ಕರಾವಳಿಯ ಕೆಲವೆಡೆ ಮಳೆ : ಉಡುಪಿ ಜಿಲ್ಲೆಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆ
Team Udayavani, Sep 10, 2022, 8:29 AM IST
ಮಂಗಳೂರು : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ಬೇಗೆ ಹೆಚ್ಚಿತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ: ನಿರಂತರ ಮಳೆ
ಉಡುಪಿ: ಜಿಲ್ಲೆಯಲ್ಲಿ ಮಳೆ ವಾತಾವರಣ ಮುಂದುವರಿದಿದ್ದು, ಸೆ.10ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, 13 ಮನೆಗಳಿಗೆ ಹಾನಿ ಸಂಭವಿಸಿದೆ. ಕಾರ್ಕಳ 1, ಬ್ರಹ್ಮಾವರ 3, ಕುಂದಾಪುರ ಭಾಗದಲ್ಲಿ 9 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಗುರುವಾರ ತಡರಾತ್ರಿ, ಶುಕ್ರವಾರ ಬಿಟ್ಟುಬಿಟ್ಟು ಧಾರಕಾರ ಮಳೆ ಸುರಿದಿದೆ. ಕುಂದಾಪುರ, ಕಾರ್ಕಳ, ಕಾಪು, ಉಡುಪಿ, ಬೈಂದೂರು ಸುತ್ತಮುತ್ತ ಕೆಲವೆಡೆ ರಾತ್ರಿ ವೇಳೆ ಹೆಚ್ಚು ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ, ಪರ್ಕಳ ಸುತ್ತಮುತ್ತ ಮಧ್ಯಾಹ್ನ ಬಳಿಕ ಧಾರಾಕಾರ ಮಳೆ ಸುರಿದಿದ್ದು, ಕೆಲವು ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು.
ಇದನ್ನೂ ಓದಿ : ಟಾಟಾದಿಂದ ಐಫೋನ್ ಉತ್ಪಾದನೆ? ವಿಸ್ಟ್ರಾನ್ ಕಾರ್ಪ್ ಜತೆಗೆ ಮಾತುಕತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ