3 ದಿನ ಉತ್ತಮ ಮಳೆ ಸಾಧ್ಯತೆ
Team Udayavani, Jun 21, 2019, 9:22 AM IST
ಮಂಗಳೂರು/ಉಡುಪಿ: ಬಂಗಾಲಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಮತ್ತು ರಾಜ್ಯ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಗುರುವಾರ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಮಂಗಳೂರು ನಗರದಲ್ಲಿ ಗುರುವಾರ ಬೆಳಗ್ಗಿನಿಂದ ಉತ್ತಮ ಮಳೆಯಾಗಿದ್ದು, ಸಂಜೆ ವೇಳೆ ಮೋಡಕವಿದ ವಾತಾವರಣ ಇತ್ತು. ಪುತ್ತೂರು, ಉಪ್ಪಿನಂಗಡಿ, ವಿಟ್ಲ, ಕಾಪು, ವೇಣೂರು, ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಬ್ರಹ್ಮಾವರ, ಶಿರ್ವ, ಕಾಪು, ಬೆಳ್ಮಣ್ಣು, ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ.
ಮೂಸೋಡಿಯಲ್ಲಿ ಕಡಲ್ಕೊರೆತ
ಉಪ್ಪಳ ಮೂಸೋಡಿಯಲ್ಲಿ ಕಡಲ್ಕೊರೆತ ಮುಂದುವರಿ ದಿದ್ದು ಮೊಹಮ್ಮದ್ ಮತ್ತು ಸಹೋದರಿ ನಫೀಸ ಅವರ ಮನೆಗಳು ಅಪಾಯದಂಚಿನಲ್ಲಿವೆ. ಮನೆ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇವರ ಒಟ್ಟು 28 ತೆಂಗಿನ ಮರಗಳು ಸಮುದ್ರ ಪಾಲಾಗಿವೆ.
ಸಿಡಿಲು: ಮನೆಗೆ ಹಾನಿ
ನೀರ್ಚಾಲು: ಬುಧವಾರ ರಾತ್ರಿ ಸಿಡಿಲು ಬಡಿದು ಕುಂಟಿಕಾನ ಬಳಿಯ ಮನೆಯೊಂದು ಹಾನಿಗೀಡಾಗಿದೆ.
ಶನಿವಾರ ರೆಡ್ ಅಲರ್ಟ್
ಕಾಸರಗೋಡು/ ಮಣಿಪಾಲ: ಸದ್ಯದ ಪರಿಸ್ಥಿತಿಯಲ್ಲಿ ಮೋಡಗಳ ಚಲನೆಯಂತೆ ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಕೇರಳದಿಂದ ಮಹಾರಾಷ್ಟ್ರದ ತನಕ ಜೂ.21ರಂದು ಹವಾಮಾನ ಇಲಾಖೆಯು “ಆರೆಂಜ್ ಅಲರ್ಟ್’ ಘೋಷಿಸಿದೆ. ಶನಿವಾರ ಜೂ. 22ರಂದು ಕೇರಳ, ಕರ್ನಾಟಕ ಮತ್ತು ಗೋವಾ ತೀರಗಳಲ್ಲಿ ಗರಿಷ್ಠ ಜಾಗೃತಿಯ “ರೆಡ್ ಅಲರ್ಟ್’ ಘೋಷಣೆಯಾಗಿದೆ. ಜೂ. 23ರ ರವಿವಾರ “ಆರೆಂಜ್ ಅಲರ್ಟ್’ ಘೋಷಣೆಯಾಗಿದೆ.
ಆರೆಂಜ್ ಅಲರ್ಟ್ ಘೋಷಿಸಲಾದ ಕೆಲವು ಪ್ರದೇಶಗಳಲ್ಲಿ ಪ್ರಬಲ, ಅತಿ ಪ್ರಬಲ ಮಳೆ ಸುರಿಯುವ ಸಾಧ್ಯತೆಗಳಿವೆ. ಸರಕಾರಿ ವ್ಯವಸ್ಥೆ ಮತ್ತು ಸಾರ್ವಜನಿಕರು ಜಾಗೃತೆ ಪಾಲಿಸುವಂತೆ ಇಲಾಖೆ ತಿಳಿಸಿದೆ.
ಸಂಬಂಧಪಟ್ಟ ಇಲಾಖೆಗಳ ಸಿಬಂದಿ ಅಗತ್ಯವಿರುವ ಸಿದ್ಧತೆ ನಡೆಸುವಂತೆ, ತಾಲೂಕು ಮಟ್ಟದ ನಿಯಂತ್ರಣ ಕೊಠಡಿಗಳನ್ನು ಆರಂಭಿಸುವಂತೆ ಕೇರಳ ರಾಜ್ಯ ದುರಂತ ನಿವಾರಣೆ ಪ್ರಾಧಿಕಾರ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ