ವ್ಯಾಪಕ ಮಳೆ: ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆ
6.40 ಮೀಟರ್ ಗೆ ಏರಿದ ನದಿ ನೀರಿನ ಮಟ್ಟ ; ಅಪಾಯದ ಮಟ್ಟ 8.50 ಮೀಟರ್
Team Udayavani, Aug 4, 2020, 10:44 PM IST
ಬಂಟ್ವಾಳ: ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಇದರ ಪರಿಣಾಮ ಕರಾವಳಿಯ ಜೀವನದಿ ನೇತ್ರಾವತಿ ಯಲ್ಲಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ.
ಮಂಗಳವಾರ ರಾತ್ರಿ 9.30ರ ಸುಮಾರಿಗೆ ಬಂಟ್ವಾಳದಲ್ಲಿ ನೀರಿನ ಮಟ್ಟ 6.40 ಮೀಟರ್ ಗೆ ಏರಿಕೆಯಾಗಿದೆ.
ಬಂಟ್ವಾಳದಲ್ಲಿ ನೀರಿನ ಅಪಾಯಕಾರಿ ಮಟ್ಟ 8.50 ಮೀಟರ್ ಆಗಿದ್ದು, ಈ ಮಟ್ಟಕ್ಕೆ ನೀರು ಏರಿಕೆಯಾದಲ್ಲಿ ತಾಲೂಕಿನ ಸಾಕಷ್ಟು ಪ್ರದೇಶ ಮುಳುಗಡೆಯಾಗಲಿದೆ.
ಸದ್ಯಕ್ಕೆ ನೀರಿನ ಮಟ್ಟ ಅಪಾಯಕಾರಿ ಮಟ್ಟದಿಂದ ಸಾಕಷ್ಟು ಕೆಳಗಿದ್ದರೂ, ಮಳೆ ತ್ರೀವ್ರಗೊಂಡಲ್ಲಿ ನೀರಿನ ಮಟ್ಟವೂ ಏರಿಕೆಯಾಗಬಹುದೆಂಬ ಭಯ ಸ್ಥಳಿಯರಲ್ಲಿ ಮೂಡಿದೆ.
ಬಂಟ್ವಾಳದ ಗೂಡಿನಬಳಿ ಪ್ರದೇಶದಲ್ಲಿ ಮಾಪನದ ಮೂಲಕ ಬಂಟ್ವಾಳ ತಾಲೂಕು ಆಡಳಿತದಿಂದ ನೀರಿನ ಮಟ್ಟ ಪರಿಶೀಲಿಸಲಾಗುತ್ತಿದ್ದು, ಮಂಗಳವಾರ ಬೆಳಿಗ್ಗೆ ನದಿ ನೀರಿನ ಮಟ್ಟ 5.9 ಮೀಟರ್ ಇದ್ದು, ಸಾಯಂಕಾಲದ ವೇಳೆಗೆ 6 ಮೀಟರ್ ಗೆ ಏರಿಕೆಯಾಗಿತ್ತು. ಪ್ರಸ್ತುತ ರಾತ್ರಿ 9.30ರ ವೇಳೆಗೆ 6.40 ಮೀಟರ್ ಗೆ ನದಿ ನೀರಿ ಮಟ್ಟ ಏರುತ್ತಿರುವುದು ನದಿಗೆ ಭಾರೀ ಪ್ರಮಾಣದಲ್ಲಿ ನೀರಿನ ಹರಿವನ್ನು ಸೂಚಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್