ಪ್ರವಾಹ: ಉಭಯ ತಾ|ಗಳ ಬಹುತೇಕ ಪ್ರದೇಶ ಜಲಾವೃತ


Team Udayavani, Aug 10, 2018, 1:05 AM IST

ಬೆಳ್ತಂಗಡಿ: ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ನದಿಗಳಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳಗೊಂಡು ಗುರುವಾರ ತಾಲೂಕಿನ ವಿವಿಧ ಭಾಗಗಳಲ್ಲಿ ಪ್ರವಾಹದಿಂದಾಗಿ ಬಹುತೇಕ ಪ್ರದೇಶ ಜಲಾವೃತಗೊಂಡಿತು. ತಾಲೂಕಿನ ಬಹುತೇಕ ಕಡೆ ಬೆಳಗ್ಗಿನ ಹೊತ್ತು ಧಾರಾಕಾರ ಮಳೆಯಾಗಿ ಮಧ್ಯಾಹ್ನದ ವೇಳೆಗೆ ತೀವ್ರತೆ ಕಡಿಮೆಯಾಯಿತು. ತಾಲೂಕಿನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಸಹಿತ ತೋಟತ್ತಾಡಿ, ನಿಡಿಗಲ್‌, ಮುಂಡಾಜೆ, ಪುದುವೆಟ್ಟು, ಗುರಿಪಳ್ಳ, ನೆರಿಯ, ಬಂದಾರು, ಶಿಶಿಲ ಮೊದಲಾದ ಭಾಗಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ.ಹೆಚ್ಚಿನ ಕಡೆಗಳಲ್ಲಿ ರಸ್ತೆಯ ಮೇಲೆ ಹಾಗೂ ಕೃಷಿ ತೋಟಗಳಿಗೂ ನೀರು ನುಗ್ಗಿದೆ.


ಗುಡ್ಡ ಕುಸಿತ

ತೋಟತ್ತಾಡಿ ಹಳೆ ಕಕ್ಕಿಂಜೆ ಬಳಿ ಗುಡ್ಡ ಕುಸಿತ ಉಂಟಾದ ಪರಿಣಾಮ ನೆರಿಯ – ಕಕ್ಕಿಂಜೆ ರಸ್ತೆ ಬ್ಲಾಕ್‌ ಆಗಿತ್ತು. ಜತೆಗೆ ಮುಂಡಾಜೆ-ಧರ್ಮಸ್ಥಳ ರಸ್ತೆಯಲ್ಲೂ ಕುಸಿತ ಉಂಟಾಗಿದೆ. ನೆರಿಯ ಸೇತುವೆ ಮೇಲೆ ನೀರು ಹರಿದು ಸಂಚಾರ ಕಡಿತಗೊಂಡಿತು. ತೋಟತ್ತಾಡಿ ಬೆಂದ್ರಾಳ ಬಳಿ ರಸ್ತೆ ಮೇಲೆ ಪ್ರವಾಹದ ನೀರು ಹರಿದು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಜತೆಗೆ ಇಲ್ಲಿ ಕೃಷಿ ತೋಟಗಳಿಗೂ ನೀರು ನುಗ್ಗಿದ್ದು, ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನ ಮಂದಿರ ಪ್ರವಾಹದ ನೀರಿನಲ್ಲಿ ಮುಳುಗಡೆಯಾಯಿತು. ತೋಟತ್ತಾಡಿಯ ಅರಂತಬೈಲುವಿನ ತಿಮ್ಮಪ್ಪ ಪೂಜಾರಿ ಅವರ ಮನೆವರೆಗೂ ನೀರು ಆವರಿಸಿತು.


ತೋಟಗಳಿಗೆ ನೀರು

ಮುಂಡಾಜೆ ಕಾಯರ್ತೋಡಿ ಪ್ರದೇಶದಲ್ಲಿ ಅಡಿಕೆ ತೋಟಗಳಿಗೆ ನೀರು ನುಗ್ಗಿದೆ. ನಿಡಿಗಲ್‌ ನದಿ ಪಾತ್ರಗಳಲ್ಲಿ, ಪುದುವೆಟ್ಟು ಪ್ರದೇಶದಲ್ಲಿ ನೀರು ತೋಟಕ್ಕೆ ನುಗ್ಗಿದೆ. ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟ ಬಳಿಯೂ ರಸ್ತೆಯ ಕೆಳಗಿನ ಪ್ರದೇಶ ಜಲಾವೃತಗೊಂಡಿತು. ಕಲ್ಮಂಜ ಗ್ರಾಮದ ಬನದಬೈಲುವಿನ ಮೂಡಾಯಿಬೆಟ್ಟು ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾಗಿ ಕೃಷಿಗೆ ಹಾನಿಯಾಗಿದೆ. 


ಉಕ್ಕಿ ಹರಿದ ನದಿಗಳು

ಧರ್ಮಸ್ಥಳ ಹಾಗೂ ನಿಡಿಗಲ್‌ ಭಾಗದಲ್ಲಿ ನೇತ್ರಾವತಿ ನದಿ, ಮುಂಡಾಜೆಯಲ್ಲಿ ಮೃತ್ಯುಂಜಯ ನದಿ, ಬೆಳ್ತಂಗಡಿಯ ಸೋಮಾವತಿ ನದಿ ಸಹಿತ ನೆರಿಯ ಹೊಳೆ, ಬೆಂದ್ರಾಳ ಹೊಳೆಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿ ಮಧ್ಯಾಹ್ನದ ವೇಳೆಗೆ ಪ್ರವಾಹ ಸ್ಥಿತಿ ಇಳಿಮುಖವಾಯಿತು.

ಕಂಬಗಳಿಗೆ ಹಾನಿ
ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್‌ ಕೈಕೊಟ್ಟಿತು. ವೇಣೂರು, ಬಳೆಂಜ, ಮುಂಡೂರು, ಮೇಲಂತಬೆಟ್ಟು, ಕೊಯ್ಯೂರು, ಪುದುವೆಟ್ಟು, ಪಟ್ರಮೆ ಮೊದಲಾದೆಡೆ ಸುಮಾರು 30ಕ್ಕೂ ಅಧಿಕ ವಿದ್ಯುತ್‌ ಕಂಬಗಳು ಧರೆಗುರುಳಿವೆ ಎಂದು ಮೆಸ್ಕಾಂ ಎಂಜಿನಿಯರ್‌ ಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.