಡಲಾಗಿಲ್ಲ. ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯೊಂದಿಗೆ ಉಪ ಕೃಷಿಗಳಾದ ಕರಿಮೆಣಸು, ಬಾಳೆ ಗಿಡಗಳ ಉಳಿವಿಗಾಗಿ ಶತಪ್ರಯತ್ನದಲ್ಲಿದ್ದಾರೆ. ನದಿ ಪಾತ್ರದಲ್ಲಿರುವ ಗದ್ದೆಗಳಿಗೆ ನೆರೆ ನೀರು ಆವರಿಸಿ ತಿಂಗಳಾಗುತ್ತ ಬಂದಿರುವ ಕಾರಣ ಭತ್ತ ನಾಟಿಯನ್ನೂ ಮಾಡಲಾಗುತ್ತಿಲ್ಲ.

ರಸಗೊಬ್ಬರ ಹಾಕಲೂ ಚಿಂತೆ
ಆರಂಭದಲ್ಲಿ ಬಿರುಗಾಳಿ, ಸಿಡಿಲಿನೊಂದಿಗೆ ಮುಂಗಾರು ಪ್ರವೇಶ ಪಡೆದು ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ರೈತರ ಅಪಾರ ಪ್ರಮಾಣದ ಅಡಿಕೆ, ಬಾಳೆ, ತೆಂಗು ಕೃಷಿಯನ್ನು ನಾಶ ಮಾಡಿತ್ತು. ಜತೆಗೆ ಸಿಡಿಲಿಗೆ ರೈತರ ಜೀವ ಬಲಿಯನ್ನು ಪಡೆದುಕೊಂಡಿತ್ತು. ಇದೀಗ ಭಾರೀ ಪ್ರಮಾಣದ ಮಳೆ ಅಳಿದುಳಿದ ಕೃಷಿಯನ್ನು ನಾಶ ಮಾಡುವತ್ತ ಪಣತೊಟ್ಟಂತಿದೆ. ಮಳೆ ಆರಂಭದಿಂದ ಈವರೆಗೆ ತೋಟಗಳಿಗೆ ಸಮರ್ಪಕ ರಸಗೊಬ್ಬರವನ್ನು ಹಾಕಲು ಮಳೆ ಅವಕಾಶ ನೀಡಿಲ್ಲ. ಗುಡ್ಡಗಾಡು ಬಯಲು ಪ್ರದೇಶದ ತೋಟಗಳಲ್ಲಿ ಮಳೆ ನೀರಿಗೆ ಗೊಬ್ಬರ ಕೊಚ್ಚಿ ಹೋಗುವ ಭೀತಿ ಉಂಟಾಗಿದೆ. ಇದರಿಂದ ದುಬಾರಿ ವೆಚ್ಚದ ರಸಗೊಬ್ಬರಗಳು ನೀರು ಪಾಲಾಗುತ್ತಿವೆ.

ಕೂಲಿ ಕಾರ್ಮಿಕರ ಕೊರತೆ
ಔಷಧಿ ಸಿಂಪರಣೆಯ ಕೂಲಿ ಕಾರ್ಮಿಕರು ಗ್ರಾಮದಲ್ಲಿ ಬೆರಳೆಣಿಕೆಯಷ್ಟಿರುವ ಕಾರಣ ಸಿಂಪರಣೆ ಮಾಡುವ ಕೂಲಿ ಕಾರ್ಮಿಕರಿಗೆ ಎಲ್ಲಿಲ್ಲದ ಬೇಡಿಕೆಯಾಗಿದೆ. ಕಳೆದ ವರ್ಷ 1,200 ರೂ. ದಿನ ಸಂಬಳವಿತ್ತು. ಆದರೆ ಈ ವರ್ಷ 1,500 ರೂ.ಗೂ ಅಧಿಕ ಸಂಬಳ ನೀಡಿದರೂ ಕೂಲಿ ಕಾರ್ಮಿಕರ ಕೊರತೆಯಾಗಿದೆ. ಇದ್ದವರಿಗೂ ಮಳೆ ಕಾರಣ ಕೆಲಸ ಕಾರ್ಯಗಳಿಗೆ ತೊಡಕಾಗಿದೆ. ಈ ಕಾರಣಕ್ಕಾಗಿ ಡ್ರಂ ಔಷಧಿ ಸಿಂಪಡಣೆಯ ಆಧಾರದಲ್ಲಿ ಸಂಬಳ ನೀಡುವ ಪದ್ಧತಿ ಜಾರಿಗೆ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ ಒಂದು ಡ್ರಂಗೆ 600 ರೂ. ವೇತನ ನೀಡಲಾಗುತ್ತಿದೆ.

ಬೆಂಬಲ ಬೆಲೆಗೆ ಪ್ರಯತ್ನಿಸಲಿ
ಕರಾವಳಿ ಭಾಗದಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದೆ. ಜಿಲ್ಲೆಯ ರೈತರಿಗೆ ಸರಕಾರ ಸಾಲ ಮನ್ನಾದ ಬದಲು ಅಡಿಕೆಗೆ ಬೆಂಬಲ ಬೆಲೆ ಘೋಷಿಸುತ್ತಿದ್ದರೆ ಸಾವಿರಾರು ರೈತರು ಸಂಕಷ್ಟದಿಂದ ಪಾರಾಗುತ್ತಿದ್ದರು. ಜನಪ್ರತಿನಿಧಿಗಳು ನೆರೆ ನೀರಿನಿಂದ ಕೃಷಿಯನ್ನು ಕಳೆದುಕೊಂಡ ರೈತರ‌ ಬಗ್ಗೆ ಸಮರ್ಪಕ ಮಾಹಿತಿ ಪಡೆದುಕೊಂಡು ಸದನದಲ್ಲಿ ಸರಕಾರದ ಮುಂದಿಟ್ಟು ಕರಾವಳಿಯ ರೈತರಿಗೆ ನ್ಯಾಯ ದೊರಕಿಸಕೊಡಬೇಕಾಗಿದೆ. ಅಡಿಕೆಗೆ ಸರಕಾರ ಬೆಂಬಲ ಬೆಲೆ ಘೋಷಿಸುವಂತೆ ಒತ್ತಡ ಹೇರಬೇಕಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.