ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ


Team Udayavani, Oct 17, 2021, 6:40 AM IST

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಮಂಗಳೂರು/ಉಡುಪಿ:ಕರಾವಳಿಯಾದ್ಯಂತ ಶನಿವಾರ ಅಪರಾಹ್ನ ಮತ್ತು ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ರಾತ್ರಿ ವೇಳೆಗೆ ಭಾರೀ ಮಳೆ ಸುರಿದಿದ್ದು, ವಿವಿಧ ಕಡೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಯಿತು.

ಸುಳ್ಯ, ಪುತ್ತೂರು ವಿಟ್ಲದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ತಾಲೂಕುಗಳಲ್ಲಿ ಹಗಲು ಹೊತ್ತು ಮೋಡ ಕವಿದ ವಾತಾವರಣ ಇತ್ತು. ಉಡುಪಿ ಜಿಲ್ಲೆಯಲ್ಲಿ ಹಗಲಿನಲ್ಲಿ ಬಿಸಿಲಿದ್ದರೂ ಸಂಜೆಯಾಗುತ್ತಿದ್ದಂತೆ ಉಡುಪಿ, ಮಣಿಪಾಲ, ಕಾಪು, ಶಿರ್ವ, ಕಟಪಾಡಿ, ಕಲ್ಯಾಣಪುರ ಸಂತೆಕಟ್ಟೆ ಸೇರಿದಂತೆ ವಿವಿಧೆಡೆ ಭಾರೀ ಮಳೆ ಬಂದಿದೆ. ನಗರದ ರಸ್ತೆಗಳಲ್ಲಿಯೂ ಭಾರೀ ಪ್ರಮಾಣ ದಲ್ಲಿ ನೀರು ಹರಿಯಿತು. ವಾರಾಂತ್ಯ ಮತ್ತು ಭಾರೀ ಮಳೆಯ ಕಾರಣ ಉಡುಪಿಯ ಕಲ್ಸಂಕ, ಕರಾವಳಿ ಜಂಕ್ಷನ್‌ ಮೊದಲಾದೆಡೆ ವಾಹನಗಳ ದಟ್ಟಣೆ ಹೆಚ್ಚಿಗೆ ಕಂಡುಬಂದು ಟ್ರಾಫಿಕ್‌ ಜಾಮ್‌ ಆಯಿತು. ಕಾರ್ಕಳ ಮತ್ತು ಕುಂದಾಪುರ ತಾಲೂಕಿನಲ್ಲಿ ಲಘು ಪ್ರಮಾಣದಲ್ಲಿ ಮಳೆಯಾಯಿತು.

ಬಂಟ್ವಾಳ, ಧರ್ಮಸ್ಥಳ: ಹೆದ್ದಾರಿಯಲ್ಲಿ ನೀರು ಬಂಟ್ವಾಳ ತಾ| ಕೇಂದ್ರ ಬಿ.ಸಿ. ರೋಡು ಸೇರಿದಂತೆ ತಾಲೂಕಿನ ಹಲವೆಡೆ ಶನಿವಾರ ರಾತ್ರಿ ಸಿಡಿಲು ಸಹಿತ ಉತ್ತಮ ಮಳೆಯಾಗಿದ್ದು, ಕೈಕಂಬದಿಂದ ಫರಂಗಿಪೇಟೆ ವರೆಗೆ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಸುಗಮ ವಾಹನ ಅಡಚಣೆಯಾ ಯಿತು. ಧರ್ಮಸ್ಥಳ ಸ್ನಾನ ಘಟ್ಟ ದಿಂದ ಮುಂದೆ ಸಾಗುವಾಗ ಮಣ್ಣ ಪಳ್ಳದ ಕಿರು ಸೇತುವೆಯ ಮೇಲೆ ನೀರು ಹರಿದ ಕಾರಣ ಒಂದೂವರೆ ತಾಸಿಗೂ ಅಧಿಕ ಸಮಯ ರಸ್ತೆ ಸಂಚಾರಕ್ಕೆ ತಡೆಯಾಯಿತು.

ಅಂಗಡಿಗಳಿಗೆ ನೀರು
ರಾತ್ರಿ ವೇಳೆ ದಿಢೀರ್‌ ಮಳೆ ಬಂದ ಕಾರಣ ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಕೊಟ್ಟಾರ, ಫೋರ್ತ್‌ಮೈಲ್‌ ಪ್ರದೇಶ ಗಳಲ್ಲಿ ಚ‌ರಂಡಿಯಲ್ಲಿ ನೀರು ತುಂಬಿ ಅಂಗಡಿಗಳಿಗೆ ನುಗ್ಗಿದೆ.

ಇದನ್ನೂ ಓದಿ:ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಪಡೀಲ್‌ ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ್ದು, ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ಕೊಡಿಯಾಲಬೈಲ್‌ ಅಕ್ಕಪಕ್ಕದ ಕೆಲವು ಭಾಗಗಳಲ್ಲಿ ಚರಂಡಿ ತುಂಬಿ ರಸ್ತೆಯಲ್ಲಿ ನೀರು ಹರಿದಿದೆ. ತಡರಾತ್ರಿ ವರೆಗೂ ಮಳೆ ಮುಂದುವರಿದಿತ್ತು.

ಮತ್ತಷ್ಟು ಮಳೆ ಸಂಭವ
ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕರಾವಳಿ ಸಹಿತ ರಾಜ್ಯದ ವಿವಿಧೆಡೆ ರವಿವಾರವೂ ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

3 ವಿಮಾನ ಇಳಿಯದೆ ವಾಪಸ್‌ ಬೆಂಗಳೂರಿಗೆ
ಮಂಗಳೂರಿಗೆ ಶನಿವಾರ ಸಂಜೆ 7 ಗಂಟೆಯಿಂದ ರಾತ್ರಿ 9ರ ನಡುವೆ ಚೆನ್ನೈ, ಹೈದರಾಬಾದ್‌ ಮತ್ತು ಬೆಂಗಳೂರಿನಿಂದ ಆಗಮಿಸಿದ 3 ವಿಮಾನಗಳು ಮಳೆ ಕಾರಣ ಇಳಿಯಲಾಗದೆ ಬೆಂಗಳೂರಿಗೆ ವಾಪಸಾಗಿವೆ.

ಪರಿಸ್ಥಿತಿ ಯಥಾ ಸ್ಥಿತಿಗೆ ಮರಳಿದರೆ ತಡರಾತ್ರಿ ಈ ವಿಮಾನಗಳು ಮಂಗಳೂರಿಗೆ ಹಿಂದಿರುಗುವ ಸಾಧ್ಯತೆ ಇದೆ. ಇಲ್ಲದಿದ್ದರೆ ರವಿವಾರ ಬರಲಿವೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಶಾರದೆ ವಿಸರ್ಜನೆಗೂ ಸಮಸ್ಯೆ
ಮಂಗಳೂರು ರಥಬೀದಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠದ ವಸಂತ ಮಂಟಪದಲ್ಲಿ 99ನೇ ವರ್ಷದ ಶಾರದ ಮಹೋತ್ಸವದಲ್ಲಿ ಪೂಜಿಸಿದ ಶಾರದಾ ಮಾತೆಯ ವಿಸರ್ಜನಾ ಮೆರವಣಿಗೆ ಶನಿವಾರ ರಾತ್ರಿ ಜರಗಿತು. ಭಾರೀ ಮಳೆಯಿಂದಾಗಿ ಮೆರವಣಿಗೆ ವಿಳಂಬವಾಗಿ ಸಾಗಿತು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.