ಕರಾವಳಿಯ ಕೆಲವೆಡೆ ಗುಡುಗು ಸಹಿತ ಉತ್ತಮ ಮಳೆ
Team Udayavani, Dec 29, 2019, 6:50 AM IST
ಮಂಗಳೂರು: ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗಿದೆ. ಹೆಬ್ರಿಯಲ್ಲಿ ಸಂಜೆ, ಮೂಡುಬಿದಿರೆಯಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ.
ಮಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಗುಡುಗು, ಮಿಂಚು ಇತ್ತು. ಬಂಟ್ವಾಳ, ಬಿ.ಸಿ.ರೋಡು ಸುತ್ತಮುತ್ತ ತುಂತುರು ಮಳೆಯಾಗಿದೆ. ರಾತ್ರಿ ಬೆಳ್ತಂಗಡಿ, ಮುಂಡಾಜೆ, ನಾರಾವಿ, ಕಲ್ಮಂಜ, ಧರ್ಮಸ್ಥಳ, ಗೇರುಕಟ್ಟೆ, ಉಜಿರೆ, ನಿಡಿಗಲ್, ಮಡಂತ್ಯಾರು. ಗುರುವಾಯನಕೆರೆ, ಬೆಳ್ತಂಗಡಿ, ಗುತ್ತಿಗಾರು, ಸುಳ್ಯ, ಪುತ್ತೂರು, ಬೆಳ್ಳಾರೆ ಪರಿಸರದಲ್ಲಿ ಮಳೆ ಸುರಿದಿದೆ.
ಉಡುಪಿ ಜಿಲ್ಲೆಯ ಪಡುಬಿದ್ರಿ, ಕಾಪು ಪರಿಸರದಲ್ಲಿ ರಾತ್ರಿ ಮಳೆ ಸುರಿದಿದ್ದು ಕುತ್ಯಾರಿನಲ್ಲಿ ನಡೆಯುತ್ತಿರುವ ಯಾಗ ಕಾರ್ಯಕ್ರಮಕ್ಕೆ ತೊಂದರೆಯಾಗಿದೆ.
ಸಿದ್ಧಾಪುರ, ಹಾಲಾಡಿ, ಅಮಾಸೆಬೈಲು, ಗೋಳಿಯಂ ಗಡಿ, ಮಡಾಮಕ್ಕಿ, ಆರ್ಡಿ ಭಾಗದಲ್ಲಿ ಸಂಜೆ ಮಳೆ ಸುರಿದಿದ್ದು ವಿದ್ಯುತ್ ಸ್ಥಗಿತಗೊಂಡಿದೆ.
ಹೆಬ್ರಿಯಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ವಿದ್ಯುತ್ ವ್ಯತ್ಯಯಗೊಂಡಿದೆ. ಹೆಬ್ರಿ ಸೋಮೇಶ್ವರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕೂಡ ಮಳೆಯಾಗಿದೆ.
ಮೂಡುಬಿದಿರೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಗುಡುಗು, ಮಿಂಚಿನೊಂದಿಗೆ ಸಣ್ಣ ಪ್ರಮಾಣದಲ್ಲಿ ಮಳೆ ಸುರಿದು ವರ್ಷಾಂತ್ಯದಲ್ಲಿ ವರ್ಷಧಾರೆಯಾದಂತಾಯಿತು. ಯಾವುದೇ ಹಾನಿ ಸಂಭವಿಸಿಲ್ಲ. 15 ನಿಮಿಷಗಳಲ್ಲೇ ಮಳೆ ನಿಂತ ಕಾರಣ ರಾತ್ರಿಯ ಸಮಾರಂಭಗಳಿಗೆ ಹೆಚ್ಚಿನ ಸಮಸ್ಯೆಯಾಗಲಿಲ್ಲ.
ಹವಾಮಾನ ಇಲಾಖೆಯ ವಾಡಿಕೆಯಂತೆ ಈ ಮಾಸಾಂತ್ಯಕ್ಕೆ ಮಳೆಗಾಲ ಕೊನೆಗೊಳ್ಳುತ್ತಿದ್ದು, ಚಳಿಗಾಲ ಇನ್ನೂ ಆರಂಭಗೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ